AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಎದುರಿಸಲು ಸಿದ್ಧವಾದ ಹುಬ್ಬಳ್ಳಿಯ ಕಿಮ್ಸ್: ರೋಗಿಗಳಿಗಾಗಿ 100 ಬೆಡ್ ಮೀಸಲು

ಕರುನಾಡಿನಲ್ಲಿ ಕೊರೊನಾ ವೈರಸ್ ಆತಂಕ ಮತ್ತಷ್ಟು ಹೆಚ್ಚಾಗುತ್ತಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರು ಮನವಿ ಮಾಡಿದ್ದಾರೆ. 

ಕೋವಿಡ್ ಎದುರಿಸಲು ಸಿದ್ಧವಾದ ಹುಬ್ಬಳ್ಳಿಯ ಕಿಮ್ಸ್: ರೋಗಿಗಳಿಗಾಗಿ 100 ಬೆಡ್ ಮೀಸಲು
ಹುಬ್ಬಳ್ಳಿ ಕಿಮ್ಸ್ ‌
ಶಿವಕುಮಾರ್ ಪತ್ತಾರ್
| Edited By: |

Updated on: Dec 20, 2023 | 7:31 PM

Share

ಹುಬ್ಬಳ್ಳಿ, ಡಿಸೆಂಬರ್​​ 20: ಕರ್ನಾಟಕದಲ್ಲಿ ಕೊರೊನಾ ಆತಂಕ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ (Coronavirus JN1) ತಳಿ ಭೀತಿ ಮಾತ್ರ ಹೆಚ್ಚಾಗಿದೆ. ರಾಜ್ಯದಲ್ಲಿ ಕೋವಿಡ್ ಮತ್ತೆ ಮೆಲ್ಲಗೆ ಶುರುವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್​ ಕೇಸ್​ಗಳು ಪತ್ತೆಯಾಗುತ್ತಿವೆ. ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರು ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಮುಂಜಾಗ್ರತಾ ಕ್ರಮಕೈಗೊಂಡಿದ್ದು, ಕೋವಿಡ್ ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕೋವಿಡ್ ರೋಗಿಗಳಿಗಾಗಿ 100 ಬೆಡ್ ಮೀಸಲಿಡಲಾಗಿದ್ದು, 60 ಆಕ್ಸಿಜನ್, 40 ಬೆಡ್ ಆಕ್ಸಿಜನ್ ಜೊತೆಗೆ ICU ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ರಾಮನಗರ ಜಿಲ್ಲೆಯಲ್ಲಿ 2ನೇ ಕೋವಿಡ್ ​ಪ್ರಕರಣ ಪತ್ತೆ: ಕಾರವಾರ, ಚಿಕ್ಕಮಗಳೂರಿನಲ್ಲೂ ಕೊರೊನಾ

ಈಗಾಗಲೇ ವೈದ್ಯರೊಂದಿಗೆ ಮೀಟಿಂಗ್ ಮಾಡಿರುವ ನಿರ್ದೇಶಕರು ಕೋ ಆರ್ಡಿನೇಟರ್ ನೇಮಕ ಮಾಡಿದೆ. ಕೋವಿಡ್ ಎದುರಿಸಲು ಎಲ್ಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದ್ದೇವೆ. ರೋಗಿಗಳಿಗಾಗಿ 100 ಬೆಡ್ ಮೀಸಲಿಡಾಗಿದೆ. ಕಿಮ್ಸ್​ನಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ. 40 KL ಫ್ಲಾಂಟ್ ನಮ್ಮಲ್ಲಿ ಇದೆ ಎಂದು ಕಿಮ್ಸ್ ನಿರ್ದೇಶಕ ಕಮ್ಮಾರ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಒಂದೇ ದಿನ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಟೆಸ್ಟ್ ಮಾಡಿಸಿದ್ದ 45 ಜನರ ಪೈಕಿ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ನಿನ್ನೆ ಜಿಲ್ಲಾ ಆಸ್ಪತ್ರೆಯಲ್ಲಿ 45 ಜನರು ಕೊರೊನಾ ಟೆಸ್ಟ್ ಮಾಡಿಸಿದ್ದರು.

ಇದನ್ನೂ ಓದಿ: ದೇಶದಲ್ಲಿ JN1 ಹೊಸ ವೈರಸ್ ಆತಂಕದ ನಡುವೆ ಕೋವಿಡ್​ಗೆ ಬೆಂಗಳೂರಿನಲ್ಲಿ ಮೊದಲ ಬಲಿ

ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಟಿವಿ9ಗೆ ಚಿಕ್ಕಮಗಳೂರು ಡಿಹೆಚ್‌ಒ ಅಶ್ವತ್ಥ್‌ ಬಾಬಾ ಪ್ರತಿಕ್ರಿಯಿಸಿದ್ದು, ಸೋಂಕಿತ ನಾಲ್ವರನ್ನೂ ಹೋಂ ಐಸೋಲೇಷನ್ ಮಾಡಲಾಗಿದೆ. ಸೋಂಕಿತ ನಾಲ್ವರ ಪೈಕಿ ಓರ್ವರಿಗೆ ಮಾತ್ರ ಟ್ರಾವೆಲ್ ಹಿಸ್ಟರಿ ಇದೆ. ಓರ್ವ ಸೋಂಕಿತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿ ಬಂದಿದ್ದರು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ