AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ನಿಖಿಲ್​ ಸಾವಿಗೆ ಕೇಶ್ವಾಪುರ ಠಾಣೆ ಪೊಲೀಸರು ಕಾರಣ; ಕ್ರಮಕೈಗೊಳ್ಳದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬಸ್ಥರ ಎಚ್ಚರಿಕೆ

ಪೊಲೀಸರ ವಿರುದ್ಧ ಎಫ್​ಐ​ಆರ್​ ದಾಖಲಾದರೂ ಯಾವುದೇ ಕ್ರಮ ಆಗಿಲ್ಲ. ಸಾಮಾನ್ಯ ಜನರಿಗೊಂದು ನ್ಯಾಯ, ಪೊಲೀಸರಿಗೊಂದು ನ್ಯಾಯನಾ? ಕೂಡಲೇ ಇನ್ಸ್​ಪೆಕ್ಟರ್, ಎಎಸ್​ಐರನ್ನು ಅಮಾನತು ಮಾಡಬೇಕು ಎಂದು ನಿಖಿಲ್​ ಕುಟುಂಬಸ್ಥರು ಆಗ್ರಹಿಸಿದರು.

ಹುಬ್ಬಳ್ಳಿ: ನಿಖಿಲ್​ ಸಾವಿಗೆ ಕೇಶ್ವಾಪುರ ಠಾಣೆ ಪೊಲೀಸರು ಕಾರಣ; ಕ್ರಮಕೈಗೊಳ್ಳದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬಸ್ಥರ ಎಚ್ಚರಿಕೆ
ನಿಖಲ್​ ಕುಟುಂಬಸ್ಥರ ಸುದ್ದಿಗೋಷ್ಠಿ
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on: Nov 07, 2023 | 2:54 PM

Share

ಹುಬ್ಬಳ್ಳಿ ನ.07: ಪೊಲೀಸರು (Police) ಮತ್ತು ಪತ್ನಿಯ (Wife) ಕಿರುಕುಳದಿಂದ ನಿಖಿಲ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್​ ಸಾವಿಗೆ ಹುಬ್ಬಳ್ಳಿ(Hubballi) ಕೇಶ್ವಾಪುರ ಇನ್ಸ್​​ಪೆಕ್ಟರ್​ ಸಾತೇನಹಳ್ಳಿ, ಎಎಸ್​ಐ ಜಯಶ್ರೀ ಛಲವಾದಿ, ಪತ್ನಿ ಮನೆಕಡೆಯವರೇ ಕಾರಣ ಎಂದು ನಿಖಿಲ್​ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಿಖಿಲ್​ ತಂದೆ, ತಾಯಿ, ಸೋದರರು ಸುದ್ದಿಗೋಷ್ಠಿ ನಡೆಸಿ ಪೊಲೀಸರ ವಿರುದ್ಧ ಎಫ್​ಐ​ಆರ್​ ದಾಖಲಾದರೂ ಯಾವುದೇ ಕ್ರಮ ಆಗಿಲ್ಲ. ಸಾಮಾನ್ಯ ಜನರಿಗೊಂದು ನ್ಯಾಯ, ಪೊಲೀಸರಿಗೊಂದು ನ್ಯಾಯನಾ? ಕೂಡಲೇ ಇನ್ಸ್​ಪೆಕ್ಟರ್, ಎಎಸ್​ಐರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಅಮಾನತು ಮಾಡದಿದ್ದರೇ ಕುಟುಂಬದವರೆಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಕಚೇರಿ ಮುಂದೆ ವಿಷ ಕುಡಿಯುತ್ತೇವೆ ಎಂದು ನಿಖಲ್​ ತಾಯಿ ಗೀತಾ ಎಚ್ಚರಿಕೆ ನೀಡಿದ್ದಾರೆ. ನವೆಂಬರ್​ 3ರಂದು ಕೋಟಿಲಿಂಗೇಶ್ವರ ನಗರದ ತಮ್ಮ ನಿವಾಸದಲ್ಲಿ ನಿಖಿಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಖಿಲ್ ಸಾವಿಗೆ ಪೊಲೀಸರು, ಪತ್ನಿ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ನಿಖಿಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಭಂದಿಸಿದೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇನ್ಸಪೆಕ್ಟರ್ ಸಾತೇನಹಳ್ಳಿ, ಎಎಸ್​ಐ ಜಯಶ್ರೀ ಚಲವಾದಿ, ಪತ್ನಿ ಪ್ರೀಯಾ ಸೇರಿ ಎಂಟು ಜನರ ವಿರುದ್ಧ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: ರೌಡಿಶೀಟರ್ ಕೇಸ್​ ಹಾಕುವ ಬೆದರಿಕೆ, ಹುಬ್ಬಳ್ಳಿ ಕೇಶ್ವಾಪೂರ ಠಾಣೆಯ ಇನ್ಸ್ಪೆಕ್ಟರ್ ವಿರುದ್ದ ಮತ್ತೊಂದು ಗಂಭೀರ ಆರೋಪ

ಕೇಸ್ ದಾಖಲಾದ ಬೆನ್ನಲ್ಲೆ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಆದರೆ ಪ್ರಕರಣ ದಾಖಲಾಗಿ ನಾಲ್ಕು ದಿನ ಕಳೆದರೂ ಪೊಲೀಸರ ಮೇಲೆ ಯಾವದೂ ಕ್ರಮ ಆಗಿಲ್ಲ. ಹೀಗಾಗಿ ಮೃತ ನಿಖಿಲ್ ಕುಟುಂಬಸ್ಥರಿಂದ ಸುದ್ದಿಗೋಷ್ಠಿ ನಡೆಸಿ ಪೊಲೀಸ್ ಅಧಿಕಾರಿಗಳನ್ನ ಅಮನಾತು ಮಾಡದೆ ಹೋದರೇ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಪ್ರಕರಣ

ನಿಖಲ್ 11 ತಿಂಗಳ ಹಿಂದೆ ಪ್ರೀತಿ ಎಂಬುವರನ್ನು ವಿವಾಹವಾಗಿದ್ದರು. ಆದರೆ ದಂಪತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು. ಇದರಿಂದಾಗಿ ಪ್ರೀತಿ ತವರು ಮನೆಗೆ ಹೋಗಿದ್ದಳು. ಗುರುವಾರ (ನ.02) ಪ್ರೀತಿ ಮತ್ತು ಕುಟುಂಬಸ್ಥರು ನಿಖಿಲ್​​ನನ್ನು ಕೇಶ್ವಾಪುರ ಠಾಣೆಗೆ ಕರೆಯಿಸಿದ್ದರು. ಠಾಣೆಯಲ್ಲಿ ಪೊಲೀಸರು ನಿಖಲ್​ಗೆ ಮಾನಿಸಕವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿತ್ತು.

ಕೇಶ್ವಾಪುರ ಪೊಲೀಸರು ನಿಖಲ್​ಗೆ ಒಂದೇ ದಿನದಲ್ಲಿ 2 ಲಕ್ಷ ರೂ. ನೀಡುವಂತೆ ತಾಕೀತು ಮಾಡಿದ್ದರು. ಇದರಿಂದ ಮನನೊಂದು ಮನೆಗೆ ಬಂದ ನಿಖಿಲ್​​​, ಶುಕ್ರವಾರ (ನ.03) ಬೆಳಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!