AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ- ಯತ್ನಾಳ್​ ಎಡವಟ್ಟು

ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪದ ಹಿನ್ನಲೆ ಯತ್ನಾಳ್​ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ದ ಎಫ್​ಐಆರ್​​ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda patil yatnal) ಹಳಿ ತಪ್ಪಿದ್ದಾರೆ.

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ- ಯತ್ನಾಳ್​ ಎಡವಟ್ಟು
ಬಸನಗೌಡ ಪಾಟೀಲ್​ ಯತ್ನಾಳ್​
ಶಿವಕುಮಾರ್ ಪತ್ತಾರ್
| Edited By: |

Updated on: Apr 26, 2024 | 10:15 PM

Share

ಹುಬ್ಬಳ್ಳಿ, ಏ.26: ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda patil yatnal) ಹಳಿ ತಪ್ಪಿದ್ದಾರೆ. ಧಾರವಾಡ ಜಿಲ್ಲೆಯ ‌ಕುಂದಗೋಳದಲ್ಲಿ ಪ್ರಹ್ಲಾದ್‌ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಸಚಿವ ದಿನೇಶ್‌ ಗುಂಡೂರಾವ್ ಹುಚ್ಚರು, ನಮ್ಮ ದೇಶ ಆಳಲು ರಾಹುಲ್ ಸಮರ್ಥನಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಗೆದ್ರೆ ಬಟಾಯಿಂದ ಬಂಗಾರ

ಇದೇ ವೇಳೆ ರಾಹುಲ್ ಗಾಂಧಿ ಗೆದ್ರೆ ಬಟಾಯಿಂದ ಬಂಗಾರ ಬರುತ್ತದೆ, ಇದನ್ನು ರಾಹುಲ್ ಗಾಂಧಿನೇ ಹೇಳಿದ್ದು. ಬಂಗಾರ ಬಂದ್ರೆ ನಮ್ಮ ದೇಶ ಯಾಕೆ ಬಡತನ ಇರುತ್ತಿತ್ತು ರಾಹುಲ್ಲಾ ಎಂದು ವ್ಯಂಗ್ಯವಾಡಿದ್ದಾರೆ. ಅವನು ಎಂದು ಏಕವಚನದಲ್ಲೇ ಕಿಡಿಕಾರಿದ ಯತ್ನಾಳ್​, ‘ಅವನು ಏನ ಮಾತಾಡ್ತಾನೆ ಅವನಿಗೆ ಗೊತ್ತಿಲ್ಲ. ಮೊನ್ನೆ ರಾಣೆಬೆನ್ನೂರ ಕಡೆ ಬಂದಿದ್ದ, ಈ ವೇಳೆ ಹುಚ್ಚರಾದ ಡಿಕೆ ಶಿವಕುಮಾರ್, ದಿನೇಶ್​ ಗುಂಡೂರಾವ್ ಆತನಿಗೆ ಮೆಣಸಿನಕಾಯಿ ತೋರಿಸಿದರು.

ಇದನ್ನೂ ಓದಿ:ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ; ಯತ್ನಾಳ್ ಸೇರಿದಂತೆ ಹಲವರ ವಿರುದ್ದ ಎಫ್​ಐಆರ್​

ಈ ವೇಳೆ ರಾಹುಲ್ ಗಾಂಧಿ ಎಲ್ಲರೂ ಯಾಕೆ ಕೆಂಪು ಮೆಣಸಿಕಾಯಿ ಬೆಳೆದಿದ್ದೀರಿ ಎಂದು ಕೇಳಿದ್ದಾನೆ. ಇಂತವನಿಗೆ ನೀವು ದೇಶ ಕೊಡ್ತೀರಾ ಎಂದು ಹಾಸ್ಯ ಮಾಡಿದ್ದಾರೆ. ಮೋದಿ ಅವರು 220 ಕೋಟಿ ಜನರಿಗೆ ವ್ಯಾಕ್ಸಿನೇಷನ್‌ ಕೊಟ್ಟಿದ್ದಾರೆ. ಈ ವೇಳೆ ಇದು ಮೋದಿ ವ್ಯಾಕ್ಸಿನ್, ಮಕ್ಕಳಾಗಲ್ಲ ಅಂದರು. ಆದರೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವ್ಯಾಕ್ಸಿನ್ ಹಾಕಿಕೊಂಡಿದ್ದಾರೆ. ಅವರಿಗೆ ಏನಾದರೂ ಆಗಿದೆಯಾ? , ಎಂತಹ ನೀಚ ಬುದ್ದಿ ನೋಡಿ ಇವರದು ಎಂದು ಯತ್ನಾಳ್​ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ