AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು: ಸಾಂವಿಧಾನಿಕ ಮಾನ್ಯತೆಗೆ ಮತ್ತೊಮ್ಮೆ ಶಿಫಾರಸ್ಸು ಮಾಡುವಂತೆ ಕೇಂದ್ರಕ್ಕೆ ಒತ್ತಾಯ

ಕರ್ನಾಟಕದಲ್ಲಿ ಸ್ವತಂತ್ರ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಲಿಂಗಾಯತ ಪ್ರತ್ಯೇಕ ಧರ್ಮವನ್ನು ಸಾಂವಿಧಾನಿಕ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಲಾಗುತ್ತಿದೆ.

ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು: ಸಾಂವಿಧಾನಿಕ ಮಾನ್ಯತೆಗೆ ಮತ್ತೊಮ್ಮೆ ಶಿಫಾರಸ್ಸು ಮಾಡುವಂತೆ ಕೇಂದ್ರಕ್ಕೆ ಒತ್ತಾಯ
ಪ್ರಾತಿನಿಧಿಕ ಚಿತ್ರImage Credit source: naanugauri.com
TV9 Web
| Edited By: |

Updated on: Feb 11, 2023 | 2:46 PM

Share

ಹುಬ್ಬಳ್ಳಿ: ಕರ್ನಾಟಕದಲ್ಲಿ ಸ್ವತಂತ್ರ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಲಿಂಗಾಯತ (Lingayats) ಪ್ರತ್ಯೇಕ ಧರ್ಮವನ್ನು ಸಾಂವಿಧಾನಿಕ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಲಾಗುತ್ತಿದೆ. ನ್ಯಾ. ನಾಗಮೋಹನದಾಸ್ ಸಮಿತಿ ವರದಿ ಶಿಫಾರಸು ಮಾಡುವಂತೆ ಆಗ್ರಹಿಸಿದ್ದು, ಈ ಹಿನ್ನೆಲೆ ಫೆ.20ರಂದು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಬೃಹತ್ ಹೋರಾಟ ಕೈಗೊಳ್ಳಲಾಗಿದೆ. ಈ ಕುರಿತಾಗಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ, ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ ಆಗ ಕೇಂದ್ರ ಸರ್ಕಾರ ಪ್ರತ್ಯೇಕ ಧರ್ಮ ಮಾನ್ಯತೆಗೆ ಒಪ್ಪಿರಲಿಲ್ಲ ಎಂದು ತಿಳಿಸಿದರು.

ಈಗ ಕೇಂದ್ರ ಮತ್ತು ರಾಜ್ಯದಲ್ಲೂ ಬಿಜೆಪಿಯೇ ಆಡಳಿತದಲ್ಲಿ ಇದೆ. ಹೀಗಾಗಿ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಮತ್ತೆ ಶಿಫಾರಸು ಮಾಡಬೇಕು. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ಅಂತಾ ಘೋಷಿಸಬೇಕು. ಕಲಬುರಗಿ ವಿವಿಗೆ ಬಸವೇಶ್ವರ ವಿವಿ ಅಂತಾ ಮರುನಾಮಕರಣ ಮಾಡಬೇಕು. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ರೆ ಲಕ್ಷಾಂತರ ಲಿಂಗಾಯತ ಧರ್ಮೀಯರು ಶಕ್ತಿ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಚನ್ನಬಸವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಲಿಂಗಾಯತ ಧರ್ಮ ನಮ್ಮ ಅಸ್ಮಿತೆ, ರಾಜಕೀಯ ಬಳಕೆ ಇಲ್ಲ: ಎಂಬಿ ಪಾಟೀಲ

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವವರಿಗೆ ನಮ್ಮ ಬೆಂಬಲ

ಧೈರ್ಯ ಇದ್ದರೇ ಪಂಚಾಚಾರ್ಯರು ವೀರಶೈವ ಅಂತ ಹೇಳಿಕೊಳ್ಳಲಿ. ಪಂಚಾಚಾರ್ಯರು ಯಾಕೆ ಲಿಂಗಾಯತ ಧರ್ಮಕ್ಕೆ ಗಂಟುಬಿದ್ದಿದ್ದಾರೆ ಎಂದು ಪ್ರಶ್ನಿಸಿದರು. ದೇಶದಲ್ಲಿ ಎಲ್ಲಾ ಜಾತಿಗಳಿಗೆ ನೀಡುವ ಮೀಸಲಾತಿ ತೆಗೆದುಹಾಕಬೇಕು. ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವವರಿಗೆ ನಮ್ಮ ಬೆಂಬಲವಿದೆ. ಎಸ್​ಡಿಪಿಐ, ಎಐಎಂಐಎಂ ಪ್ರಣಾಳಿಕೆಯಲ್ಲಿ ಬೇಡಿಕೆ ನೀಡಿದ್ರೆ ಲಿಂಗಾಯತರು ಬೆಂಬಲಿಸುತ್ತೇವೆ ಎಂದರು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್​ಗೆ ತರಲು ಯತ್ನ: ಮಾಜಿ ಸಚಿವ ಎಂ ಬಿ ಪಾಟೀಲ್

ಭಾರತದಲ್ಲಿರುವ ಎಲ್ಲಾ ಧರ್ಮೀಯರು ಹಿಂದೂಗಳೇ

ಹಿಂದೂ ಎಂಬುವುದು ಒಂದು ಧರ್ಮವಲ್ಲ, ಅದು ವರ್ಗಕ್ಕೆ ಸೀಮಿತವಲ್ಲ. ಭಾರತದಲ್ಲಿರುವ ಎಲ್ಲಾ ಧರ್ಮೀಯರು ಹಿಂದೂಗಳೇ. ಜೈನ, ಬೌದ್ಧ, ಶಿಖ್ ಧರ್ಮಕ್ಕೆ ನೀಡಿದಂತೆ ಪ್ರತ್ಯೇಕ ಧರ್ಮ ಬೇಕು. ಅದೇ ರೀತಿ ನಮಗೂ ಲಿಂಗಾಯತ ಪ್ರತ್ಯೇಕ ಧರ್ಮ ಬೇಕು. ಕಾವಿಧಾರಿಗಳು ಚುನಾವಣೆಗೆ ನಿಲ್ಲಬಾರದೆಂಬ ಯಾವುದೇ ನಿಯಮಗಳಿಲ್ಲ. ಕಾವಿಧಾರಿಗಳು ಬಿಜೆಪಿಗೆ ಸೀಮಿತವಾಗಿಲ್ಲ ಎಂದು ಚನ್ನಬಸವ ಸ್ವಾಮೀಜಿ ಗುಡುಗಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ