Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಬಂಗಾರದ ಕಿವಿಯೋಲೆ, ಸರದ ಆಸೆಗೆ ದೊಡ್ಡಮ್ಮನನ್ನೇ ಕೊಂದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಅಕ್ಟೋಬರ್ 24ರಂದು ದೊಡ್ಡಮ್ಮ ಕಮಲಮ್ಮ ಮಲಗಿದಾಗ ಕೊಲೆ ಮಾಡಿ ಕಿವಿಯೋಲೆ, ಬಂಗಾರದ ಸರ ಕದ್ದು ಮಹಾಂತೇಶ್ ಪರಾರಿಯಾಗಿದ್ದ.

ಹುಬ್ಬಳ್ಳಿ: ಬಂಗಾರದ ಕಿವಿಯೋಲೆ, ಸರದ ಆಸೆಗೆ ದೊಡ್ಡಮ್ಮನನ್ನೇ ಕೊಂದು ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Dec 29, 2022 | 9:52 AM

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ರಣದಮ್ಮ ಕಾಲೋನಿಯಲ್ಲಿ ದೊಡ್ಡಮ್ಮನನ್ನೇ ಕೊಂದಿದ್ದ(Murder) ಆರೋಪಿ ಮಹಾಂತೇಶನನ್ನು ಕಸಬಾಪೇಟೆ ಠಾಣೆ ಪೊಲೀಸರು(Kasabapete Police Station) ಬಂಧಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಚಿನ್ನದ ಆಸೆಗೆ ಕಮಲಮ್ಮ(72)ನನ್ನು ಕೊಂದು ಕಿವಿಯೋಲೆ ಕದ್ದು ಪರಾರಿಯಾಗಿದ್ದ ಆರೋಪಿ ಮಹಾಂತೇಶ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮಹಾಂತೇಶನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.

ಬಂಗಾರದ ಆಸೆಗೆ ದೊಡ್ಡಮ್ಮನನ್ನೇ ಕೊಂದ ಮಗ

ಅಕ್ಟೋಬರ್ 24ರಂದು ದೊಡ್ಡಮ್ಮ ಕಮಲಮ್ಮ ಮಲಗಿದಾಗ ಕೊಲೆ ಮಾಡಿ ಕಿವಿಯೋಲೆ, ಬಂಗಾರದ ಸರ ಕದ್ದು ಮಹಾಂತೇಶ್ ಪರಾರಿಯಾಗಿದ್ದ. ದೊಡ್ಡಮ್ಮನ ಮನೆಯಲ್ಲಿ ಎರಡು ದಿನ ವಾಸವಿದ್ದು, ಬಂಗಾರಕ್ಕಾಗಿ ಕೊಲೆ ಮಾಡಿದ್ದ. ಕಮಲಮ್ಮನ ಮಗ ಪ್ರಭಯ್ಯ ತಾಯಿ ಕೊಲೆಯಾದ ಬಗ್ಗೆ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಎರಡು ತಿಂಗಳ ಬಳಿಕ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರು ಬೆಳಗಾವಿಯಲ್ಲಿ ಪಾಪಿ ಮಹಾಂತೇಶ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಅಲರ್ಜಿ ಎಂದು ಆಸ್ಪತ್ರೆ ಸೇರಿದ ನಾಲ್ಕು ತಿಂಗಳ ಮಗು ಸಾವು; ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಆಸ್ತಿಗಾಗಿ ಕುಟುಂಬಗಳ ನಡುವೆ ಜಗಳ, ಗುಂಡು ಹಾರಿಸಿದ ಆರೋಪ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದಲ್ಲಿ ಆಸ್ತಿ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟವಾಗಿದ್ದು ಯುವಕನ ಮೇಲೆ ಗುಂಡು ಹಾರಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೊಡೆದಾಟದಲ್ಲಿ ನಿಶ್ಚಲ್(30) ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ತಲೆ, ಕೈಗೆ ಗಂಭೀರ ಪೆಟ್ಟು ಬಿದ್ದಿದೆ. ಇದಕ್ಕೂ ಮೊದಲು ತೀರ್ಥ (28) ಎಂಬಾತನ ಮೇಲೆ ನಿಶ್ಚಲ್ ಶೂಟ್ ಮಾಡಿದ ಆರೋಪ ಕೇಳಿ ಬಂದಿದೆ.

ಗುಂಡು ತಾಗದೆ ತೀರ್ಥ ಪಾರಾಗಿದ್ದು ತೀರ್ಥ ಚಲಾಯಿಸುತ್ತಿದ್ದ ಜೀಪಿಗೆ ಗುಂಡು ತಗುಲಿದೆ. ಸ್ಥಳಕ್ಕೆ ಮಡಿಕೇರಿ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಯುವಕರಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:52 am, Thu, 29 December 22

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ