AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದು ನನ್ನ ಕ್ಯಾಂಪಸ್, ನನ್ನ ವಿಭಾಗ ಎಂಬ ಮನೋಭಾವ ‌ಬೆಳಸಿಕೊಳ್ಳಿ : ಕವಿವಿ ಕುಲಪತಿ ಕೆ.ಬಿ.ಗುಡಸಿ

ಇದು ನನ್ನ ಕ್ಯಾಂಪಸ್, ನನ್ನ ವಿಭಾಗ ಎಂಬ ಮನೋಭಾವ ‌ಬೆಳಸಿಕೊಳ್ಳಿ ಎಂದು ರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಹೇಳಿದರು.

ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದು ನನ್ನ ಕ್ಯಾಂಪಸ್, ನನ್ನ ವಿಭಾಗ ಎಂಬ ಮನೋಭಾವ ‌ಬೆಳಸಿಕೊಳ್ಳಿ : ಕವಿವಿ ಕುಲಪತಿ ಕೆ.ಬಿ.ಗುಡಸಿ
ಕರ್ನಾಟಕ ವಿಶ್ವವಿದ್ಯಾಲಯ ಎನ್.ಎಸ್.ಎಸ್ ವಿದ್ಯಾರ್ಥಿಗಳು
TV9 Web
| Updated By: ವಿವೇಕ ಬಿರಾದಾರ|

Updated on: May 22, 2022 | 5:35 PM

Share

ಧಾರವಾಡ: ಇದು ನನ್ನ ಕ್ಯಾಂಪಸ್, ನನ್ನ ವಿಭಾಗ ಎಂಬ ಮನೋಭಾವ ‌ಬೆಳಸಿಕೊಂಡು ನಿಮ್ಮ ವಿಭಾಗಗಳ ಸುತ್ತಮುತ್ತ ಮತ್ತು ವಿಶ್ವವಿದ್ಯಾಲಯದ ಕ್ಯಾಂಪಸ್​ನ್ನು ಸ್ವಚ್ಛಗೊಳಿಸುವ ಮೂಲಕ ವಿಶ್ವವಿದ್ಯಾಲಯದ ಕ್ಯಾಂಪಸನಲ್ಲಿ ನಿರ್ಮಲ ವಾತಾವರಣವನ್ನು ನಿರ್ಮಿಸಲು ಮನಸ್ಸು ಮಾಡಿ ಎಂದು ಕರ್ನಾಟಕ ವಿಶ್ವವಿದ್ಯಾಲಯದ (Karnatak University, Dharwad) ಕುಲಪತಿ ಪ್ರೊ.ಕೆ.ಬಿ.ಗುಡಸಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸೂಚನೆ ನೀಡಿದರು.

ಕರ್ನಾಟಕ ವಿಶ್ವವಿದ್ಯಾಲಯದ ಎನ್.ಎಸ್.ಎಸ್.ಕೋಶ (NSS) ಮತ್ತು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಸಹಯೋಗದಲ್ಲಿ ಸ್ವಚ್ಛ ಭಾರತ ಅಭಿಯಾನ ಅಂಗವಾಗಿ ಆಯೋಜಿಸಿದ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಕುಲಪತಿಗಳು ಸಸಿನೆಟ್ಟು ಮಾತನಾಡಿದ ಅವರು ಸ್ವಚ್ಚತಾ ಅಭಿಯಾನ ದಂತಹ ಸಮುದಾಯ ಆಧಾರಿತ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಲು ಸಾಧ್ಯ ಎಂದು ಹೇಳಿದರು.

ಇದನ್ನು ಓದಿ: ಇನ್​ಸ್ಟಾಗ್ರಾಂ ಲೈವ್​ ಬರಲು ಮುಂದಾದ ಮಡೋನ್ನಗೆ ಶಾಕ್; ನಗ್ನ ಫೋಟೋಗಳನ್ನು ಹಂಚಿಕೊಂಡಿದ್ದ ಪಾಪ್ ತಾರೆಗೆ ನಿರ್ಬಂಧದ ಬರೆ

ಇದನ್ನೂ ಓದಿ
Image
Assam ಅಸ್ಸಾಂನ ನಾಗಾಂವ್‌ನಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ; ಬುಲ್ಡೋಜರ್​​ನಿಂದ ಶಂಕಿತ ಆರೋಪಿಗಳ ಮನೆ ಧ್ವಂಸ ಮಾಡಿದ ಜಿಲ್ಲಾಡಳಿತ
Image
ಇಂಧನ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಮೋದಿ ಸರ್ಕಾರದ ನಿರ್ಧಾರ ಶ್ಲಾಘಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
Image
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್​ನಿಂದ ಗೊಂದಲ ಸೃಷ್ಟಿ: ಈಶ್ವರಪ್ಪ
Image
Health: ನಿಮ್ಮ ಮಕ್ಕಳ ಉತ್ತಮ ಬೆಳವಣಿಗೆಗೆ ಇಲ್ಲಿದೆ ಕೆಲವು ಟಿಪ್ಸ್​ಗಳು

ಸಮುದಾಯ ಆಧಾರಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತೇಜಿಸುವ ಕೆಲಸ ಮಾಡಬೇಕು, ಕನಿಷ್ಠ ವಾರಕ್ಕೊಮ್ಮೆ ಇಂತಹ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಅನಾವಶ್ಯಕವಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ ತ್ಯಾಜ್ಯ ಸಂಗ್ರಹವಾಗದಂತೆ ವಿದ್ಯಾರ್ಥಿ ಶಿಕ್ಷಕರು ಮತ್ತು ಶಿಕ್ಷಕೇತರರ ಸಿಬ್ಬಂದಿ ನೋಡಿಕೊಳ್ಳಬೇಕು ಎಂದರು.

ಈ ಸ್ವಚ್ಚತಾ ಅಭಿಯಾನದ ಆಂದೋಲನದಲ್ಲಿ ಭೌತಶಾಸ್ತ್ರ, ಜೈವಿಕ ಅಧ್ಯಯನ ವಿಭಾಗ, ಪ್ರಾಣಿಶಾಸ್ತ್ರ, ಜೀವರಸಾಯನಶಾಸ್ತ್ರ, ವಾಣಿಜ್ಯ ವಿಭಾಗ, ಭೂ-ವಿಜ್ಞಾನ ವಿಭಾಗಗಳ‌ ಮುಂದೆ ಇರುವ ಹಸಿ ಕಸ‌, ಒಣ ಕಸ ಮತ್ತು ಕಳೆಯನ್ನು ಸ್ವಚ್ಚಗೋಳಿಸಲಾಯಿತು. ಈ ಸಂದರ್ಭದಲ್ಲಿ ಕವಿವಿಯ ಉದ್ಯಾನ ವಿಭಾಗದ ಟ್ರ್ಯಾಕ್ಟರ್ ಮುಖಾಂತರ ಕಸದ ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು.

ಇದನ್ನು ಓದಿ: ಕುಟುಂಬ ಸಮೇತ ರಕ್ತದಾನ ಮಾಡಿ ಮಾದರಿಯಾದ ದಂಪತಿ; ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಸಭಾಂಗಣ ನಿರ್ಮಾಣಕ್ಕೆ ರಕ್ತದಾನಿಗಳ ಮನವಿ

ಈ ಅಭಿಯಾನದಲ್ಲಿ ಕವಿವಿಯ 39 ಪ್ರಾಧ್ಯಾಪಕರು, 297 ವಿದ್ಯಾರ್ಥಿಗಳು, ಎನ್.ಎಸ್.ಎಸ್.ಸ್ವಯಂ ಸೇವಕರು ಮತ್ತು ಕವಿವಿಯ ಎನ್.ಎಸ್.ಎಸ್.ಕೋಶದ ಸಂಯೋಜಕ ಡಾ.ಎಂ.ಬಿ.ದಳಪತಿ, ಕವಿವಿ ಎನ್.ಎಸ್.ಎಸ್. ಸ್ನಾತಕೋತ್ತರ ಘಟಕದ ಅಧಿಕಾರಿ ಡಾ.ಎಸ್.ಜಿ.ಚಲುವಾದಿ, ವಿವಿಧ ವಿಭಾಗದ ಮುಖ್ಯಸ್ಥರಾದ ಪ್ರೊ.ವೇದಮೂರ್ತಿ, ಡಾ.ಎಲ್.ಆರ್ ನಾಯಕ, ಪ್ರೊ.ಎಸ್.ಆರ್ ಇನಾಮದಾರ,ಪ್ರೊ.ಎಮ್.ಕೆ.ರಬಿನಾಳ. ಪ್ರೊ.ಆರ್.ಎಫ್.‌ಭಜಂತ್ರಿ, ಡಾ.ಎ.ಎಸ್.ಬೇನಾಳ, ಪ್ರೊ.ಸಿ.ಎಮ್.ಕಮನವಳ್ಳಿ, ಶಿಲಾಧರ ಮುಗಳಿ, ಪ್ರೊ ಪುಲಕೇಶಿ ಬಿರಾದಾರ, ಪ್ರೊ.ಚಂದ್ರಮಾ , ಪ್ರೊ.ಕೆ.ಎಸ್ ದೇವರಾಜ್, ಡಾ.ವಿಶ್ವನಾಥ ಚಚಡಿ, ಸೇರಿದಂತೆ ಶಿಕ್ಷಕೇತರರ ಸಿಬ್ಬಂದಿ , ಕವಿವಿ ಉದ್ಯಾನ ಸಿಬ್ಬಂದಿ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ