AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಸ್ವಯಂಪ್ರೇರಿತರಾಗಿ ಬಸ್ ನಿಲ್ದಾಣದ ಸ್ವಚ್ಛತೆಗೆ ನಿಂತ ಸಾರಿಗೆ ಸಿಬ್ಬಂದಿ; ಶುಚಿತ್ವ ಕಾಪಾಡಲು ಮನವಿ

ಸಿಬ್ಬಂದಿಗಳು ತಮ್ಮ ನಿತ್ಯದ ಕರ್ತವ್ಯ ನಿರ್ವಹಿಸುವ ಜೊತೆಗೆ ಇಂತಹ ಸಾಮಾಜಿಕ ಜವಾಬ್ದಾರಿ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. ಒಟ್ಟಿನಲ್ಲಿ ಸಿಬ್ಬಂದಿಯ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದೆ.

ಹುಬ್ಬಳ್ಳಿ: ಸ್ವಯಂಪ್ರೇರಿತರಾಗಿ ಬಸ್ ನಿಲ್ದಾಣದ ಸ್ವಚ್ಛತೆಗೆ ನಿಂತ ಸಾರಿಗೆ ಸಿಬ್ಬಂದಿ; ಶುಚಿತ್ವ ಕಾಪಾಡಲು ಮನವಿ
ಬಸ್ ನಿಲ್ದಾಣದ ಸ್ವಚ್ಛತೆಗೆ ನಿಂತ ಸಾರಿಗೆ ಸಿಬ್ಬಂದಿ
TV9 Web
| Updated By: ganapathi bhat|

Updated on: Jan 30, 2022 | 9:20 PM

Share

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಸಿಬಿಟಿ ಬಸ್ ನಿಲ್ದಾಣ ಇತ್ತೀಚೆಗಷ್ಟೇ ನಿರ್ಮಾಣವಾಗಿದೆ. ಆದರೆ ಹೊಸ ಬಸ್ ನಿಲ್ದಾಣದ ಚಿತ್ರಣ ಗುಟ್ಕಾ ತಿನ್ನುವವರ ಕೈಯಲ್ಲಿ ಸಿಲುಕಿ ಸಂಪೂರ್ಣ ಹಾಳಾಗಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಸ್ವಯಂಪ್ರೇರಿತರಾಗಿ ಸ್ವಚ್ಚತೆಯನ್ನು ಮಾಡಿದ್ದಾರೆ. ನಗರ ಸಾರಿಗೆ ಸಿಬ್ಬಂದಿ ಸಿಬಿಟಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಬೇಸತ್ತು ಬೆಳ್ಳಂಬೆಳಿಗ್ಗೆ ಸ್ವಚ್ಚತೆ ಮಾಡಲು ಮುಂದಾಗಿ ಸ್ವಚ್ಛತೆಯ ಕೆಲಸ ಮಾಡಿದ್ದಾರೆ.

ಬಸ್ ನಿಲ್ದಾಣವನ್ನು ತೊಳೆಯುವ ಮೂಲಕ ಹಾಗೂ ಕಸ ಗುಡಿಸುವ ಮೂಲಕ ಸ್ವಚ್ಚತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಉಗುಳಿರುವ ಗುಟ್ಕಾ ಕಲೆಯನ್ನು ಕೈಯಲ್ಲಿ ಬ್ರಷ್ ಹಿಡಿದುಕೊಂಡು ಸ್ವಚ್ಛ ಮಾಡುವ ಮೂಲಕ ಗುಟ್ಕಾ, ಎಲೆ ಅಡಿಕೆ ತಿಂದು ಉಗುಳುವವರಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.

ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿವೇಕಾನಂದ ವಿಶ್ವಜ್ಞ ಅವರ ಮಾರ್ಗದರ್ಶನದಲ್ಲಿ ಇಂತಹ ಮಹತ್ವದ ಕಾರ್ಯ ನಡೆದಿದೆ. ಸಿಬ್ಬಂದಿಗಳು ತಮ್ಮ ನಿತ್ಯದ ಕರ್ತವ್ಯ ನಿರ್ವಹಿಸುವ ಜೊತೆಗೆ ಇಂತಹ ಸಾಮಾಜಿಕ ಜವಾಬ್ದಾರಿ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. ಒಟ್ಟಿನಲ್ಲಿ ಸಿಬ್ಬಂದಿಯ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದೆ.

ಅಲ್ಲದೆ ಕೊರೊನಾ ಸೋಂಕು ಆತಂಕ ಮೂಡಿಸಿರುವ ಈ ಸಂದರ್ಭದಲ್ಲಿ ಜನರು ಕೂಡ ಜವಾಬ್ದಾರಿಯಿಂದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಿದೆ. ಇದೇ ವೇಳೆ ಮಾಸ್ಕ್ ಧರಿಸದೇ ಓಡಾಡುವವರಿಗೆ ಕೊವಿಡ್19 ತಡೆಗಟ್ಟುವ ಸಲುವಾಗಿ ತಮ್ಮ ಹಣದಲ್ಲಿಯೇ ಮಾಸ್ಕ್ ಖರೀದಿಸಿ ವಿತರಣೆ ಮಾಡುತ್ತಿರುವ ಕಾರ್ಯವೂ ನಡೆದಿರುವುದು ವಿಶೇಷವಾಗಿದೆ.

ವರದಿ: ದತ್ತಾತ್ರೇಯ ಪಾಟೀಲ್, ಟಿವಿ9 ಹುಬ್ಬಳ್ಳಿ

ಇದನ್ನೂ ಓದಿ: ಹುಬ್ಬಳ್ಳಿ: ದೂರು ನೀಡಲು ಹೋಗಿದ್ದವರ ಮೇಲೆ ಪಿಎಸ್ಐ ಧಮ್ಕಿ; ಮನನೊಂದು ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನ

ಇದನ್ನೂ ಓದಿ: ಹುಬ್ಬಳ್ಳಿ: ಪಂಚಮಸಾಲಿ ಸಮಾಜದ ಮೂರನೇ ಪೀಠ ಸ್ಥಾಪನೆಗೆ ಸ್ವಾಗತ ಕೋರಿದ ಮಠಾಧೀಶರರು

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ