ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

ಕೆಲ ದಿನಗಳ ಹಿಂದಷ್ಟೇ ಧಾರವಾಡದಲ್ಲಿ ಜಿಮ್ ಟ್ರೈನರ್ ವಿರುದ್ದ ಲವ್ ಜಿಹಾದ್ ಆರೋಪ ಕೇಳಿ ಬಂದಿತ್ತು. ಇದೀಗ ಹುಬ್ಬಳ್ಳಿಯಲ್ಲೂ ಸಹ ಜಿಮ್ ಟ್ರೈನರ್ ವಿರುದ್ದ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಜಿಮ್ ಗೆ ಬರುವ ಯುವತಿಯ ತಲೆ ಕಡೆಸಿ ಆಕೆಯ ಜೊತೆ ಖಾಸಗಿ ಕ್ಷಣಗಳನ್ನು ಕಳೆದು, ಅದನ್ನು ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆ ಜಿಮ್ ಟ್ರೈನರ್ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ
Sameer Love Jihad
Edited By:

Updated on: Apr 03, 2026 | 4:31 PM

ಹುಬ್ಬಳ್ಳಿ, (ಏಪ್ರಿಲ್ .03): ನಗರದಲ್ಲಿ ಲವ್ ಜಿಹಾದ್ (love jihad) ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ (Hubballi) ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್​​ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮನೆಗೆ ಹೋಗಿ ಸಮೀರ್​​​ ನನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹುಬ್ಬಳ್ಳಿ ನಗರದ ವಿಜಯನಗರ ನಿವಾಸಿಯಾಗಿರುವ ಸಮೀರ್ ಮತ್ತು ಹಿಂದೂ ಯುವತಿ ಜಿಮ್‌ನಲ್ಲಿ ಪರಿಚಯವಾಗಿತ್ತು. ಬಳಿಕ ಸಮೀರ್ ಯುವತಿಯೊಂದಿಗೆ ಸಲುಗೆ ಬೆಳೆಸಿದ್ದಾನೆ. ಬಳಿಕ ಯುವತಿಯನ್ನು ಮನೆಗೆ ಕರೆಯಿಸಿಕೊಂಡು ಜ್ಯೂಸ್​​ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ.

ಇದನ್ನೂ ನೋಡಿ: ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಗಳು

ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್

ಕೆಲ ದಿನ ನಂತರ ಯುವತಿ ಜೊತೆ ಖಾಸಗಿಯಾಗಿ ಕಳೆದ ಕ್ಷಣಗಳಿದ್ದ ವಿಡಿಯೋ ತೋರಿಸಿ ಬೆದರಿಕೆ ಹಾಕಿದ್ದು, ಅನೇಕ ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಆದರೂ ಇದೆಲ್ಲವನ್ನು ಯುವತಿ ಮನೆಯವರಿಗೆ ಹೇಳಿರಲಿಲ್ಲ. ಆದ್ರೆ ನಿನ್ನೆ (ಏಪ್ರಿಲ್ 02) ಸಂಜೆ ಈ ವಿಚಾರ ಯುವತಿ ಮನೆಯವರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಗೆ ಗೊತ್ತಾಗಿದ್ದು, ಬಳಿಕ ದೊಡ್ಡ ಹೈಡ್ರಾಮಾವೇ ನಡೆದಿದೆ.  ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಕಾರ್ಯಕರ್ತರು, ಹೋಗಿ ಸಮೀರ್ ನನ್ನು ಥಳಿಸಿ ಬಳಿಕಪೊಲೀಸರ ವಶಕ್ಕೊಪ್ಪಿಸಿದ್ದಾರೆ.ಇದಾದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.

ಯುವತಿ ಮನೆಯವರ ಮೇಲೆ ಸಮೀರ್ ಕುಟುಂಬಸ್ಥರಿಂದ ಹಲ್ಲೆ

ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಸಮೀರ್ ಮುಲ್ಲಾ ಮನೆಗೆ ಹೋಗಿ ಆತನನ್ನು ಹಿಡಿದುಕೊಂಡು ಥಳಿಸಿ ಆತನನ್ನು ಹಳೆ ಹುಬ್ಬಳ್ಳಿ ಠಾಣೆಗೆ ಒಪ್ಪಿಸಿದ್ದರು. ಇತ್ತ ಸಮೀರ್ ಮುಲ್ಲಾ ನನ್ನು ಯುವತಿ ಮನೆಯವರೇ ಅಪಹರಣ ಮಾಡಿಕೊಂಡು ಹೋಗಿದ್ದಾರೆ ಎಂದು ತಿಳಿದು ಸಮೀರ್ ಮುಲ್ಲಾ ಮನೆಯವರು ಯುವತಿ ಮನೆಗೆ ನುಗ್ಗಿ ಗಲಾಟೆ ಮಾಡಿ ಅನೇಕರ ಮೇಲೆ ಹಲ್ಲೆ ಮಾಡಿದ್ದರು. ಇತ್ತ ಪೊಲೀಸರು ಬರುತ್ತಿದ್ದಂತೆಯೇ ಅಲ್ಲಿಂದ ಕಾಲ್ಕಿತ್ತಿದ್ದರು. ಇನ್ನು ಇದಾದ ನಂತರ ಹಳೆ ಹುಬ್ಬಳ್ಳಿ ಠಾಣೆಗೆ ಮುತ್ತಿಗೆ ಹಾಕಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಸಮಾಜದವರು, ಪ್ರತಿಭಟನೆ ನಡೆಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಜಿಮ್‌ಗಳು ಲವ್ ಜಿಹಾದ್ ಕೇಂದ್ರಗಳಾಗುತ್ತಿವೆ ಎಂದು ಹಿಂದೂ ಸಂಘಟನೆಗಳು ವ್ಯಕ್ತಪಡಿಸಿದ್ದು,  ಸಮೀರ್ ಜಿಮ್‌ನಲ್ಲಿ ಹಿಂದೂ ಹುಡುಗಿಯನ್ನು ಪರಿಚಯ ಮಾಡಿಕೊಂಡು ಲವ್ ಜಿಹಾದ್ ಮಾಡುತ್ತಿದ್ದ. ಹೀಗಾಗಿ ಸಮೀರ್‌ಗೆ ತಕ್ಕ ಶಿಕ್ಷೆ ಆಗಬೇಕು. ಅಲ್ಲದೇ ಜಿಮ್ ಬಂದ್ ಮಾಡಿಸಬೇಕೆಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಅವರಿಬ್ಬರು ಪರಿಚಿತರು ಎಂದ ಪೋಷಕರು

ಮತ್ತೊಂದಡೆ ಗಾಯಳು ಸಮೀರ್ ಮುಲ್ಲಾನನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಿ, ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಸಮೀರ್ ಪೋಷಕರು, ನಮ್ಮ ಮಗ ಯಾವುದೇ ಲವ್ ಜಿಹಾದ್ ಮಾಡಿಲ್ಲ. ಅವರಿಬ್ಬರು ಪರಿಚಿತರು, ಓಡಾಡಿಕೊಂಡಿದ್ದರು. ಆದ್ರೆ ಇದನ್ನೇ ತಪ್ಪಾಗಿ ತಿಳಿದುಕೊಂಡು ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಮೀರ್ ವಿರುದ್ಧ ಸಂತ್ರಸ್ತೆ ಸ್ಫೋಟಕ ಹೇಳಿಕೆ

ಇನ್ನು ಈ ಬಗ್ಗೆ ಸಂತ್ರಸ್ತೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಈ ವಿಡಿಯೋನಲ್ಲಿ ಸಮೀರ್ ಜತೆ ಹೇಗೆ ಪರಿಯವಾಯ್ತು ? ಬಳಿಕ ಏನೆಲ್ಲಾ ಆಯ್ತು ಎಂದು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸಮೀರ್​ ಸೋದರಿ ತೈಸೀಮ್ ಮುಲ್ಲಾ ನನ್ನ ಸ್ನೇಹಿತೆ. ಆಕೆಯಿಂದ ನನಗೆ ಸಮೀರ್ ಪರಿಚಯವಾಗಿತ್ತು. ಆತ ಚೆನ್ನಾಗಿ ಜಿಮ್ ಮಾಡಿಸುತ್ತಾನೆಂದು ಹೇಳಿದ್ದಳು. ಹೀಗಾಗಿ ಜಿಮ್​​ನಲ್ಲಿ ಪರಿಚಯವಾಗಿದ್ದು, ಬಳಿಕ ಬರ್ತಡೇ ಪಾರ್ಟಿ, ವಿಕೇಂಡ್ ಪಾರ್ಟಿಗೆ ಹೋಗಿದ್ವಿ. ನಮ್ಮ ಬರ್ತಡೇ ಪಾರ್ಟಿಗೆ ಸಮೀರ್ ಸಹ ಬಂದಿದ್ದ. ಇದಾದ ಮೇಲೆ ಸಮೀರ್ ನನಗೆ ಆತ್ಮೀಯನಾಗಿದ್ದ ಎಂದಿದ್ದಾರೆ.

ಮತ್ತು ಬರುವ ಜ್ಯೂಸ್​ ಕೊಟ್ಟು ಅತ್ಯಾಚಾರ

ಒಂದು ದಿನ ಸಮೀರ್ ತನ್ನ ಮನೆಗೆ ಕರೆದೊಯ್ದಿದ್ದ. ಬಳಿಕ ಮನೆಯಲ್ಲಿ ಮತ್ತು ಬರುವ ಜ್ಯೂಸ್​ ಕೊಟ್ಟು ಅತ್ಯಾಚಾರ ​ ಮಾಡಿದ್ದ. ಅಲ್ಲದೇ ಅತ್ಯಾಚಾರ ಮಾಡಿರುವುದನ್ನು ವಿಡಿಯೋ ಮಾಡಿದ್ದು, ಅದನ್ನು ನನಗೆ ತೋರಿಸಿದ್ದ. ಅಲ್ಲದೇ ಆ ವಿಡಿಯೋ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದೂರು ಪ್ರತಿದೂರು

ಈ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ. ಸಮೀರ್ ಮುಲ್ಲಾನನ್ನು ಕರೆದುಕೊಂಡು ಹೋಗಿ ಥಳಿಸಿದ ಬಗ್ಗೆ ಯುವಕನ ಮನೆಯವರು ಅಶೋಕ್ ನಗರ ಠಾಣೆಗೆ ದೂರು ನೀಡಿದ್ರೆ, ಇತ್ತ ಯುವತಿ ಮನೆಯವರ ಮೇಲೆ ಹಲ್ಲೆ ಸೇರಿದಂತೆ ಯುವತಿ ಮೇಲೆ ಲೈಂಗಿಕ ಕಿರುಕುಳ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಎರಡು ಕಡೆಯವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ಮುಂದೆ ಈ ಪ್ರಕರಣ ಯಾವ ಸ್ವರೂಪ ಪಡೆದುಕೊಳ್ಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us