AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಒಬಿಸಿ ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ: ಶಾಸಕ ಅರವಿಂದ್​ ಬೆಲ್ಲದ್​​

ಸಂವಿಧಾನದಲ್ಲಿ ಜಾತಿ ಆಧಾರಿತ ಮೀಸಲಾತಿ ನೀಡಬೇಕೆಂದಿದೆ. ಆದರೆ ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದಾರೆ ಎಂದು ಶಾಸಕ ಅರವಿಂದ್​ ಬೆಲ್ಲದ್​ ಹೇಳಿದ್ದಾರೆ.

ದೇಶದಲ್ಲಿ ಒಬಿಸಿ ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ: ಶಾಸಕ ಅರವಿಂದ್​ ಬೆಲ್ಲದ್​​
ಅರವಿಂದ್ ಬೆಲ್ಲದ್, ಶಾಸಕರು
TV9 Web
| Edited By: |

Updated on:Oct 23, 2022 | 5:59 PM

Share

ಧಾರವಾಡ: ದೇಶದಲ್ಲಿ ಒಬಿಸಿ (OBC) ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ. ಸಂವಿಧಾನದಲ್ಲಿ ಜಾತಿ ಆಧಾರಿತ ಮೀಸಲಾತಿ ನೀಡಬೇಕೆಂದಿದೆ. ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದಾರೆ. ಕಾಂಗ್ರೆಸ್ಸಿಗರು ಮುಸ್ಲಿಮರ ಓಲೈಕೆಗಾಗಿ ಮೀಸಲಾತಿ ನೀಡಿದ್ದಾರೆ. ಒಬಿಸಿಗೆ ಆಗಿರುವ ಅನ್ಯಾಯ ಸರಿ ಮಾಡುವ ಸಮಯ ಬಂದಿದೆ  ಎಂದು ಮುಸ್ಲಿಮರ ಮೀಸಲಾತಿ ತೆಗೆಯಬೇಕೆಂಬ ಆಗ್ರಹ ಕೇಳಿಬರುತ್ತಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ ಬೆಲ್ಲದ್ (Arvind Bellad)  ಪ್ರತಿಕ್ರಿಯಿಸಿದರು.

ಸಂವಿಧಾನದಲ್ಲಿ ಜಾತಿ ಆಧಾರಿತ ಬೇಕೋ, ಧರ್ಮ ಆಧಾರಿತ ಮೀಸಲಾತಿ ಬೇಕೋ ಅನ್ನೋದು ಚರ್ಚೆಯಾಗಿದೆ. ಸಂವಿಧಾನದಲ್ಲಿ ಜಾತಿ ಅಧಾರಿತ ಮೀಸಲಾತಿ ನೀಡಬೇಕು ಅನ್ನೋದಿದೆ. ಅದರ ಪ್ರಕಾರ ಮೀಸಲಾತಿ ಕೊಡಬೇಕು. ಕಾಂಗ್ರೆಸ್ ಅಲ್ಪ ಸಂಖ್ಯಾತರ ಒಲೈಕೆಗಾಗಿ ಓಬಿಸಿಗೆ ಅನ್ಯಾಯ ಮಾಡಿ ಮುಸ್ಲಿಂಗೆ ಮೀಸಲಾತಿ ನೀಡಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಅನೇಕ ದುಡ್ಡು ಕೊಡತ್ತೆ. ಅಲ್ಪಸಂಖ್ಯಾತ ಇಲಾಖೆಯಿಂದ ಹಣ ಬರತ್ತೆ. ನನಗೆ ಅನಸಿದ ಹಾಗೆ ಸರ್ಕಾರ ಸೂಕ್ತ ಕ್ರಮ‌ ಕೈಗೊಳ್ಳತ್ತೆ. ನಾನು ಈಗಾಗಲೇ ಮೀಸಲಾತಿ ತಗೆಯಲು ಡಿಮ್ಯಾಂಡ್ ಇಟ್ಟಿದೀನಿ. ನಮ್ಮ ನಾಯಕರು ಸ್ಪಂದಿಸುತ್ತಾರೆ ಅನ್ನೋ ಭರವಸೆ ಇದೆ ಎಂದು ಹೇಳಿದರು.

ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ, ಉಳಿದಿದ್ದು ವರಿಷ್ಠರಿಗೆ ಬಿಟ್ಟದ್ದು

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ ಕುರಿತು ಮಾತನಾಡಿದ ಅವರು ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ, ಉಳಿದಿದ್ದು ವರಿಷ್ಠರಿಗೆ ಬಿಟ್ಟದ್ದು. ನನಗೀಗ 52 ವರ್ಷ, ಇನ್ನೂ 23 ವರ್ಷ ಅವಕಾಶ ಇದೆ. ಸಚಿವ ಸ್ಥಾನದ ಬಗ್ಗೆ ಬಹಳ ತಲೆಕೆಡಿಸಿಕೊಳ್ಳುವುದು ಬೇಡ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ, ಮೇಲಿನವರು ಎಲ್ಲ ನೋಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:54 pm, Sun, 23 October 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ