AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಗುಲಿ ಸ್ನೇಹಿತ ಸಾವು- ತನಿಖೆ ವೇಳೆ ಮಿಸ್ಸಿಂಗ್ ಕೇಸಿಗೆ ಟ್ವಿಸ್ಟ್, ನಕಲಿ ಸಹಿ -ಮ್ಯಾನೇಜರ್ ಸೇರಿ 8 ಜನರ ವಿರುದ್ಧ ಎಫ್​ಐಆರ್

ಬ್ಯಾಂಕ್ ಮ್ಯಾನೇಜರ್ ಸಂಧ್ಯಾ ನಕಲಿ ಸಹಿ ಮಾಡಿಸಿ, ಸಾಲ ಮಂಜೂರು ಮಾಡಿದ್ದರು. ಬ್ಯಾಂಕ್ ಸಾಲ ಮರುಪಾವತಿ ಆಗದ ಹಿನ್ನೆಲೆ, ಪ್ರಕರಣ ಬೆಳಕಿಗೆ ಬಂದಿತ್ತು.

ವಿದ್ಯುತ್ ತಗುಲಿ ಸ್ನೇಹಿತ ಸಾವು- ತನಿಖೆ ವೇಳೆ ಮಿಸ್ಸಿಂಗ್ ಕೇಸಿಗೆ ಟ್ವಿಸ್ಟ್, ನಕಲಿ ಸಹಿ -ಮ್ಯಾನೇಜರ್ ಸೇರಿ 8 ಜನರ ವಿರುದ್ಧ ಎಫ್​ಐಆರ್
ನಕಲಿ ಸಹಿ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಜನರ ವಿರುದ್ಧ FIR ದಾಖಲು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 05, 2022 | 1:22 PM

ಹುಬ್ಬಳ್ಳಿ: ನಕಲಿ ಸಹಿ ಬಳಸಿ 35 ಲಕ್ಷ ರೂಪಾಯಿ ದುರ್ಬಳಕೆ ಆರೋಪ ಕೇಳಿಬಂದಿದ್ದು, ಬ್ಯಾಂಕ್ ಮ್ಯಾನೇಜರ್ ಸೇರಿ 8 ಜನರ ವಿರುದ್ಧ FIR ದಾಖಲು ಮಾಡಲಾಗಿದೆ. ನಕಲಿ ಸಹಿ ಬಳಸಿ 7 ಜನರಿಗೆ ತಲಾ 5 ಲಕ್ಷ ರೂಪಾಯಿಯಂತೆ ಸಾಲ ವಿತರಿಸಲಾಗಿತ್ತು. ಬ್ಯಾಂಕ್ ಮ್ಯಾನೇಜರ್ ಸಂಧ್ಯಾ ಟಿ.ಸಿ ಅವರು ಆರೋಪಿಗಳ ಜತೆ ಸೇರಿ ಸಾಲ ನೀಡಿದ್ದರು. ಒಟ್ಟು 8 ಜನರ ವಿರುದ್ಧ FIR ದಾಖಲಿಸಿಕೊಳ್ಳಲಾಗಿದೆ. ಬ್ಯಾಂಕ್ ಮ್ಯಾನೇಜರ್ ಸಂಧ್ಯಾ ನಕಲಿ ಸಹಿ ಮಾಡಿಸಿ, ಸಾಲ ಮಂಜೂರು ಮಾಡಿದ್ದರು. ಬ್ಯಾಂಕ್ ಸಾಲ ಮರುಪಾವತಿ ಆಗದ ಹಿನ್ನೆಲೆ, ಪ್ರಕರಣ ಬೆಳಕಿಗೆ ಬಂದಿತ್ತು. ಅದೇ ಬ್ಯಾಂಕ್ ಉದ್ಯೋಗಿಯಿಂದ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿದ್ಯುತ್ ತಗುಲಿ ಸ್ನೇಹಿತನ ಸಾವು- ತುಮಕೂರು‌ ಪೊಲೀಸ್ ತನಿಖೆಯಲ್ಲಿ ಸಿಕ್ತು ಮಿಸ್ಸಿಂಗ್ ಕೇಸ್ ಗೆ ಟ್ವಿಸ್ಟ್: ತುಮಕೂರು‌: ಪೊಲೀಸ್ ತನಿಖೆಯಲ್ಲಿ ಮಿಸ್ಸಿಂಗ್ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಕಾಣೆಯಾದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದೆ. ವಿದ್ಯುತ್ ತಗುಲಿ ವ್ಯಕ್ತಿಯ ಸಾವು ಸಂಭವಿಸಿದ್ದು, ಪ್ರಕರಣ ಮುಚ್ಚಿಹಾಕಲು ಸ್ನೇಹಿತನ ಶವವನ್ನು ಇಬ್ಬರು ಮುಚ್ಚಿಟ್ಟಿದ್ದರು. ಪ್ರಕರಣದ ಸಂಬಂಧ ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸರು ರೋಹಿತ್ ಹಾಗೂ ವಿನಯ್ ಎಂಬಿಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ತೊರೆಮಾವಿನ ಹಳ್ಳಿಯಲ್ಲಿ ಘಟನೆ ನಡೆದಿತ್ತು.

ಏನಿದು ಪ್ರಕರಣ: ಯೋಗೇಶ್, ರೋಹಿತ್ ಹಾಗೂ ವಿನಯ್ ಮೂವರೂ ಸ್ನೇಹಿತರು. ರೋಹಿತ್ ತೋಟದಲ್ಲಿ ವಿದ್ಯುತ್ ಕಂಬದ ವೈರ್ ಸರಿ ಮಾಡಲು ಮೂವರೂ ಸ್ನೇಹಿತರು ಹೋಗಿದ್ದರು. ಈ ವೇಳೆ ವಿದ್ಯುತ್ ತಗುಲಿ ಯೋಗೇಶ್ ಸಾವನ್ನಪ್ಪಿದ್ದ. ಯೋಗೇಶನ ಶವವನ್ನ ಬೇರೆಡೆಗೆ ಬಿಸಾಡಿದ್ದ ಇನ್ನಿಬ್ಬರು ಮಿಸ್ಸಿಂಗ್ ಸೀನ್ ಕ್ರಿಯೇಟ್ ಮಾಡಿದ್ದರು. ಪ್ರಕರಣದ ದಿಕ್ಕು ತಪ್ಪಿಸಲು ಶವವನ್ನ 90 ಕಿಲೋ ಮೀಟರ್ ದೂರ ಬೈಕ್ ನಲ್ಲಿ ಕೊಂಡೊಯ್ದು ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಸೇತುವೆಯೊಂದರ ಕೆಳಗೆ ಬಿಸಾಡಿ ಬಂದಿದ್ರು. ಬಳಿಕ  ಪ್ರಕರಣದ ಸುಳಿವು ಸಿಗದಂತೆ ತಿಪಟೂರಿನ ಕೆಬಿ ಕ್ರಾಸ್ ಬಳಿ ಬೈಕ್ ನಿಲ್ಲಿಸಿದ್ದರು.

ಯೋಗೇಶ್ ಮಿಸ್ಸಿಂಗ್ ಆಗಿರುವ ಹಾಗೆ ಸೀನ್ ಕ್ರಿಯೇಟ್ ಮಾಡಿದರು. ಇತ್ತ ತುರುವೇಕೆರೆ ಪೊಲೀಸರು ಯೋಗೇಶ್ ಕಾಣೆಯಾದ ಬಗ್ಗೆ ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡಿದ್ದರು. ಯೋಗೇಶ್ ಮಿಸ್ಸಿಂಗ್ ಆಗಿರುವ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು. ಅತ್ತ, ದೂರು ದಾಖಲಾಗುತ್ತಿದ್ದಂತೆ ಆರೋಪಿಯೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ. ಪೊಲೀಸರಿಗೆ ಸಿಕ್ಕಿ ಬೀಳುವ ಭಯದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ರೋಹಿತ್.

ಈ ವೇಳೆ ಆರೋಪಿಯೊಬ್ಬನ ವಿಚಾರಣೆ ನಡೆಸಿದಾಗ ಯೋಗೇಶ್ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ರೋಹಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರೋಹಿತ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೊಬ್ಬ ಆರೋಪಿ ವಿನಯ್ ನನ್ನೂ ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ.

ಈ ಮಧ್ಯೆ, ಪೊಲೀಸರು ಯೋಗೇಶನ ಮೃತದೇಹವನ್ನ ಪತ್ತೆ ಹಚ್ಚಿ ಆತನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಸದ್ಯ ಪೊಲೀಸರು ಮೃತ ಯೋಗೇಶ್ ಮರಣೋತ್ತರ ಪರೀಕ್ಷೆ ವರದಿಗೆ ಕಾಯುತ್ತಿದ್ದಾರೆ. ತುರುವೇಕೆರೆ ಪೊಲೀಸರಿಂದ ಪ್ರಕರಣದ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಕೋಟಿ ಅಪಾಯಗಳೇ ಎದುರಾಗಲಿ, ಈ ಸರಳ ಉಪಾಯ ಒಂದು ಸಾಕು! ಯಾವುದದು?

ಇದನ್ನೂ ಓದಿ: Ukraine Crisis: ಮಹಿಳೆಯರ ಮೇಲೆ ರಷ್ಯನ್ ಪಡೆಗಳು ಅತ್ಯಾಚಾರವೆಸಗುತ್ತಿವೆ; ಉಕ್ರೇನ್ ಗಂಭೀರ ಆರೋಪ

Published On - 12:59 pm, Sat, 5 March 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ