AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆಗೆ ನೀಡಬೇಕಿದ್ದ 414 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ

ಸಾರಿಗೆ ಇಲಾಖೆಗೆ ನೀಡಬೇಕಿರುವ 414 ಕೋಟಿ ರೂ. ಅನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವೆಚ್ಚವನ್ನು ಸರ್ಕಾರ ಪೂರ್ತಿಯಾಗಿ ಭರಿಸಬೇಕಿದೆ. ಹೀಗಾಗಿ, ಎನ್​​ಡಬ್ಲೂಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಎಮ್. ಪ್ರಿಯಾಂಗ ಅವರು ಸರ್ಕಾರಕ್ಕೆ ಪತ್ರ ಬರೆದು ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ಸರ್ಕಾರ ಈ ಬಗ್ಗೆ ಧನಾತ್ಮಕ ಪ್ರತಿಕ್ರಿಯೆ ನೀಡುವ ನಿರೀಕ್ಷೆಯಿದೆ ಎಂದು ವ್ಯವಸ್ಥಾಪಕ ನಿರ್ದೇಶಕಿ ಹೇಳಿದ್ದಾರೆ.

ಸಾರಿಗೆ ಇಲಾಖೆಗೆ ನೀಡಬೇಕಿದ್ದ 414 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ
ಎನ್​ಡಬ್ಲೂಕೆಆರ್​ಟಿಸಿಯ ಎಂಡಿ ಎಂ ಪ್ರಿಯಾಂಗಾ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Dec 22, 2024 | 10:53 AM

Share

ಹುಬ್ಬಳ್ಳಿ, ಡಿಸೆಂಬರ್​ 22: ಬಾಕಿ ಇರುವ 414 ಕೋಟಿ ರೂ. ಬಿಡುಗಡೆ ಮಾಡುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKSRTC)ದ ವ್ಯವಸ್ಥಾಪಕ ನಿರ್ದೇಶಕಿ ಎಮ್​. ಪ್ರಿಯಾಂಗಾ ಅವರು ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಎಮ್​. ಪ್ರಿಯಾಂಗಾ ಮಾತನಾಡಿ, ನಾಲ್ಕು ವಿಭಾಗದ ನಿರ್ದೇಶಕ ಮಂಡಳಿಯಲ್ಲೂ ಈ ವಿಚಾರ ಚರ್ಚೆಯಾಗಿದೆ. ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದೇವೆ. ಹಣ ಬಿಡುಗಡೆ ‌ಮಾಡುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಎನ್​ಡಬ್ಲೂಕೆಎಸ್​ಆರ್​ಟಿಸಿಯಲ್ಲಿ ಒಂದು ದಿನಕ್ಕೆ ಸುಮಾರು 25 ಲಕ್ಷ ಜನ ಪ್ರಯಾಣ ಮಾಡುತ್ತಾರೆ. ಇದರಲ್ಲಿ ಸರಾಸರಿ 16 ಲಕ್ಷ ಜನ ಶಕ್ತಿ ಯೋಜನೆ ಫಲಾನುಭವಿಗಳು ಪ್ರಯಾಣ ಮಾಡುತ್ತಾರೆ. ಒಂದು ತಿಂಗಳಿಗೆ 120 ಕೋಟಿ ಶೂನ್ಯ ಟಿಕೆಟ್ ಪ್ರಯಾಣದ ದರವಾಗತ್ತೆ. ಈ‌ ಪೈಕಿ ಸರ್ಕಾರದಿಂದ 102 ಕೋಟಿ ಹಣ ವಾಪಸ್ ಬರುತ್ತಿದೆ. ಬಾಕಿ 414 ಕೋಟಿ ಹಣ ಬರಬೇಕಾಗಿದೆ. ಈ ವಿಚಾರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದಾರೆ ಎಂದು ಹೇಳಿದರು.

ವಿಧಾನಸಭೆಯಲ್ಲೂ ಪ್ರಸ್ತಾಪವಾಗಿತ್ತು ಬಾಕಿ ಹಣದ ವಿಚಾರ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದಿಂದ ನಾಲ್ಕೂ ನಿಗಮಕ್ಕೆ ನೀಡಬೇಕಾಗಿರುವ ಬಾಕಿ ಅನುದಾನ ಬಗ್ಗೆ ಚರ್ಚೆಯಾಗಿತ್ತು. ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಶಕ್ತಿ ಯೋಜನೆಗೆ ಅನುದಾನ ನೀಡುವ ಕುರಿತು ವಿಪಕ್ಷ ಉಪನಾಯಕ ಬೆಲ್ಲದ್ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

ಇದಕ್ಕೆ ಉತ್ತರಿಸಿದ್ದ ಸರ್ಕಾರ, 2023ರ ಜೂನ್​ನಿಂದ 2024ರ ಅಕ್ಟೋಬರ್​ವರೆಗೆ ಬಾಕಿ ಇರುವ ಅನುದಾನದ ವಿವರ ನೀಡಿತ್ತು. ಕೆಎಸ್‌ಆರ್‌ಟಿಸಿಗೆ 683 ಕೋಟಿ ರೂ., ಬಿಎಂಟಿಸಿಗೆ 280 ಕೋಟಿ ರೂ., ವಾಯುವ್ಯ ಸಾರಿಗೆಗೆ 394 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆಗೆ 335 ಕೋಟಿ ರೂ. ನೀಡುವುದು ಬಾಕಿ ಇದೆ ಎಂದು ಹೇಳಿತ್ತು. ಒಟ್ಟು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ 1694 ಕೋಟಿ ಅನುದಾನ ನೀಡುವುದು ಬಾಕಿ ಇದೆ.

ಬಿಡುಗಡೆಯಾಗಿರುವ ಒಟ್ಟು ಅನುದಾನ

ಕೆಎಸ್​ಆರ್​ಟಿಸಿಗೆ 2481 ಕೋಟಿ ರೂ., ಬಿಎಂಟಿಸಿಗೆ 1126 ಕೋಟಿ ರೂ., ವಾಯುವ್ಯ ಸಾರಿಗೆಗೆ 1613 ಕೋಟಿ ರೂ. ಕಲ್ಯಾಣ ಕರ್ನಾಟಕ ಸಾರಿಗೆಗೆ 1321 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಒಟ್ಟು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ 6543 ಕೋಟಿ ರೂ. ಅನುದಾನವನ್ನು ಸರ್ಕಾರ 2023ರ ಜೂನ್​​ನಿಂದ 2024ರ ನವೆಂಬರ್​​ವರೆಗೆ ಬಿಡುಗಡೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ