AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು

ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ(Cottonpet Police Station)ವ್ಯಾಪ್ತಿಯಲ್ಲಿ ಮಗಳೇ ಪ್ರಿಯಕರನೊಟ್ಟಿಗೆ ಸೇರಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ಕುರಿತು ತಂದೆಯೇ ಮಗಳ ವಿರುದ್ದ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ರಮಕ್ಕೆ ಮನವಿ ಸಲ್ಲಿಸಿದ್ದಾರೆ.

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:May 15, 2024 | 8:18 PM

Share

ಬೆಂಗಳೂರು, ಮೇ.15: ಪ್ರಿಯಕರನ ಜೊತೆಗೂಡಿ ಯುವತಿ ಒಂದು ಕೋಟಿ ರೂ. ಹಣ ಕದ್ದ ಆರೋಪ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ(Cottonpet Police Station)ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮನ ಜೊತೆಗೂಡಿ ಮನೆಯಲ್ಲಿದ್ದ ಹಣವನ್ನ ಕಳ್ಳತನ ಮಾಡಿ ಮದುವೆಯಾಗಿರುವ ಬಗ್ಗೆ ಯುವತಿ ತಂದೆ ಬಟ್ಟೆ ವ್ಯಾಪಾರ ಮಾಡುವ ಉದ್ಯಮಿ ಶರವಣನ್ ಅವರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಕಳೆದ ಎಪ್ರಿಲ್​ 21 ನೇ ತಾರೀಖಿನಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗಳ ವಿರುದ್ದ ಕ್ರಮಕ್ಕೆ ತಂದೆ ಮನವಿ‌

ಇನ್ನು ಯುವತಿ ಕಣ್ಮರೆಯಾಗಿದ್ದ ಹಿನ್ನಲೆ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ಬಳಿಕ ಯುವತಿ ಪ್ರಿಯಕರನ ಜೊತೆಗೂಡಿ ಹೋಗಿದ್ದ ಮಾಹಿತಿ ತಿಳಿದು ಪೊಲೀಸರನ್ನು ಸಂಪರ್ಕ ಮಾಡಿದ್ದಾರೆ. ಆಗ ಯುವತಿ ಮದುವೆಯಾಗಿದ್ದು, ಪೋಷಕರ ಜೊತೆ ಬರೋದಿಲ್ಲವೆಂದು ಪೊಲೀಸರ ಮುಂದೆ ಹೇಳಿದ್ದಾಳೆ. ಇದಾದ ಒಂದು ವಾರದ ಬಳಿಕ ಮನೆಯಲ್ಲಿನ ಲಾಕರ್ ಪರಿಶೀಲಿಸಿದಾಗ ಒಂದು ಕೋಟಿ ನಗದು ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ನಿವೇಶನ ಖರೀದಿಗೆ ಈ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಇದ್ದು, ಸದ್ಯ ಕಳ್ಳತನ ಮಾಡಿದ ಆರೋಪದ ಮೇಲೆ ಮಗಳ ವಿರುದ್ದ ಕ್ರಮಕ್ಕೆ ತಂದೆ ಮನವಿ‌ ಸಲ್ಲಿಸಿದ್ದಾರೆ. ಈ ಕುರಿತು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಉಡುಪಿ: ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರಿಂದ ಧರ್ಮದೇಟು

ಶಾರ್ಟ್ ​ಸರ್ಕ್ಯೂಟ್​ನಿಂದಾಗಿ ಹೊತ್ತಿ ಉರಿದ ಮನೆ

ಕಲಬುರಗಿ: ತಾಲೂಕಿನ ಆಲಗೂಡ ಗ್ರಾಮದಲ್ಲಿ ಶಾರ್ಟ್ ​ಸರ್ಕ್ಯೂಟ್​ನಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಈ ಹಿನ್ನಲೆ ಸೈಬಣ್ಣ ಎಂಬುವವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡದಲ್ಲಿ ಮನೆಯಲ್ಲಿದ್ದ 20 ಸಾವಿರ ನಗದು, ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಈ ಕುರಿತು ಕಲಬುರಗಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಇದ್ದ ಮನೆಯನ್ನು ಕಳೆದುಕೊಂಡು ಸೈಬಣ್ಣ ಕುಟುಂಬ ಅತಂತ್ರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Wed, 15 May 24

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!