AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ನಿರತ KSRTC ಕಂಡಕ್ಟರ್​​ ಹೃದಯಾಘಾತದಿಂದ ಸಾವು

ಕರ್ತ್ಯವ್ಯದಲ್ಲಿ ಇರುವಾಗಲೇ ಹುಬ್ಬಳ್ಳಿಯ ನಗರ ಸಾರಿಗೆ ಬಸ್ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕರ್ತವ್ಯ ನಿರತ KSRTC ಕಂಡಕ್ಟರ್​​ ಹೃದಯಾಘಾತದಿಂದ ಸಾವು
ಮೃತ ಕಂಡಕ್ಟರ್​
TV9 Web
| Edited By: |

Updated on:Nov 01, 2022 | 6:46 PM

Share

ಧಾರವಾಡ: ಕರ್ತ್ಯವ್ಯದಲ್ಲಿ ಇರುವಾಗಲೇ ಹುಬ್ಬಳ್ಳಿಯ (Hubli) ನಗರ ಸಾರಿಗೆ ಬಸ್ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೊಪ್ಪಳ (Koppal) ಜಿಲ್ಲೆಯ ನಿವಾಸಿ ಬಸ್ ಕಂಡಕ್ಟರ್ ಮಹೇಶ್ವರ ಹೂಗಾರ್ ಮೃತ ವ್ಯಕ್ತಿ. ನಗರ ಸಾರಿಗೆ ಬಸ್ ​ಹುಬ್ಬಳ್ಳಿಯ ಸಿಬಿಟಿ ಇಂದ ಗಾಮನಗಟ್ಟಿಗೆ ​ಹೊರಟಿತ್ತು. ಈ ವೇಳೆ ಬಸ್​​ಗೆ ಟಿಕೆಟ್ ಚೆಕಿಂಗ್ ಮಾಡಲು ಇನ್ಸಪೆಕ್ಟರ್ ಮಂಗಳ ಬಸ್​ ಹತ್ತಿದ್ದಾರೆ. ಆಗ ಬಸ್ ಕಂಡಕ್ಟರ್ ಮಹೇಶ್ವರ ಹೂಗಾರ್ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಕಂಡಕ್ಟರ್​ಗೆ ಹೃದಯಾಘಾತವಾದ ತಕ್ಷಣ ಚೆಕಿಂಗ್ ಇನ್ಸಪೆಕ್ಟರ್ ಮಂಗಳ ಬಸ್ ಬಿಟ್ಟು ಓಡಿ ಹೋಗಿದ್ದಾರೆ. ಹೀಗಾಗಿ ಚೆಕಿಂಗ್ ಇನ್ಸಪೆಕ್ಟರ್ ಮಂಗಳ ಬಂದಿರೋ ಕಾರಣದಿಂದ ಹೃದಯಾಘಾತ ಆಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ಪ್ರಕರಣವನ್ನು ಮುಚ್ಚಿ ಹಾಕಲು ನಗರ ಸಾರಿಗೆ ಇಲಾಖೆ ಡಿಪೋ ಮ್ಯಾನೇಜರ್ ಯತ್ನಿಸುತ್ತಿರುವ ಆರೋಪ ಕೇಳಿ ಬಂದಿದೆ.

ಸಾವಿನಲ್ಲಿ ಒಂದಾದ ದಂಪತಿ: ಹುಬ್ಬಳ್ಳಿ ತಾಲೂಕಿನ ಶಿರಗುಪ್ಪ ಗ್ರಾಮದಲ್ಲಿ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಶಿವಪುತ್ರಪ್ಪ ನೆಲಗುಡ್ಡ (90) ಬಸಮ್ಮ (86) ಮೃತ ದಂಪತಿಗಳು. ಶಿವಪುತ್ರಪ್ಪ ನೆಲಗುಡ್ಡ (90) ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದರು.  ಇವರ ಅಂತ್ಯಕ್ರಿಯೆ ಸಮಯದಲ್ಲಿ ಪತ್ನಿ ಬಸಮ್ಮ ಹೃದಯಾಘಾತದಿಂದ ನಿಧನ‌ ಹೊಂದಿದ್ದಾರೆ. ಹೀಗೆ ಸಾವಿನಲ್ಲೂ ಒಂದಾದ ದಂಪತಿಗಳನ್ನು ಅಕ್ಕ ಪಕ್ಕವೇ ಅಂತ್ಯಕ್ರೀಯೆ ಮಾಡಿದರು.

ಲಿಫ್ಟ್​ ಕುಸಿದು ಬಿದ್ದು ಕಾರ್ಮಿಕ ಸಾವು

ಕೋಲಾರ:  ಲಿಫ್ಟ್​ ಕುಸಿದು ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ನಾರಾಯಣಸ್ವಾಮಿ(61)  ಮೃತ ಕಾರ್ಮಿಕ. ನಿರ್ಮಾಣ ಹಂತದಲ್ಲಿದ್ದ, ರಾಯಲ್ ಎನ್​ಫೀಲ್ಡ್​​ ಶೋ  ರೂಂ ಕಟ್ಟಡದಲ್ಲಿನ ಲಿಫ್ಟ್​ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕಾರ್ಮಿಕರಾದ ಸುಮಿತ್ರಮ್ಮ, ರಂಗಪ್ಪ, ಅಮರಾವತಿ, ಆಂಜಿನಪ್ಪಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳುಗಳನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 5:43 pm, Tue, 1 November 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್