AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ, ಮುಂದಿನ ಯುಗಾದಿವರೆಗೆ ಹಲವು ಕಾಯಿಲೆಗಳ ತಾಂಡವ: ಕೋಡಿ ಶ್ರೀ ಅಚ್ಚರಿಯ ಭವಿಷ್ಯ

ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಹೊರಗಡೆ ಹೋಗುವಾಗ ಬೆತ್ತ ಹಿಡಿದುಕೊಂಡು ಹೋಗಬೇಕು. ಅಂಗಾಂಗ ಕಾಯಿಲೆಗಳು ಬರಲಿವೆಎಂದು ಭವಿಷ್ಯ ನುಡಿದಿದ್ದಾರೆ.

ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ, ಮುಂದಿನ ಯುಗಾದಿವರೆಗೆ ಹಲವು ಕಾಯಿಲೆಗಳ ತಾಂಡವ: ಕೋಡಿ ಶ್ರೀ ಅಚ್ಚರಿಯ ಭವಿಷ್ಯ
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
Follow us
TV9 Web
| Updated By: ಆಯೇಷಾ ಬಾನು

Updated on:Oct 04, 2022 | 2:47 PM

ಧಾರವಾಡ: ಕೋಡಿಮಠದ(Kodi Mutt Seer) ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Sri Shivananda Shivayogi Rajendra Swamiji) ಅವರು ಭವಿಷ್ಯ ವಾಣಿ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣವಿದೆ ಎಂದು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ ವಾಣಿ ನುಡಿದಿದ್ದರು. ಅದನ್ನು ನೆನಪಿಸಿಕೊಂಡ ಸ್ವಾಮೀಜಿ, ಈ ಸಂವತ್ಸರ ಪ್ರಾರಂಭದಲ್ಲಿಯೇ ನಾನು ಭವಿಷ್ಯ ಹೇಳಿದ್ದೆ. ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ, ಸಾವು-ನೋವು ಆಗುತ್ತೆ ಅಂತಾ ಹೇಳಿದ್ದೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ಕುಸಿಯುತ್ತೆ ಎಂದು ಹೇಳಿದ್ದೆ. ಈಗ ನಾವು ಹೇಳಿದಂತೆಯೇ ಆಗಿದೆ. ಇನ್ನು ಮುಂದೆಯೂ ಮಳೆ ಆಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಹೆಚ್ಚಾಗಿ ಬರುತ್ತವೆ. ವಿಷಜಂತುಗಳು ಹೊರಗೆ ಬಂದು ತೊಂದರೆ ಕೊಡುತ್ತವೆ. ಪ್ರಕೃತಿಯಿಂದ ಅಲ್ಲೊಲ ಕಲ್ಲೋಲ ಆಗುತ್ತೆ. ರಾಜ್ಯಕ್ಕೆ ಒಂದು ಅವಘಡ ಆಗಲಿದೆ. ಅದನ್ನು ಕೂಡ ಕಾದು ನೋಡಿ. ಬೆಂಕಿಯಿಂದ ಹೆಚ್ಚೆಚ್ಚು ಸಮಸ್ಯೆ ಆಗಲಿದೆ. ಮತಾಂಧತೆ, ಜಾತೀಯತೆ, ಆಕ್ರೋಶ ಹೆಚ್ಚಾಗುತ್ತದೆ ಎನ್ನುವ ಮೂಲಕ ಕಾರ್ತಿಕ ಮಾಸದಲ್ಲಿ ಗಂಡಾಂತರ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ‘ನನಗೆ ಅನ್ನ ಹಾಕುವ ಯೋಗ್ಯತೆ ನಿಮಗಿಲ್ಲ’; ಆರ್ಯವರ್ಧನ್​ಗೆ ಹೆಚ್ಚಿತು ಅಹಂಕಾರ

ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ. ಹೋಗುವಾಗ ವಿಪರೀತ ಕ್ಷಾಮ, ದುಃಖ ಕೊಟ್ಟು ಹೋಗುತ್ತೆ. ಕುಡಿಯೋದಕ್ಕೆ ನೀರು ಇಲ್ಲದಂತೆ ಮಾಡುತ್ತೆ. ಇತಿಹಾಸದಲ್ಲಿಯೇ ಇಂಥ ಕಾಯಿಲೆ ಬಂದಿಲ್ಲ. ಕಷ್ಟ ಬಂದಾಗ ದೇವರು ಅಂತಾರೆ. ಮಠ, ಮಂದಿರಕ್ಕೆ ಹೋಗುತ್ತಾರೆ. ಆದರೆ ಮಠ, ಮಂದಿರಕ್ಕೂ ಕೊರೊನಾ ಬಂತು. ಜನವರಿವರೆಗೆ ಕೊರೊನಾ ಇರುತ್ತೆ. ಇದಕ್ಕೆ ಮತ್ತೊಂದು ರೂಪದ ಲಕ್ಷಣಗಳು ಇವೆ. ಆದರೂ ಹೋಗುವಾಗ ಬಹಳ ಕಷ್ಟ ಕೊಡುತ್ತದೆ. ಈ ಸಂವತ್ಸರ ಶುಭ ಆಗೋದಿಲ್ಲ ಎಂದಿದ್ದೆ. ಗುಡ್ಡ ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ದುಷ್ಟ ಪ್ರಾಣಿಗಳಿಂದ ಕಷ್ಟ ಇದೆ. ಹೊರಗಡೆ ಹೋಗುವಾಗ ಬೆತ್ತ ಹಿಡಿದುಕೊಂಡು ಹೋಗಬೇಕು. ಅಂಗಾಂಗ ಕಾಯಿಲೆಗಳು ಬರಲಿವೆ. ಆಶ್ವೀಜದಿಂದ ಯುಗಾದಿವರೆಗೆ ಅಂಗಾಂಗ ಕಾಯಿಲೆ ಹೆಚ್ಚಾಗುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:36 pm, Tue, 4 October 22

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?