AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಸ್ವಯಂಪ್ರೇರಿತರಾಗಿ ಬಸ್ ನಿಲ್ದಾಣದ ಸ್ವಚ್ಛತೆಗೆ ನಿಂತ ಸಾರಿಗೆ ಸಿಬ್ಬಂದಿ; ಶುಚಿತ್ವ ಕಾಪಾಡಲು ಮನವಿ

ಸಿಬ್ಬಂದಿಗಳು ತಮ್ಮ ನಿತ್ಯದ ಕರ್ತವ್ಯ ನಿರ್ವಹಿಸುವ ಜೊತೆಗೆ ಇಂತಹ ಸಾಮಾಜಿಕ ಜವಾಬ್ದಾರಿ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. ಒಟ್ಟಿನಲ್ಲಿ ಸಿಬ್ಬಂದಿಯ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದೆ.

ಹುಬ್ಬಳ್ಳಿ: ಸ್ವಯಂಪ್ರೇರಿತರಾಗಿ ಬಸ್ ನಿಲ್ದಾಣದ ಸ್ವಚ್ಛತೆಗೆ ನಿಂತ ಸಾರಿಗೆ ಸಿಬ್ಬಂದಿ; ಶುಚಿತ್ವ ಕಾಪಾಡಲು ಮನವಿ
ಬಸ್ ನಿಲ್ದಾಣದ ಸ್ವಚ್ಛತೆಗೆ ನಿಂತ ಸಾರಿಗೆ ಸಿಬ್ಬಂದಿ
TV9 Web
| Edited By: |

Updated on: Jan 30, 2022 | 9:20 PM

Share

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಸಿಬಿಟಿ ಬಸ್ ನಿಲ್ದಾಣ ಇತ್ತೀಚೆಗಷ್ಟೇ ನಿರ್ಮಾಣವಾಗಿದೆ. ಆದರೆ ಹೊಸ ಬಸ್ ನಿಲ್ದಾಣದ ಚಿತ್ರಣ ಗುಟ್ಕಾ ತಿನ್ನುವವರ ಕೈಯಲ್ಲಿ ಸಿಲುಕಿ ಸಂಪೂರ್ಣ ಹಾಳಾಗಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಸ್ವಯಂಪ್ರೇರಿತರಾಗಿ ಸ್ವಚ್ಚತೆಯನ್ನು ಮಾಡಿದ್ದಾರೆ. ನಗರ ಸಾರಿಗೆ ಸಿಬ್ಬಂದಿ ಸಿಬಿಟಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಬೇಸತ್ತು ಬೆಳ್ಳಂಬೆಳಿಗ್ಗೆ ಸ್ವಚ್ಚತೆ ಮಾಡಲು ಮುಂದಾಗಿ ಸ್ವಚ್ಛತೆಯ ಕೆಲಸ ಮಾಡಿದ್ದಾರೆ.

ಬಸ್ ನಿಲ್ದಾಣವನ್ನು ತೊಳೆಯುವ ಮೂಲಕ ಹಾಗೂ ಕಸ ಗುಡಿಸುವ ಮೂಲಕ ಸ್ವಚ್ಚತೆ ಮಾಡಿದ್ದಾರೆ. ಎಲ್ಲೆಂದರಲ್ಲಿ ಉಗುಳಿರುವ ಗುಟ್ಕಾ ಕಲೆಯನ್ನು ಕೈಯಲ್ಲಿ ಬ್ರಷ್ ಹಿಡಿದುಕೊಂಡು ಸ್ವಚ್ಛ ಮಾಡುವ ಮೂಲಕ ಗುಟ್ಕಾ, ಎಲೆ ಅಡಿಕೆ ತಿಂದು ಉಗುಳುವವರಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.

ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿವೇಕಾನಂದ ವಿಶ್ವಜ್ಞ ಅವರ ಮಾರ್ಗದರ್ಶನದಲ್ಲಿ ಇಂತಹ ಮಹತ್ವದ ಕಾರ್ಯ ನಡೆದಿದೆ. ಸಿಬ್ಬಂದಿಗಳು ತಮ್ಮ ನಿತ್ಯದ ಕರ್ತವ್ಯ ನಿರ್ವಹಿಸುವ ಜೊತೆಗೆ ಇಂತಹ ಸಾಮಾಜಿಕ ಜವಾಬ್ದಾರಿ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. ಒಟ್ಟಿನಲ್ಲಿ ಸಿಬ್ಬಂದಿಯ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದೆ.

ಅಲ್ಲದೆ ಕೊರೊನಾ ಸೋಂಕು ಆತಂಕ ಮೂಡಿಸಿರುವ ಈ ಸಂದರ್ಭದಲ್ಲಿ ಜನರು ಕೂಡ ಜವಾಬ್ದಾರಿಯಿಂದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಿದೆ. ಇದೇ ವೇಳೆ ಮಾಸ್ಕ್ ಧರಿಸದೇ ಓಡಾಡುವವರಿಗೆ ಕೊವಿಡ್19 ತಡೆಗಟ್ಟುವ ಸಲುವಾಗಿ ತಮ್ಮ ಹಣದಲ್ಲಿಯೇ ಮಾಸ್ಕ್ ಖರೀದಿಸಿ ವಿತರಣೆ ಮಾಡುತ್ತಿರುವ ಕಾರ್ಯವೂ ನಡೆದಿರುವುದು ವಿಶೇಷವಾಗಿದೆ.

ವರದಿ: ದತ್ತಾತ್ರೇಯ ಪಾಟೀಲ್, ಟಿವಿ9 ಹುಬ್ಬಳ್ಳಿ

ಇದನ್ನೂ ಓದಿ: ಹುಬ್ಬಳ್ಳಿ: ದೂರು ನೀಡಲು ಹೋಗಿದ್ದವರ ಮೇಲೆ ಪಿಎಸ್ಐ ಧಮ್ಕಿ; ಮನನೊಂದು ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನ

ಇದನ್ನೂ ಓದಿ: ಹುಬ್ಬಳ್ಳಿ: ಪಂಚಮಸಾಲಿ ಸಮಾಜದ ಮೂರನೇ ಪೀಠ ಸ್ಥಾಪನೆಗೆ ಸ್ವಾಗತ ಕೋರಿದ ಮಠಾಧೀಶರರು

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ