AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇರಿಕಾದ ಹ್ಯಾರಿಸ್​ಬರ್ಗ್ ವಿಶ್ವವಿದ್ಯಾಲಯ ಜತೆ ಕರ್ನಾಟಕ ವಿಶ್ವವಿದ್ಯಾಲಯದ ಒಪ್ಪಂದ; ವರ್ಚುವಲ್ ಮೂಲಕ ಸಹಿ

ಶೈಕ್ಷಣಿಕ ವಲಯದಲ್ಲಿ ಪರಸ್ಪರ ಸಹಕಾರ ನೀಡುವುದು ಜೊತೆಗೆ ಇತರೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳವುದು ಮತ್ತು ಯೋಜನಾ ಬದ್ಧವಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವುದು ಜಂಟಿ ಒಪ್ಪಂದದ ಮುಖ್ಯ ಉದ್ದೇಶ

ಅಮೇರಿಕಾದ ಹ್ಯಾರಿಸ್​ಬರ್ಗ್ ವಿಶ್ವವಿದ್ಯಾಲಯ ಜತೆ ಕರ್ನಾಟಕ ವಿಶ್ವವಿದ್ಯಾಲಯದ ಒಪ್ಪಂದ; ವರ್ಚುವಲ್  ಮೂಲಕ ಸಹಿ
ವರ್ಚುವಲ್ ಮೂಲಕ ಶೈಕ್ಷಣಿಕ ಒಪ್ಪಂದಕ್ಕೆ ಸಹಿ
preethi shettigar
|

Updated on: May 08, 2021 | 2:02 PM

Share

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಜಂಟಿಯಾಗಿ ಅಮೇರಿಕಾದ ಹ್ಯಾರಿಸ್​ಬರ್ಗ್​ನ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಜೊತೆಗೆ ಶೈಕ್ಷಣಿಕ, ಸಂಶೋಧನೆ, ಶಿಕ್ಷಕರ ವಿನಿಮಯ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳ ಒಪ್ಪಂದಕ್ಕೆ ಜಂಟಿಯಾಗಿ ಆನ್‌ಲೈನ್ ವರ್ಚುವಲ್ ಮೂಲಕ ಬುಧವಾರ ಸಹಿ ಹಾಕಿದೆ.

ಈ ಒಪ್ಪಂದದ ಅನ್ವಯ ಜೈವಿಕ ತಂತ್ರಜ್ಞಾನ ಸೇರಿದಂತೆ ವಿವಿಧ ವಿಷಯಗಳ ಸಂಶೋಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು, ಜಂಟಿಯಾಗಿ ಶೈಕ್ಷಣಿಕ ಮತ್ತು ಸಂಶೋಧನೆಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ ವಿಜ್ಞಾನ ಮತ್ತು ತಂತ್ರಜ್ಞಾನ, ಸಾಮಾಜಿಕ ವಿಜ್ಞಾನ ಮತ್ತು ವಿವಿಧ ವಿಷಯಗಳ ಅಧ್ಯಯನಕ್ಕಾಗಿ ಶಿಕ್ಷಕರ, ವಿದ್ಯಾರ್ಥಿಗಳ ವಿನಿಮಯ ಸೇರಿದಂತೆ ಈ ಸಂಸ್ಥೆಗಳ ಜೊತೆ ಜಂಟಿಯಾಗಿ ಶೈಕ್ಷಣಿಕವಾಗಿ ವಿಚಾರ ಸಂಕಿರಣ, ಕಾರ್ಯಾಗಾರ, ವಿಚಾರಗೋಷ್ಠಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತರಬೇತಿಗಳನ್ನು ಆಯೋಜಿಸುವುದು ಹಾಗೂ ಶಿಕ್ಷಕರಿಗೆ ನವೀನ ಬೋಧನಾ ವಿಧಾನದ ಕುರಿತು ತರಬೇತಿಗಳನ್ನು ಆಯೋಜಿಸಲಾಗುತ್ತದೆ.

ಶೈಕ್ಷಣಿಕ ವಲಯದಲ್ಲಿ ಪರಸ್ಪರ ಸಹಕಾರ ನೀಡುವುದು ಜೊತೆಗೆ ಇತರೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳವುದು ಮತ್ತು ಯೋಜನಾ ಬದ್ಧವಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವುದರ ಜೊತೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಸಂಶೋಧನೆಗೆ ಹೆಚ್ಚು ಒತ್ತು ನೀಡುವ ಮುಖ್ಯ ಉದ್ದೇಶವನ್ನು ಇಟ್ಟುಕೊಂಡು ಈ ಒಪ್ಪಂದ ಮಾಡಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್ ಅಶ್ವತ್‌ನಾರಾಯಣ, ಪಿನ್ಸಿಲ್ವಿನಿಯಾ ಉನ್ನತ ಶಿಕ್ಷಣ ಇಲಾಖೆಯ ಕಾರ್ಯನಿರ್ವಾಹಕ ಕುಲಪತಿ ಡಾ. ಪೀಟರ್ ಗಾರಲ್ಯಾಂಡ್, ಹ್ಯಾರಿಸ್​ಬರ್ಗ್ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಸಲಹಾ ಮಂಡಳಿಯ ಅಧ್ಯಕ್ಷ ಎರಿಕ್ ಡಾರ್, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಬಿ.ಗುಡಸಿ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಗೋಪಾಲ ಕೃಷ್ಣ ಜೋಶಿ, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ್ ಮತ್ತು ವಿವಿಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ವೇದಮೂರ್ತಿ ವರ್ಚುವಲ್ ಒಪ್ಪಂದದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:

ಭಾರತದ ಜತೆಗೆ 10,200 ಕೋಟಿ ರೂಪಾಯಿಗೂ ಹೆಚ್ಚಿನ ವ್ಯಾಪಾರ- ಹೂಡಿಕೆ ಒಪ್ಪಂದ ಘೋಷಿಸಿದ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್

ನಾವು ಎಂದಿಗೂ ಶಾಂತಿಯ ಪರ; ಭಾರತ-ಪಾಕಿಸ್ತಾನ ಕದನವಿರಾಮ ಒಪ್ಪಂದ ಸ್ವಾಗತಿಸಿ ಇಮ್ರಾನ್ ಖಾನ್ ಟ್ವೀಟ್

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?