AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಒಬಿಸಿ ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ: ಶಾಸಕ ಅರವಿಂದ್​ ಬೆಲ್ಲದ್​​

ಸಂವಿಧಾನದಲ್ಲಿ ಜಾತಿ ಆಧಾರಿತ ಮೀಸಲಾತಿ ನೀಡಬೇಕೆಂದಿದೆ. ಆದರೆ ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದಾರೆ ಎಂದು ಶಾಸಕ ಅರವಿಂದ್​ ಬೆಲ್ಲದ್​ ಹೇಳಿದ್ದಾರೆ.

ದೇಶದಲ್ಲಿ ಒಬಿಸಿ ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ: ಶಾಸಕ ಅರವಿಂದ್​ ಬೆಲ್ಲದ್​​
ಅರವಿಂದ್ ಬೆಲ್ಲದ್, ಶಾಸಕರು
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 23, 2022 | 5:59 PM

ಧಾರವಾಡ: ದೇಶದಲ್ಲಿ ಒಬಿಸಿ (OBC) ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ. ಸಂವಿಧಾನದಲ್ಲಿ ಜಾತಿ ಆಧಾರಿತ ಮೀಸಲಾತಿ ನೀಡಬೇಕೆಂದಿದೆ. ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದಾರೆ. ಕಾಂಗ್ರೆಸ್ಸಿಗರು ಮುಸ್ಲಿಮರ ಓಲೈಕೆಗಾಗಿ ಮೀಸಲಾತಿ ನೀಡಿದ್ದಾರೆ. ಒಬಿಸಿಗೆ ಆಗಿರುವ ಅನ್ಯಾಯ ಸರಿ ಮಾಡುವ ಸಮಯ ಬಂದಿದೆ  ಎಂದು ಮುಸ್ಲಿಮರ ಮೀಸಲಾತಿ ತೆಗೆಯಬೇಕೆಂಬ ಆಗ್ರಹ ಕೇಳಿಬರುತ್ತಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ ಬೆಲ್ಲದ್ (Arvind Bellad)  ಪ್ರತಿಕ್ರಿಯಿಸಿದರು.

ಸಂವಿಧಾನದಲ್ಲಿ ಜಾತಿ ಆಧಾರಿತ ಬೇಕೋ, ಧರ್ಮ ಆಧಾರಿತ ಮೀಸಲಾತಿ ಬೇಕೋ ಅನ್ನೋದು ಚರ್ಚೆಯಾಗಿದೆ. ಸಂವಿಧಾನದಲ್ಲಿ ಜಾತಿ ಅಧಾರಿತ ಮೀಸಲಾತಿ ನೀಡಬೇಕು ಅನ್ನೋದಿದೆ. ಅದರ ಪ್ರಕಾರ ಮೀಸಲಾತಿ ಕೊಡಬೇಕು. ಕಾಂಗ್ರೆಸ್ ಅಲ್ಪ ಸಂಖ್ಯಾತರ ಒಲೈಕೆಗಾಗಿ ಓಬಿಸಿಗೆ ಅನ್ಯಾಯ ಮಾಡಿ ಮುಸ್ಲಿಂಗೆ ಮೀಸಲಾತಿ ನೀಡಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಅನೇಕ ದುಡ್ಡು ಕೊಡತ್ತೆ. ಅಲ್ಪಸಂಖ್ಯಾತ ಇಲಾಖೆಯಿಂದ ಹಣ ಬರತ್ತೆ. ನನಗೆ ಅನಸಿದ ಹಾಗೆ ಸರ್ಕಾರ ಸೂಕ್ತ ಕ್ರಮ‌ ಕೈಗೊಳ್ಳತ್ತೆ. ನಾನು ಈಗಾಗಲೇ ಮೀಸಲಾತಿ ತಗೆಯಲು ಡಿಮ್ಯಾಂಡ್ ಇಟ್ಟಿದೀನಿ. ನಮ್ಮ ನಾಯಕರು ಸ್ಪಂದಿಸುತ್ತಾರೆ ಅನ್ನೋ ಭರವಸೆ ಇದೆ ಎಂದು ಹೇಳಿದರು.

ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ, ಉಳಿದಿದ್ದು ವರಿಷ್ಠರಿಗೆ ಬಿಟ್ಟದ್ದು

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ ಕುರಿತು ಮಾತನಾಡಿದ ಅವರು ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ, ಉಳಿದಿದ್ದು ವರಿಷ್ಠರಿಗೆ ಬಿಟ್ಟದ್ದು. ನನಗೀಗ 52 ವರ್ಷ, ಇನ್ನೂ 23 ವರ್ಷ ಅವಕಾಶ ಇದೆ. ಸಚಿವ ಸ್ಥಾನದ ಬಗ್ಗೆ ಬಹಳ ತಲೆಕೆಡಿಸಿಕೊಳ್ಳುವುದು ಬೇಡ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ, ಮೇಲಿನವರು ಎಲ್ಲ ನೋಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:54 pm, Sun, 23 October 22

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ