ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ- ಯತ್ನಾಳ್​ ಎಡವಟ್ಟು

ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪದ ಹಿನ್ನಲೆ ಯತ್ನಾಳ್​ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ದ ಎಫ್​ಐಆರ್​​ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda patil yatnal) ಹಳಿ ತಪ್ಪಿದ್ದಾರೆ.

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ- ಯತ್ನಾಳ್​ ಎಡವಟ್ಟು
ಬಸನಗೌಡ ಪಾಟೀಲ್​ ಯತ್ನಾಳ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 26, 2024 | 10:15 PM

ಹುಬ್ಬಳ್ಳಿ, ಏ.26: ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda patil yatnal) ಹಳಿ ತಪ್ಪಿದ್ದಾರೆ. ಧಾರವಾಡ ಜಿಲ್ಲೆಯ ‌ಕುಂದಗೋಳದಲ್ಲಿ ಪ್ರಹ್ಲಾದ್‌ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಸಚಿವ ದಿನೇಶ್‌ ಗುಂಡೂರಾವ್ ಹುಚ್ಚರು, ನಮ್ಮ ದೇಶ ಆಳಲು ರಾಹುಲ್ ಸಮರ್ಥನಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಗೆದ್ರೆ ಬಟಾಯಿಂದ ಬಂಗಾರ

ಇದೇ ವೇಳೆ ರಾಹುಲ್ ಗಾಂಧಿ ಗೆದ್ರೆ ಬಟಾಯಿಂದ ಬಂಗಾರ ಬರುತ್ತದೆ, ಇದನ್ನು ರಾಹುಲ್ ಗಾಂಧಿನೇ ಹೇಳಿದ್ದು. ಬಂಗಾರ ಬಂದ್ರೆ ನಮ್ಮ ದೇಶ ಯಾಕೆ ಬಡತನ ಇರುತ್ತಿತ್ತು ರಾಹುಲ್ಲಾ ಎಂದು ವ್ಯಂಗ್ಯವಾಡಿದ್ದಾರೆ. ಅವನು ಎಂದು ಏಕವಚನದಲ್ಲೇ ಕಿಡಿಕಾರಿದ ಯತ್ನಾಳ್​, ‘ಅವನು ಏನ ಮಾತಾಡ್ತಾನೆ ಅವನಿಗೆ ಗೊತ್ತಿಲ್ಲ. ಮೊನ್ನೆ ರಾಣೆಬೆನ್ನೂರ ಕಡೆ ಬಂದಿದ್ದ, ಈ ವೇಳೆ ಹುಚ್ಚರಾದ ಡಿಕೆ ಶಿವಕುಮಾರ್, ದಿನೇಶ್​ ಗುಂಡೂರಾವ್ ಆತನಿಗೆ ಮೆಣಸಿನಕಾಯಿ ತೋರಿಸಿದರು.

ಇದನ್ನೂ ಓದಿ:ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ; ಯತ್ನಾಳ್ ಸೇರಿದಂತೆ ಹಲವರ ವಿರುದ್ದ ಎಫ್​ಐಆರ್​

ಈ ವೇಳೆ ರಾಹುಲ್ ಗಾಂಧಿ ಎಲ್ಲರೂ ಯಾಕೆ ಕೆಂಪು ಮೆಣಸಿಕಾಯಿ ಬೆಳೆದಿದ್ದೀರಿ ಎಂದು ಕೇಳಿದ್ದಾನೆ. ಇಂತವನಿಗೆ ನೀವು ದೇಶ ಕೊಡ್ತೀರಾ ಎಂದು ಹಾಸ್ಯ ಮಾಡಿದ್ದಾರೆ. ಮೋದಿ ಅವರು 220 ಕೋಟಿ ಜನರಿಗೆ ವ್ಯಾಕ್ಸಿನೇಷನ್‌ ಕೊಟ್ಟಿದ್ದಾರೆ. ಈ ವೇಳೆ ಇದು ಮೋದಿ ವ್ಯಾಕ್ಸಿನ್, ಮಕ್ಕಳಾಗಲ್ಲ ಅಂದರು. ಆದರೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವ್ಯಾಕ್ಸಿನ್ ಹಾಕಿಕೊಂಡಿದ್ದಾರೆ. ಅವರಿಗೆ ಏನಾದರೂ ಆಗಿದೆಯಾ? , ಎಂತಹ ನೀಚ ಬುದ್ದಿ ನೋಡಿ ಇವರದು ಎಂದು ಯತ್ನಾಳ್​ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us