AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ನಿರತ KSRTC ಕಂಡಕ್ಟರ್​​ ಹೃದಯಾಘಾತದಿಂದ ಸಾವು

ಕರ್ತ್ಯವ್ಯದಲ್ಲಿ ಇರುವಾಗಲೇ ಹುಬ್ಬಳ್ಳಿಯ ನಗರ ಸಾರಿಗೆ ಬಸ್ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕರ್ತವ್ಯ ನಿರತ KSRTC ಕಂಡಕ್ಟರ್​​ ಹೃದಯಾಘಾತದಿಂದ ಸಾವು
ಮೃತ ಕಂಡಕ್ಟರ್​
TV9 Web
| Edited By: |

Updated on:Nov 01, 2022 | 6:46 PM

Share

ಧಾರವಾಡ: ಕರ್ತ್ಯವ್ಯದಲ್ಲಿ ಇರುವಾಗಲೇ ಹುಬ್ಬಳ್ಳಿಯ (Hubli) ನಗರ ಸಾರಿಗೆ ಬಸ್ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೊಪ್ಪಳ (Koppal) ಜಿಲ್ಲೆಯ ನಿವಾಸಿ ಬಸ್ ಕಂಡಕ್ಟರ್ ಮಹೇಶ್ವರ ಹೂಗಾರ್ ಮೃತ ವ್ಯಕ್ತಿ. ನಗರ ಸಾರಿಗೆ ಬಸ್ ​ಹುಬ್ಬಳ್ಳಿಯ ಸಿಬಿಟಿ ಇಂದ ಗಾಮನಗಟ್ಟಿಗೆ ​ಹೊರಟಿತ್ತು. ಈ ವೇಳೆ ಬಸ್​​ಗೆ ಟಿಕೆಟ್ ಚೆಕಿಂಗ್ ಮಾಡಲು ಇನ್ಸಪೆಕ್ಟರ್ ಮಂಗಳ ಬಸ್​ ಹತ್ತಿದ್ದಾರೆ. ಆಗ ಬಸ್ ಕಂಡಕ್ಟರ್ ಮಹೇಶ್ವರ ಹೂಗಾರ್ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಕಂಡಕ್ಟರ್​ಗೆ ಹೃದಯಾಘಾತವಾದ ತಕ್ಷಣ ಚೆಕಿಂಗ್ ಇನ್ಸಪೆಕ್ಟರ್ ಮಂಗಳ ಬಸ್ ಬಿಟ್ಟು ಓಡಿ ಹೋಗಿದ್ದಾರೆ. ಹೀಗಾಗಿ ಚೆಕಿಂಗ್ ಇನ್ಸಪೆಕ್ಟರ್ ಮಂಗಳ ಬಂದಿರೋ ಕಾರಣದಿಂದ ಹೃದಯಾಘಾತ ಆಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ಪ್ರಕರಣವನ್ನು ಮುಚ್ಚಿ ಹಾಕಲು ನಗರ ಸಾರಿಗೆ ಇಲಾಖೆ ಡಿಪೋ ಮ್ಯಾನೇಜರ್ ಯತ್ನಿಸುತ್ತಿರುವ ಆರೋಪ ಕೇಳಿ ಬಂದಿದೆ.

ಸಾವಿನಲ್ಲಿ ಒಂದಾದ ದಂಪತಿ: ಹುಬ್ಬಳ್ಳಿ ತಾಲೂಕಿನ ಶಿರಗುಪ್ಪ ಗ್ರಾಮದಲ್ಲಿ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಶಿವಪುತ್ರಪ್ಪ ನೆಲಗುಡ್ಡ (90) ಬಸಮ್ಮ (86) ಮೃತ ದಂಪತಿಗಳು. ಶಿವಪುತ್ರಪ್ಪ ನೆಲಗುಡ್ಡ (90) ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದರು.  ಇವರ ಅಂತ್ಯಕ್ರಿಯೆ ಸಮಯದಲ್ಲಿ ಪತ್ನಿ ಬಸಮ್ಮ ಹೃದಯಾಘಾತದಿಂದ ನಿಧನ‌ ಹೊಂದಿದ್ದಾರೆ. ಹೀಗೆ ಸಾವಿನಲ್ಲೂ ಒಂದಾದ ದಂಪತಿಗಳನ್ನು ಅಕ್ಕ ಪಕ್ಕವೇ ಅಂತ್ಯಕ್ರೀಯೆ ಮಾಡಿದರು.

ಲಿಫ್ಟ್​ ಕುಸಿದು ಬಿದ್ದು ಕಾರ್ಮಿಕ ಸಾವು

ಕೋಲಾರ:  ಲಿಫ್ಟ್​ ಕುಸಿದು ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ನಾರಾಯಣಸ್ವಾಮಿ(61)  ಮೃತ ಕಾರ್ಮಿಕ. ನಿರ್ಮಾಣ ಹಂತದಲ್ಲಿದ್ದ, ರಾಯಲ್ ಎನ್​ಫೀಲ್ಡ್​​ ಶೋ  ರೂಂ ಕಟ್ಟಡದಲ್ಲಿನ ಲಿಫ್ಟ್​ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕಾರ್ಮಿಕರಾದ ಸುಮಿತ್ರಮ್ಮ, ರಂಗಪ್ಪ, ಅಮರಾವತಿ, ಆಂಜಿನಪ್ಪಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳುಗಳನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 5:43 pm, Tue, 1 November 22

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್