ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಕಾರಣ ಬಿಚ್ಚಿಟ್ಟ ಹತ್ಯೆಯಾದ ಅಂಜಲಿ ತಂಗಿ ಯಶೋಧಾ

ಇಂದು (ಮೇ 19) ಬೆಳಿಗ್ಗೆ ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋಧ, ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಬಳಿಕ ಮಾತನಾಡಿದ ಯಶೋಧಾ, ಆತ್ಮಹತ್ಯೆಗೆ ಯತ್ನಿಸಿದ ಕಾರಣ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಕಾರಣ ಬಿಚ್ಚಿಟ್ಟ ಹತ್ಯೆಯಾದ ಅಂಜಲಿ ತಂಗಿ ಯಶೋಧಾ
ಅಂಜಲಿ ತಂಗಿ ಯಶೋಧಾ
Edited By: ಕಿರಣ್ ಹನುಮಂತ್​ ಮಾದಾರ್

Updated on: May 19, 2024 | 6:30 PM

ಹುಬ್ಬಳ್ಳಿ, ಮೇ.19: ಮನೆಗೆ ನುಗ್ಗಿ ಅಂಜಲಿ ಅಂಬಿಗೇರ(Anjali Ambiger) ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.19) ಆಕೆಯ ತಂಗಿ ಯಶೋಧಾ(Yashoda) ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಆತ್ಮಹತ್ಯೆಗೆ ನಿಖರ ಕಾರಣ ಬಿಚ್ಚಿಟ್ಟಿದ್ದಾರೆ. ‘ನನ್ನ ಅಕ್ಕ ಅಂಜಲಿ ಹತ್ಯೆ ಕಣ್ಣಾರೆ ಕಂಡು ಮನಸ್ಸಿಗೆ ನೋವಾಗಿತ್ತು. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದೆ ಎಂದು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಬಳಿಕ ಯಶೋಧಾ ಹೇಳಿದ್ದಾರೆ.

ಪೊಲೀಸರಿಗಿಂತ ನನಗೆ ನಿರಂಜನ್‌ ಮತ್ತು ಅನೂಪ್ ಅಂಕಲ್ ಮೇಲೆ ನಂಬಿಕೆ ಇದೆ. ನ್ಯಾಯಾಲಯದ ಆರ್ಡರ್ ಎಂದು ಆರೋಪಿಗೆ ಚಿಕಿತ್ಸೆ ಕೊಡುತ್ತಿದ್ದಾರಂತೆ. ಜೊತೆಗೆ ಆರೋಪಿ ವಿಶ್ವ ನಮ್ಮ ಅಕ್ಕನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾನಂತೆ. ಹೀಗಾಗಿ ಮನಸ್ಸಿಗೆ ನೋವಾಗಿದೆ, ಬರೀ ಸುಳ್ಳು ಹೇಳುತ್ತಿದ್ದಾನೆ. ಆತನಿಗೆ ಗಲ್ಲು ಶಿಕ್ಷೆ ಕೊಡಿ, ಇಲ್ಲವೇ ಎನ್‌ಕೌಂಟರ್ ಮಾಡಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಇನ್ನು ಘಟನೆ ಕುರಿತು ಯಶೋಧಾ ಅಜ್ಜಿ ಗಂಗಮ್ಮ ಪ್ರತಿಕ್ರಿಯಿಸಿ, ‘ಅವಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾಳೆ. ನಮ್ಮ ಜೊತೆ ಇಡೀ ಸಮಾಜ ನಿಂತಿದೆ. ಇನ್ನು ಪೊಲೀಸರು ಆರೋಪಿಗೆ ಚಿಕಿತ್ಸೆ ಕೊಡಿಸಿ ಆತನನ್ನು ಗುಣಮುಖನನ್ನಾಗಿ ಮಾಡಲು ಯತ್ನಿಸ್ತಿದ್ದಾರೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಹೀಗೆ ಮಾಡಿದ್ದಾಳೆ. ನಿನ್ನೆ ಬೆಳಗ್ಗೆಯಿಂದ ಆಕೆ ಮಾನಸಿಕವಾಗಿ ಕುಗ್ಗಿದ್ದಳು. ರಾತ್ರಿ ಮನೆಯಲ್ಲಿದ್ದ ಫಿನಾಯಿಲ್ ಕುಡಿದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದೆವು. ಇದೀಗ ಯಶೋಧಾ ಗುಣಮುಖಳಾಗುತ್ತಿದ್ದಾಳೆ ಎಂದರು.

ಘಟನೆ  ವಿವರ

ಇಂದು (ಮೇ 19) ಬೆಳಿಗ್ಗೆ ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋಧ, ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.  ಬಳಿಕ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us