AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ

ಧಾರವಾಡದ ಅಮ್ಮಿನಬಾವಿ ಬಳಿ ಚಲಿಸುತ್ತಿದ್ದ ಸರ್ಕಾರಿ ಬಸ್‌ನ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಎಂಟು ಜನ ಗಾಯಗೊಂಡಿದ್ದಾರೆ. ಇತ್ತ ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿದ ಕಾರು ಹರಿದು ಯುವಕನೊಬ್ಬ ಅಸುನೀಗಿದ್ದಾನೆ. ಮತ್ತೋರ್ವ ಮಹಿಳೆಯ ಕಾಲು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ
ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿImage Credit source: Tv9 Kannada
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jul 22, 2026 | 4:21 PM

Share

ಮುಖ್ಯಾಂಶಗಳು

  • ಮುಂಭಾಗದ ಟೈರ್ ಸ್ಫೋಟವಾಗಿ ಸರ್ಕಾರಿ ಬಸ್ ಪಲ್ಟಿ
  • ಧಾರವಾಡದ ಅಮ್ಮಿನಬಾವಿ ಗ್ರಾಮದ ಬಳಿ ಅಪಘಾತ
  • ಮಹಿಳೆ ಸಾವು, ಎಂಟು ಜನ ಪ್ರಯಾಣಿಕರಿಗೆ ಗಾಯ

ಧಾರವಾಡ/ಚಿತ್ರದುರ್ಗ, ಜುಲೈ 22: ಚಲಿಸುತ್ತಿರುವಾಗಲೇ ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 8 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಗಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್​​ನ ಗ್ಲಾಸ್​​ಗಳು ಪೀಸ್​​ ಪೀಸ್​​

ಟೈರ್ ಸ್ಫೋಟಗೊಂಡ ಪರಿಣಾಮ ಧಾರವಾಡದಿಂದ ಮಿರಜ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​​ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿ ಪಲ್ಟಿಯಾಗಿದೆ. ಘಟನೆಯಲ್ಲಿ ಮಹಿಳೆಯರು, ವೃದ್ಧರು ಸೇರಿ ಸುಮಾರು 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅಪಘಾತ ನಡೆದ ಕೂಡಲೇ ಇತರ ವಾಹನಗಳ ಸವಾರರು ಮತ್ತು ಸ್ಥಳೀಯರು ಬಸ್​​ನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಅಪಘಾತದ ತೀವ್ರತೆಗೆ ಬಸ್​​ನ ಗ್ಲಾಸ್​​ಗಳು ಪೀಸ್​​ ಪೀಸ್​​ ಆಗಿದ್ದು, ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ!

ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಕಾರು

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವರು ಅಸುನೀಗಿದ್ದಾರೆ. ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್(30) ಮೃತ ದುರ್ದೈವಿಯಾಗಿದ್ದು, ಮತ್ತೋರ್ವ ಮಹಿಳೆಯ ಕಾಲು ಮುರಿದಿದೆ. ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಫುಟ್​ಪಾತ್​ಗೆ ಕಾರು ನುಗ್ಗಿದ್ದು, ಘಟನೆ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:14 pm, Wed, 22 July 26

Follow Us