AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರಪ್ರಥಮ ಬಾರಿಗೆ ‘ಅರಿವೇ ಗುರು’ ಪ್ರಶಸ್ತಿ ಪ್ರದಾನ

ಕಲೆ, ಸಮಾಜವಿಜ್ಞಾನ ಹಾಗೂ ವಿಜ್ಞಾನ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ವತಿಯಿಂದ ಅರಿವೆ ಗರು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರಪ್ರಥಮ ಬಾರಿಗೆ ‘ಅರಿವೇ ಗುರು’ ಪ್ರಶಸ್ತಿ ಪ್ರದಾನ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ
TV9 Web
| Edited By: ವಿವೇಕ ಬಿರಾದಾರ|

Updated on:Oct 15, 2022 | 5:30 PM

Share

ಧಾರವಾಡ: ಮುಂಬೈ ಕರ್ನಾಟಕದ (Mumbai Karnataka) ದ್ವಾರಬಾಗಿಲು ಎಂದೇ ಪ್ರಸಿದ್ಧಿಯಾದ ವಿದ್ಯಾಕಾಶಿ ಧಾರವಾಡದಲ್ಲಿ (Dharwad) 1956 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ (Karnataka University) ಜನ್ಮ ತಾಳಿತು. ಕಳೆದ 75 ವರ್ಷಗಳಿಂದ ಉತ್ತರ ಕರ್ನಾಟಕದಲ್ಲಿ ಉಚ್ಛ ಶಿಕ್ಷಣದಲ್ಲಿ ಕ್ರಾಂತಿಯನ್ನು ಮಾಡಿದೆ. ಈ ಭಾಗದ ಯುವ ಜನತೆಗೆ ಜ್ಞಾನ ಪ್ರಸಾರ ಮಾಡುವ ಕಾರ್ಯದಲ್ಲಿ ಸಂಪೂರ್ಣ ಕೃತಕೃತ್ಯವಾಯಿತು. ಆಧುನಿಕ ಸಂಸ್ಕೃತಿಯ ಹೆಗ್ಗುರುತಾಗಿ ಯುವಕರ ತಿಳುವಳಿಕೆಯ ಜ್ಞಾನ ಕ್ಷೀತಿಜವನ್ನು ವಿಸ್ತಾರಗೊಳಿಸಿ ಇಡೀ ಭರತ ಖಂಡದಲ್ಲಿಯೇ ಪ್ರಖ್ಯಾತಿ ಹೊಂದಿ ಕಳೆದ ೨೫ ವರ್ಷಗಳಿಂದ ‘ಎ’ ಗ್ರೇಡ್ ಮಾನ್ಯತೆಯನ್ನು ಉಳಿಸಿಕೊಂಡು ಬಂದಿರುವುದು ಶಿಕ್ಷಣ ಕಾಶಿಗೆ ಹೆಗ್ಗುರುತಾಗಿದೆ.

ಕಲೆ, ವಿಜ್ಞಾನ, ತಂತ್ರಜ್ಞಾನ, ಸಾಮಾಜಿಕ ಜ್ಞಾನಗಳನ್ನು ಆಧುನಿಕರಿಗೆ ಬಿತ್ತುವಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ವಿಶೇಷ ಪಾತ್ರವನ್ನು ಗಳಿಸಿಕೊಂಡು ಬಂದಿದೆ. ಇಂಥ ದೂರದೃಷ್ಟಿ ಆಶಯವನ್ನು ಇಟ್ಟುಕೊಂಡು ಇಲ್ಲಿ ಆಡಳಿತ ನಡೆಸಿದ ಶ್ರೀ ಆರ್.ಎ.ಜಾಗೀರದಾರ, ಶ್ರೀ.ಸಿ.ಸಿ.ಹುಲಕೋಟಿ, ಡಾ.ಡಿ.ಸಿ.ಪಾವಟೆ, ಡಾ.ಎ.ಎಸ್.ಅಡಕೆ, ಶ್ರೀಮತಿ ಜಯಲಕ್ಷಮ್ಮಣ್ಣಿ, ಡಾ.ಆರ್.ಸಿ.ಹಿರೇಮಠ, ಪ್ರೊ.ಸದಾಶಿವ ಒಡೆಯರ, ಡಾ.ಡಿ.ಎಂ.ನಂಜುಂಡಪ್ಪ, ಡಾ.ಎಸ್.ಜಿ.ದೇಸಾಯಿ, ಡಾ.ಜಿ.ಕೆ.ನಾರಾಯಣರೆಡ್ಡಿ, ಡಾ.ಎಸ್.ರಾಮೇಗೌಡ, ಡಾ.ಎ.ಎಂ.ಪಠಾಣ, ಡಾ.ಎಂ.ಖಾಜಾಪೀರ, ಡಾ.ಎಸ್.ಕೆ.ಸೈದಾಪೂರ, ಡಾ.ಎಚ್.ಬಿ.ವಾಲಿಕಾರ, ಡಾ.ಪಿ.ಬಿ.ಗಾಯಿ ಹಾಗೂ ಇಂದಿನ ಪ್ರಸ್ತುತ ಕುಲಪತಿಗಳಾದ ಪ್ರೊ.ಕೆ.ಬಿ.ಗುಡಸಿ ಅವರ ವರೆಗೆ ಬೆಳೆದುಕೊಂಡು ಬಂದಿದೆ. ಇವರ ತಮ್ಮ ಆಡಳಿತಾವಧಿಯಲ್ಲಿ ವಿಶ್ವವಿದ್ಯಾಲಯಕ್ಕೆ ಮಹತ್ವವಾದ ಆಡಳಿತಾತ್ಮಕ ಕೊಡುಗೆಗಳನ್ನು ನೀಡಿದ್ದಾರೆ.

ಇದರಲ್ಲಿ ವಿಶೇಷವಾಗಿ ಪ್ರೊ.ಕೆ.ಬಿ.ಗುಡಸಿ ಅವರ ಕುಲಪತಿಗಳ ಆಡಳಿತ ಅವಧಿಯಲ್ಲಿ ಪ್ರಪ್ರಥಮ ಬಾರಿಗೆ ವಿಶ್ವವಿದ್ಯಾಲಯದಿಂದ ‘ಅರಿವೇ ಗುರು’ ಎಂಬ ಹೆಸರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡುವ ಕಾರ್ಯವನ್ನು ಜಾರಿಗೆ ತಂದಿರುವುದು ಕರ್ನಾಟಕದ ಜನತೆಗೆ ಸಂದ ಗೌರವದ ಅಭೂತಪೂರ್ವವಾದ ಕೊಡುಗೆಯಾಗಿದೆ. ಈ ದೆಸೆಯಲ್ಲಿ ಕ.ವಿ.ವಿ. ಕುಲಪತಿಗಳು ದಿನಾಂಕ ೧೨-೧೦-೨೦೨೨ ರಂದು ವಿಶ್ವವಿದ್ಯಾಲಯದಲ್ಲಿ ಸಭೆಯನ್ನು ನಡೆಸಿ ಪ್ರಶಸ್ತಿ ನೀಡಲು ತೀರ್ಮಾನಿಸಿರುವುದು ವಿಶ್ವವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದೆ.

ಅರಿವೇ ಗುರು ಪ್ರಶಸ್ತಿ

ಈ ವರ್ಷದ ಕರ್ನಾಟಕ ರಾಜ್ಯೋತ್ಸವ ದಿನದಂದೇ ‘ಅರಿವೇ ಗುರು’ ಎಂಬ ಹೆಸರಿನಲ್ಲಿ ಕಲೆ, ಸಮಾಜವಿಜ್ಞಾನ ಹಾಗೂ ವಿಜ್ಞಾನ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಮೂರು ಜನ ಸಾಧಕರಿಗೆ ರಾಜ್ಯಮಟ್ಟದ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ತಲಾ ೨೫,೦೦೦/- ರೂಪಾಯಿ ನಗದು ಬಹುಮಾನ, ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿಗಳ ಪಾರದರ್ಶಕ ಆಯ್ಕೆಗಾಗಿ ಉನ್ನತ ಮಟ್ಟದ ಶೋಧನಾ ಸಮಿತಿಯನ್ನು ಕೂಡಾ ರಚಿಸಲಾಗಿದೆ. ಪ್ರಶಸ್ತಿ ನೀಡುವ ಈ ಪ್ರಕ್ರಿಯೆಯು ಪ್ರತಿವರ್ಷ ಮುಂದುವರಿಯುವುದೆಂದು ಕ.ವಿ.ವಿ. ಕುಲಸಚಿವರಾದ ಶ್ರೀ ಯಶಪಾಲ್ ಕ್ಷೀರಸಾಗರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:10 pm, Sat, 15 October 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು