AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಕೊಲೆ ಪ್ರಕರಣ; ಫಯಾಜ್ ವಿರುದ್ದ ವಕಾಲತ್ತು ವಹಿಸಬಾರದೆಂದು ವಕೀಲರ ಸಂಘಕ್ಕೆ ಮನವಿ

ಹುಬ್ಬಳ್ಳಿಯಲ್ಲಿ(Hubballi) ಕಾಲೇಜು ವಿದ್ಯಾರ್ಥಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಬೃಹತ್​ ಹೋರಾಟಗಳು ನಡೆಯುತ್ತಿವೆ. ಈ ಮಧ್ಯೆ ಆರೋಪಿ ಫಯಾಜ್ ವಿರುದ್ದ ಯಾರೂ ವಕಾಲತ್ತು ವಹಿಸಬಾರದು ಎಂದು ಅಖಿಲ ಭಾರತ ವೀರಶೈವ ಮಾಹಸಭಾದಿಂದ(All India Veerashaiva Mahasabha) ವಕೀಲರ ಸಂಘಕ್ಕೆ ಮನವಿ ಸಲ್ಲಿಸಿದ್ದಾರೆ.

ನೇಹಾ ಕೊಲೆ ಪ್ರಕರಣ; ಫಯಾಜ್ ವಿರುದ್ದ ವಕಾಲತ್ತು ವಹಿಸಬಾರದೆಂದು ವಕೀಲರ ಸಂಘಕ್ಕೆ ಮನವಿ
ಫಯಾಜ್ ವಿರುದ್ದ ವಕಾಲತ್ತು ವಹಿಸಬಾರದೆಂದು ವಕೀಲರ ಸಂಘಕ್ಕೆ ಮನವಿ ಮನವಿ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 20, 2024 | 3:00 PM

Share

ಹುಬ್ಬಳ್ಳಿ, ಏ.20: ಹುಬ್ಬಳ್ಳಿಯಲ್ಲಿ(Hubballi) ಕಾಲೇಜು ವಿದ್ಯಾರ್ಥಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ವಿರುದ್ದ ಯಾರೂ ವಕಾಲತ್ತು ವಹಿಸಬಾರದು ಎಂದು ಅಖಿಲ ಭಾರತ ವೀರಶೈವ ಮಾಹಸಭಾದಿಂದ(All India Veerashaiva Mahasabha) ವಕೀಲರ ಸಂಘಕ್ಕೆ ಮನವಿ ಸಲ್ಲಿಸಿದ್ದಾರೆ. ಜೊತೆಗೆ ಫಯಾಜ್​ಗೆ ಮರಣ ದಂಡನೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ವಿವರ

ಪ್ರತಿಷ್ಠಿತ ಕೆಎಲ್​ಇ ಸಂಸ್ಥೆ ಬಿವಿಬಿ ಕ್ಯಾಂಪಸ್​ನಲ್ಲಿ ಎಂಸಿಎ ಮೊದಲ ವರ್ಷದ ವಿದ್ಯಾರ್ಥಿನಿಯನ್ನು, ಕಾಲೇಜಿನ ಮಾಜಿ ವಿದ್ಯಾರ್ಥಿ ಫಯಾಜ್ ಎನ್ನುವ ಯುವಕ ಮನಬಂದಂತೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ ನೇಹಾಳನ್ನು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರು ಎಳೆದಿದ್ದಾಳೆ. ಮೃತ ನೇಹಾ ಹಿರೇಮಠ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಮೊದಲ ಮಗಳು. ಕೊಲೆ ನಡೆದ ಸುದ್ದಿ ಕುಟುಂಬದ ಸದಸ್ಯರಿಗೆ ಬರಸಿಡಿಲಿನಂತೆ ಬಡಿದಪ್ಪಳಿಸಿದೆ. ಕೊಲೆ ಆರೋಪಿಯನ್ನು ಗುಂಡಿಟ್ಟು ಕೊಲ್ಲಿ, ಇಲ್ಲವೆ ಗಲ್ಲಿಗೇರಿಸಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ತಂದೆ ಕೊಲೆಗೂ ಯತ್ನಿಸಿದ್ದ ಫಯಾಜ್, ಕ್ಷಮೆ ಬೇಡ ಗಲ್ಲಿಗೇರಿಸಿ ಎಂದ ನಿರಂಜನ ಹಿರೇಮಠ

ಮೃತ ನೇಹಾ ಬಿವಿಬಿಯಲ್ಲಿ ಪ್ರಥಮ ವರ್ಷದ ಎಂಸಿಎ ಓದುತ್ತಿದ್ದಳು. ಕೊಲೆ ಮಾಡಿರುವ ಫಯಾಜ್ ಮತ್ತು ನೇಹಾ ಬಿಸಿಎ ಸಹಪಾಠಿಗಳಾಗಿದ್ದರು. ಫಯಾಜ್ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮನವಳ್ಳಿಯ ನಿವಾಸಿ. ಫಯಾಜ್ ತಂದೆ ಬಾಬಾ ಸಾಹೇಬ್, ತಾಯಿ ಮುಮತಾಜ್ ಇಬ್ಬರು ಸರ್ಕಾರಿ ಶಾಲೆಯ ಶಿಕ್ಷಕರು. ಬಿಸಿಎ ಕೊನೆಯ ವರ್ಷದಲ್ಲಿ ಫಯಾಜ್ ಪೇಲ್ ಆಗಿದ್ದ. ಫಯಾಜ್ ಮೊದಲಿಂದಲೂ ನೇಹಾಳನ್ನು ಪ್ರೀತಿ ಮಾಡತ್ತಿದ್ದ. ಆದರೆ, ನೇಹಾ ಮಾತ್ರ ಫಯಾಜ್ ಪ್ರೀತಿ ಒಪ್ಪಿರಲಿಲ್ಲ. ಆದ್ರೂ ನೇಹಾ ಬೆನ್ನು ಬಿದ್ದ ಫಯಾಜ್ ಪ್ರೀತಿ ಮಾಡುವಂತೆ ಸತಾಯಿಸುತ್ತಿದ್ದ ಎನ್ನಲಾಗಿದೆ.

ಇದನ್ನು ತಿಳಿದ ನೇಹಾ ಮನೆಯವರು ಐದು ತಿಂಗಳ ಹಿಂದೆ ಕರೆದು ಬುದ್ದಿವಾದ ಹೇಳಿ ಕಳುಸಿದ್ದರು. ಫಯಾಜ್ ನ ಪೋಷಕರ ಗಮನಕ್ಕೂ ತಂದಿದ್ದರು. ಅಲ್ಲದೆ ನೇಹಾ ಸುರಕ್ಷತೆ ದೃಷ್ಟಿಯಿಂದ ಕಾಲೇಜಿಗೆ ಕುಟುಂಬಸ್ಥರೇ ಕಾರ್ ನಲ್ಲಿ ಫಿಕಪ್ ಡ್ರಾಪ್ ಮಾಡುತ್ತಿದ್ದರು. ಇದರಿಂದ ಸ್ವಲ್ಪ ದಿನ ಸೈಲೆಂಟ್ ಆಗಿದ್ದ ಫಯಾಜ್ ಗುರುವಾರ ಸಂಜೆ 4.45 ರ ವೇಳೆಗೆ ಬಿವಿಬಿ ಕ್ಯಾಂಪಸ್ ಗೆ ನುಗ್ಗಿ ನೇಹಾಳ ಹತ್ಯೆ ಮಾಡಿ ಪರಾರಿಯಾಗಲು ಯತ್ನಸಿದ್ದಾನೆ. ಪೊಲೀಸರು ಮತ್ತು ಸಾರ್ವಜನಿಕರು ಸಕಾಲದಲ್ಲಿ ಫಯಾಜ್ ನನ್ನನ್ನು ಹಿಡಿದ್ದಾರೆ.

ಇದನ್ನೂ ಓದಿ:ಫಯಾಜ್ ನನ್ನು ಜೈಲಿಂದ ಹೊರತಂದು ಜನರ ಕೈಗೆ ಒಪ್ಪಿಸಬೇಕು: ಗೀತಾ ಹಿರೇಮಠ, ನೇಹಾ ಹಿರೇಮಠ ತಾಯಿ

ನೇಹಾ ಕೊಲೆ ಘಟನೆಯನ್ನು ಅಂಜುಮನ್ ಸಂಸ್ಥೆ ಸೇರಿ ವಿವಿಧ ಪಕ್ಷಗಳು ಖಂಡಿಸಿವೆ. ಫಯಾಜ್ನನ್ನ ನಮಗೆ ಕೊಡಿ. ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಆಗ್ರಹಿಸಿದ್ದಾರೆ. ಫಯಾಜ್ನನ್ನ ಎನ್ಕೌಂಟರ್ ಮಾಡಿ, ಇಲ್ಲವೆ ಗಲ್ಲು ಶಿಕ್ಷೆಗೆ ಗುರಿಪಡಿಸಿ. ಇಂತಹ ಮನಸ್ಥಿತಿ ಇದ್ದವರನ್ನು ಸುಮ್ಮನೇ ಬಿಡಬಾರದ. ಅಮಾಯಕ ನೇಹಾ ಇಂದು ಕೊಲೆಯಾಗಿದ್ದಾಳೆ. ಈ ರೀತಿಯ ಘಟನೆಗಳು ನಡೆಯಬಾರದೆಂದ್ರೆ ಕಟ್ಟುನಿಟ್ಟಿನ ಕಾನೂನು ಅಗತ್ಯ. ಅವನ ಮೇಲೆ ಉಗ್ರವಾದ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಒಟ್ಟಿನಲ್ಲಿ ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಾಳಿ ಬದುಕ ಬೇಕಿದ್ದ ಅಮಾಯಕ ಜೀವ ಬಲಿಯಾಗಿದೆ. ಇದ್ರ ಹಿಂದೆ ಲವ್ ಜಿಹಾದ್ ದುರುದ್ದೇಶ ಇತ್ತೆಂಬ ಆರೋಪವೂ ಕೇಳಿಬಂದಿದೆ. ಸದ್ಯಕ್ಕೆ ಪಾಗಲ್ ಪ್ರೇಮಿ ಬಂಧನವಾಗಿದ್ದು, ಪೊಲೀಸರು ವಿಚಾರಣೆ ನಡೆಸಿ ಜೈಲಿಗಟ್ಟಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sat, 20 April 24

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ