AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು: ಸಾಂವಿಧಾನಿಕ ಮಾನ್ಯತೆಗೆ ಮತ್ತೊಮ್ಮೆ ಶಿಫಾರಸ್ಸು ಮಾಡುವಂತೆ ಕೇಂದ್ರಕ್ಕೆ ಒತ್ತಾಯ

ಕರ್ನಾಟಕದಲ್ಲಿ ಸ್ವತಂತ್ರ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಲಿಂಗಾಯತ ಪ್ರತ್ಯೇಕ ಧರ್ಮವನ್ನು ಸಾಂವಿಧಾನಿಕ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಲಾಗುತ್ತಿದೆ.

ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು: ಸಾಂವಿಧಾನಿಕ ಮಾನ್ಯತೆಗೆ ಮತ್ತೊಮ್ಮೆ ಶಿಫಾರಸ್ಸು ಮಾಡುವಂತೆ ಕೇಂದ್ರಕ್ಕೆ ಒತ್ತಾಯ
ಪ್ರಾತಿನಿಧಿಕ ಚಿತ್ರImage Credit source: naanugauri.com
TV9 Web
| Edited By: |

Updated on: Feb 11, 2023 | 2:46 PM

Share

ಹುಬ್ಬಳ್ಳಿ: ಕರ್ನಾಟಕದಲ್ಲಿ ಸ್ವತಂತ್ರ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಲಿಂಗಾಯತ (Lingayats) ಪ್ರತ್ಯೇಕ ಧರ್ಮವನ್ನು ಸಾಂವಿಧಾನಿಕ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಲಾಗುತ್ತಿದೆ. ನ್ಯಾ. ನಾಗಮೋಹನದಾಸ್ ಸಮಿತಿ ವರದಿ ಶಿಫಾರಸು ಮಾಡುವಂತೆ ಆಗ್ರಹಿಸಿದ್ದು, ಈ ಹಿನ್ನೆಲೆ ಫೆ.20ರಂದು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಬೃಹತ್ ಹೋರಾಟ ಕೈಗೊಳ್ಳಲಾಗಿದೆ. ಈ ಕುರಿತಾಗಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ, ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ ಆಗ ಕೇಂದ್ರ ಸರ್ಕಾರ ಪ್ರತ್ಯೇಕ ಧರ್ಮ ಮಾನ್ಯತೆಗೆ ಒಪ್ಪಿರಲಿಲ್ಲ ಎಂದು ತಿಳಿಸಿದರು.

ಈಗ ಕೇಂದ್ರ ಮತ್ತು ರಾಜ್ಯದಲ್ಲೂ ಬಿಜೆಪಿಯೇ ಆಡಳಿತದಲ್ಲಿ ಇದೆ. ಹೀಗಾಗಿ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಮತ್ತೆ ಶಿಫಾರಸು ಮಾಡಬೇಕು. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಅಂತಾ ಘೋಷಿಸಬೇಕು. ಕಲಬುರಗಿ ವಿವಿಗೆ ಬಸವೇಶ್ವರ ವಿವಿ ಅಂತಾ ಮರುನಾಮಕರಣ ಮಾಡಬೇಕು. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ರೆ ಲಕ್ಷಾಂತರ ಲಿಂಗಾಯತ ಧರ್ಮೀಯರು ಶಕ್ತಿ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಚನ್ನಬಸವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಲಿಂಗಾಯತ ಧರ್ಮ ನಮ್ಮ ಅಸ್ಮಿತೆ, ರಾಜಕೀಯ ಬಳಕೆ ಇಲ್ಲ: ಎಂಬಿ ಪಾಟೀಲ

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವವರಿಗೆ ನಮ್ಮ ಬೆಂಬಲ

ಧೈರ್ಯ ಇದ್ದರೇ ಪಂಚಾಚಾರ್ಯರು ವೀರಶೈವ ಅಂತ ಹೇಳಿಕೊಳ್ಳಲಿ. ಪಂಚಾಚಾರ್ಯರು ಯಾಕೆ ಲಿಂಗಾಯತ ಧರ್ಮಕ್ಕೆ ಗಂಟುಬಿದ್ದಿದ್ದಾರೆ ಎಂದು ಪ್ರಶ್ನಿಸಿದರು. ದೇಶದಲ್ಲಿ ಎಲ್ಲಾ ಜಾತಿಗಳಿಗೆ ನೀಡುವ ಮೀಸಲಾತಿ ತೆಗೆದುಹಾಕಬೇಕು. ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವವರಿಗೆ ನಮ್ಮ ಬೆಂಬಲವಿದೆ. ಎಸ್​ಡಿಪಿಐ, ಎಐಎಂಐಎಂ ಪ್ರಣಾಳಿಕೆಯಲ್ಲಿ ಬೇಡಿಕೆ ನೀಡಿದ್ರೆ ಲಿಂಗಾಯತರು ಬೆಂಬಲಿಸುತ್ತೇವೆ ಎಂದರು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್​ಗೆ ತರಲು ಯತ್ನ: ಮಾಜಿ ಸಚಿವ ಎಂ ಬಿ ಪಾಟೀಲ್

ಭಾರತದಲ್ಲಿರುವ ಎಲ್ಲಾ ಧರ್ಮೀಯರು ಹಿಂದೂಗಳೇ

ಹಿಂದೂ ಎಂಬುವುದು ಒಂದು ಧರ್ಮವಲ್ಲ, ಅದು ವರ್ಗಕ್ಕೆ ಸೀಮಿತವಲ್ಲ. ಭಾರತದಲ್ಲಿರುವ ಎಲ್ಲಾ ಧರ್ಮೀಯರು ಹಿಂದೂಗಳೇ. ಜೈನ, ಬೌದ್ಧ, ಶಿಖ್ ಧರ್ಮಕ್ಕೆ ನೀಡಿದಂತೆ ಪ್ರತ್ಯೇಕ ಧರ್ಮ ಬೇಕು. ಅದೇ ರೀತಿ ನಮಗೂ ಲಿಂಗಾಯತ ಪ್ರತ್ಯೇಕ ಧರ್ಮ ಬೇಕು. ಕಾವಿಧಾರಿಗಳು ಚುನಾವಣೆಗೆ ನಿಲ್ಲಬಾರದೆಂಬ ಯಾವುದೇ ನಿಯಮಗಳಿಲ್ಲ. ಕಾವಿಧಾರಿಗಳು ಬಿಜೆಪಿಗೆ ಸೀಮಿತವಾಗಿಲ್ಲ ಎಂದು ಚನ್ನಬಸವ ಸ್ವಾಮೀಜಿ ಗುಡುಗಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ