AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಒಬಿಸಿ ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ: ಶಾಸಕ ಅರವಿಂದ್​ ಬೆಲ್ಲದ್​​

ಸಂವಿಧಾನದಲ್ಲಿ ಜಾತಿ ಆಧಾರಿತ ಮೀಸಲಾತಿ ನೀಡಬೇಕೆಂದಿದೆ. ಆದರೆ ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದಾರೆ ಎಂದು ಶಾಸಕ ಅರವಿಂದ್​ ಬೆಲ್ಲದ್​ ಹೇಳಿದ್ದಾರೆ.

ದೇಶದಲ್ಲಿ ಒಬಿಸಿ ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ: ಶಾಸಕ ಅರವಿಂದ್​ ಬೆಲ್ಲದ್​​
ಅರವಿಂದ್ ಬೆಲ್ಲದ್, ಶಾಸಕರು
TV9 Web
| Edited By: ವಿವೇಕ ಬಿರಾದಾರ|

Updated on:Oct 23, 2022 | 5:59 PM

Share

ಧಾರವಾಡ: ದೇಶದಲ್ಲಿ ಒಬಿಸಿ (OBC) ಸಮುದಾಯಕ್ಕೆ ಬಹಳ ಅನ್ಯಾಯ ಆಗುತ್ತಿದೆ. ಸಂವಿಧಾನದಲ್ಲಿ ಜಾತಿ ಆಧಾರಿತ ಮೀಸಲಾತಿ ನೀಡಬೇಕೆಂದಿದೆ. ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದ್ದಾರೆ. ಕಾಂಗ್ರೆಸ್ಸಿಗರು ಮುಸ್ಲಿಮರ ಓಲೈಕೆಗಾಗಿ ಮೀಸಲಾತಿ ನೀಡಿದ್ದಾರೆ. ಒಬಿಸಿಗೆ ಆಗಿರುವ ಅನ್ಯಾಯ ಸರಿ ಮಾಡುವ ಸಮಯ ಬಂದಿದೆ  ಎಂದು ಮುಸ್ಲಿಮರ ಮೀಸಲಾತಿ ತೆಗೆಯಬೇಕೆಂಬ ಆಗ್ರಹ ಕೇಳಿಬರುತ್ತಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ ಬೆಲ್ಲದ್ (Arvind Bellad)  ಪ್ರತಿಕ್ರಿಯಿಸಿದರು.

ಸಂವಿಧಾನದಲ್ಲಿ ಜಾತಿ ಆಧಾರಿತ ಬೇಕೋ, ಧರ್ಮ ಆಧಾರಿತ ಮೀಸಲಾತಿ ಬೇಕೋ ಅನ್ನೋದು ಚರ್ಚೆಯಾಗಿದೆ. ಸಂವಿಧಾನದಲ್ಲಿ ಜಾತಿ ಅಧಾರಿತ ಮೀಸಲಾತಿ ನೀಡಬೇಕು ಅನ್ನೋದಿದೆ. ಅದರ ಪ್ರಕಾರ ಮೀಸಲಾತಿ ಕೊಡಬೇಕು. ಕಾಂಗ್ರೆಸ್ ಅಲ್ಪ ಸಂಖ್ಯಾತರ ಒಲೈಕೆಗಾಗಿ ಓಬಿಸಿಗೆ ಅನ್ಯಾಯ ಮಾಡಿ ಮುಸ್ಲಿಂಗೆ ಮೀಸಲಾತಿ ನೀಡಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಅನೇಕ ದುಡ್ಡು ಕೊಡತ್ತೆ. ಅಲ್ಪಸಂಖ್ಯಾತ ಇಲಾಖೆಯಿಂದ ಹಣ ಬರತ್ತೆ. ನನಗೆ ಅನಸಿದ ಹಾಗೆ ಸರ್ಕಾರ ಸೂಕ್ತ ಕ್ರಮ‌ ಕೈಗೊಳ್ಳತ್ತೆ. ನಾನು ಈಗಾಗಲೇ ಮೀಸಲಾತಿ ತಗೆಯಲು ಡಿಮ್ಯಾಂಡ್ ಇಟ್ಟಿದೀನಿ. ನಮ್ಮ ನಾಯಕರು ಸ್ಪಂದಿಸುತ್ತಾರೆ ಅನ್ನೋ ಭರವಸೆ ಇದೆ ಎಂದು ಹೇಳಿದರು.

ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ, ಉಳಿದಿದ್ದು ವರಿಷ್ಠರಿಗೆ ಬಿಟ್ಟದ್ದು

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ ಕುರಿತು ಮಾತನಾಡಿದ ಅವರು ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ, ಉಳಿದಿದ್ದು ವರಿಷ್ಠರಿಗೆ ಬಿಟ್ಟದ್ದು. ನನಗೀಗ 52 ವರ್ಷ, ಇನ್ನೂ 23 ವರ್ಷ ಅವಕಾಶ ಇದೆ. ಸಚಿವ ಸ್ಥಾನದ ಬಗ್ಗೆ ಬಹಳ ತಲೆಕೆಡಿಸಿಕೊಳ್ಳುವುದು ಬೇಡ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ, ಮೇಲಿನವರು ಎಲ್ಲ ನೋಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:54 pm, Sun, 23 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ