AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ, ಮುಂದಿನ ಯುಗಾದಿವರೆಗೆ ಹಲವು ಕಾಯಿಲೆಗಳ ತಾಂಡವ: ಕೋಡಿ ಶ್ರೀ ಅಚ್ಚರಿಯ ಭವಿಷ್ಯ

ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಹೊರಗಡೆ ಹೋಗುವಾಗ ಬೆತ್ತ ಹಿಡಿದುಕೊಂಡು ಹೋಗಬೇಕು. ಅಂಗಾಂಗ ಕಾಯಿಲೆಗಳು ಬರಲಿವೆಎಂದು ಭವಿಷ್ಯ ನುಡಿದಿದ್ದಾರೆ.

ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ, ಮುಂದಿನ ಯುಗಾದಿವರೆಗೆ ಹಲವು ಕಾಯಿಲೆಗಳ ತಾಂಡವ: ಕೋಡಿ ಶ್ರೀ ಅಚ್ಚರಿಯ ಭವಿಷ್ಯ
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
TV9 Web
| Edited By: |

Updated on:Oct 04, 2022 | 2:47 PM

Share

ಧಾರವಾಡ: ಕೋಡಿಮಠದ(Kodi Mutt Seer) ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Sri Shivananda Shivayogi Rajendra Swamiji) ಅವರು ಭವಿಷ್ಯ ವಾಣಿ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣವಿದೆ ಎಂದು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ ವಾಣಿ ನುಡಿದಿದ್ದರು. ಅದನ್ನು ನೆನಪಿಸಿಕೊಂಡ ಸ್ವಾಮೀಜಿ, ಈ ಸಂವತ್ಸರ ಪ್ರಾರಂಭದಲ್ಲಿಯೇ ನಾನು ಭವಿಷ್ಯ ಹೇಳಿದ್ದೆ. ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ, ಸಾವು-ನೋವು ಆಗುತ್ತೆ ಅಂತಾ ಹೇಳಿದ್ದೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ಕುಸಿಯುತ್ತೆ ಎಂದು ಹೇಳಿದ್ದೆ. ಈಗ ನಾವು ಹೇಳಿದಂತೆಯೇ ಆಗಿದೆ. ಇನ್ನು ಮುಂದೆಯೂ ಮಳೆ ಆಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಹೆಚ್ಚಾಗಿ ಬರುತ್ತವೆ. ವಿಷಜಂತುಗಳು ಹೊರಗೆ ಬಂದು ತೊಂದರೆ ಕೊಡುತ್ತವೆ. ಪ್ರಕೃತಿಯಿಂದ ಅಲ್ಲೊಲ ಕಲ್ಲೋಲ ಆಗುತ್ತೆ. ರಾಜ್ಯಕ್ಕೆ ಒಂದು ಅವಘಡ ಆಗಲಿದೆ. ಅದನ್ನು ಕೂಡ ಕಾದು ನೋಡಿ. ಬೆಂಕಿಯಿಂದ ಹೆಚ್ಚೆಚ್ಚು ಸಮಸ್ಯೆ ಆಗಲಿದೆ. ಮತಾಂಧತೆ, ಜಾತೀಯತೆ, ಆಕ್ರೋಶ ಹೆಚ್ಚಾಗುತ್ತದೆ ಎನ್ನುವ ಮೂಲಕ ಕಾರ್ತಿಕ ಮಾಸದಲ್ಲಿ ಗಂಡಾಂತರ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ‘ನನಗೆ ಅನ್ನ ಹಾಕುವ ಯೋಗ್ಯತೆ ನಿಮಗಿಲ್ಲ’; ಆರ್ಯವರ್ಧನ್​ಗೆ ಹೆಚ್ಚಿತು ಅಹಂಕಾರ

ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ. ಹೋಗುವಾಗ ವಿಪರೀತ ಕ್ಷಾಮ, ದುಃಖ ಕೊಟ್ಟು ಹೋಗುತ್ತೆ. ಕುಡಿಯೋದಕ್ಕೆ ನೀರು ಇಲ್ಲದಂತೆ ಮಾಡುತ್ತೆ. ಇತಿಹಾಸದಲ್ಲಿಯೇ ಇಂಥ ಕಾಯಿಲೆ ಬಂದಿಲ್ಲ. ಕಷ್ಟ ಬಂದಾಗ ದೇವರು ಅಂತಾರೆ. ಮಠ, ಮಂದಿರಕ್ಕೆ ಹೋಗುತ್ತಾರೆ. ಆದರೆ ಮಠ, ಮಂದಿರಕ್ಕೂ ಕೊರೊನಾ ಬಂತು. ಜನವರಿವರೆಗೆ ಕೊರೊನಾ ಇರುತ್ತೆ. ಇದಕ್ಕೆ ಮತ್ತೊಂದು ರೂಪದ ಲಕ್ಷಣಗಳು ಇವೆ. ಆದರೂ ಹೋಗುವಾಗ ಬಹಳ ಕಷ್ಟ ಕೊಡುತ್ತದೆ. ಈ ಸಂವತ್ಸರ ಶುಭ ಆಗೋದಿಲ್ಲ ಎಂದಿದ್ದೆ. ಗುಡ್ಡ ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ದುಷ್ಟ ಪ್ರಾಣಿಗಳಿಂದ ಕಷ್ಟ ಇದೆ. ಹೊರಗಡೆ ಹೋಗುವಾಗ ಬೆತ್ತ ಹಿಡಿದುಕೊಂಡು ಹೋಗಬೇಕು. ಅಂಗಾಂಗ ಕಾಯಿಲೆಗಳು ಬರಲಿವೆ. ಆಶ್ವೀಜದಿಂದ ಯುಗಾದಿವರೆಗೆ ಅಂಗಾಂಗ ಕಾಯಿಲೆ ಹೆಚ್ಚಾಗುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:36 pm, Tue, 4 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ