AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಮತ್ತೆ ಲವ್ ಜಿಹಾದ್ ಸದ್ದು: ವಿವಾಹಿತ ಹಿಂದೂ ಮಹಿಳೆ ಜತೆ ಓಡಿಹೋದ ಮುಸ್ಲಿಂ ವ್ಯಕ್ತಿ

ವಿವಾಹಿತ ಹಿಂದೂ ಮಹಿಳೆಯನ್ನು ಮುಸ್ಲಿಂ ವಿವಾಹಿತನೋರ್ವ ಅಪಹರಿಸಿಕೊಂಡು ಹೋಗಿರುವ ಆರೋಪ ಧಾರವಾಡದಲ್ಲಿ ಕೇಳಿ ಬಂದಿದೆ. ಇದನ್ನು ಲವ್ ಜಿಹಾದ್ ಎಂದು ಪರಿಗಣಿಸಿ ಕೂಡಲೇ ಆರೋಪಿಯನ್ನು ಪತ್ತೆ ಮಾಡುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಹೋರಾಟಕ್ಕೆ ಇಳಿದಿದೆ. ಮಹಿಳೆಯ ಮನೆಯವರು ಎಷ್ಟೇ ಮನವಿ ಮಾಡಿದರೂ ಪೊಲೀಸರು ಸ್ಪಂದಿಸುತ್ತಿಲ್ಲ ಎಂಬ ಆರೋಪವೂ ಇದೀಗ ಕೇಳಿ ಬಂದಿದೆ.

ಧಾರವಾಡದಲ್ಲಿ ಮತ್ತೆ ಲವ್ ಜಿಹಾದ್ ಸದ್ದು: ವಿವಾಹಿತ ಹಿಂದೂ ಮಹಿಳೆ ಜತೆ ಓಡಿಹೋದ ಮುಸ್ಲಿಂ ವ್ಯಕ್ತಿ
ಧಾರವಾಡದಲ್ಲಿ ಮತ್ತೆ ಲವ್ ಜಿಹಾದ್ ಸದ್ದು: ವಿವಾಹಿತ ಹಿಂದೂ ಮಹಿಳೆ ಜತೆ ಓಡಿಹೋದ ಮುಸ್ಲಿಂ ವ್ಯಕ್ತಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 31, 2024 | 6:28 PM

Share

ಧಾರವಾಡ, ಆಗಸ್ಟ್ 31: ಧಾರವಾಡದ ಆಂಜನೇಯ ನಗರದ ತಂಗೆಮ್ಮ ಎಂಬಾಕೆಯನ್ನು ಕರೆದುಕೊಂಡು ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ತಂಗೆಮ್ಮ ವಾಸವಾಗಿದ್ದ ಮನೆಯ ಎದುರಿಗೆ ಬೆಳಗಾವಿ ಜಿಲ್ಲೆ ರಾಮದುರ್ಗದ ಮುನ್ನಾ ಎಂಬ ವ್ಯಕ್ತಿ ಬಂದು ಕಳೆದ ಆರು ತಿಂಗಳಿನಿಂದ ವಾಸವಾಗಿದ್ದ. ಬಾಡಿಗೆ ಮನೆ ಪಡೆದು ಅಲ್ಲೇ ವಾಸವಿದ್ದ. ಈ ವೇಳೆ ತಂಗೆಮ್ಮಳ ಪರಿಚಯ ಮಾಡಿಕೊಂಡ ಈತ ಆಕೆಯ ಜೊತೆ ಪ್ರೀತಿ, ಪ್ರೇಮದ ಕಥೆ ಕಟ್ಟಿ ಆಕೆಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ.

ವಿಚಿತ್ರ ಎಂದರೆ ಮುನ್ನಾಗೆ ಈಗಾಗಲೇ ಮದುವೆ ಆಗಿ ಎರಡು ಮಕ್ಕಳು ಸಹ ಇವೆ. ತಂಗೆಮ್ಮಳಿಗೂ ಮದುವೆಯಾಗಿದ್ದು, ಆಕೆಯನ್ನು ಇನ್ನೂ ಗಂಡನ ಮನೆಗೆ ಕಳುಹಿಸಿಕೊಟ್ಟಿರಲಿಲ್ಲ. ಜುಲೈ 11 ರಂದೇ ಉಪನಗರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದ್ದರೂ ಇದುವರೆಗೂ ಆ ಇಬ್ಬರೂ ಪತ್ತೆಯಾಗಿಲ್ಲ. ಮುನ್ನಾ ತಂಗೆಮ್ಮಳ ತಾಯಿಯ ಬಳಿ ದುಡ್ಡು ಕೂಡ ಪಡೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ದೂರು ದಾಖಲಾಗಿ ಒಂದೂವರೆ ತಿಂಗಳಾದರೂ ತಂಗೆಮ್ಮಳನ್ನು ಪೊಲೀಸರು ಪತ್ತೆ ಮಾಡದ ಹಿನ್ನೆಲೆಯಲ್ಲಿ ತಂಗೆಮ್ಮಳ ಪೋಷಕರು ಶ್ರೀರಾಮ ಸೇನೆಯ ಸಹಾಯದಿಂದ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಮುನ್ನಾನ ಮೇಲೆ ಅಪಹರಣದ ಕೇಸ್ ದಾಖಲಿಸದೇ ಕೇವಲ ಮಿಸ್ಸಿಂಗ್ ಕೇಸ್ ದಾಖಲಿಸಲಾಗಿದೆ. ಅಲ್ಲದೇ ಇದೊಂದು ಲವ್ ಜಿಹಾದ್ ಎಂದು ಪರಿಗಣಿಸಬೇಕು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಒತ್ತಾಯಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದರು.

Love Jihad sounds again in Dharwad: Married Muslim man eloped with married Hindu woman, Kannada news

ಆರೋಪಿ ಮುನ್ನಾ ಮತ್ತು ಎಫ್​ಐಆರ್ ಪ್ರತಿ

ರಾಜ್ಯದಲ್ಲಿ ಇದೇ ರೀತಿ 44 ಸಾವಿರ ಹಿಂದೂ ಯುವತಿಯರು ಕಾಣೆಯಾಗಿದ್ದಾರೆ. ಪೊಲೀಸರು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಒಂದು ವಾರದ ಅವಧಿಯಲ್ಲಿ ಮುನ್ನಾನನ್ನು ಪತ್ತೆ ಮಾಡಿ, ಆತನ ಮೇಲೆ ಲವ್ ಜಿಹಾದ್ ಪ್ರಕರಣ ದಾಖಲಿಸಬೇಕು ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹಾಗೂ ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ: ಬಾಹ್ಯಾಕಾಶಕ್ಕೆ ಹಾರಲಿವೆ ಧಾರವಾಡದ ನೊಣಗಳು; ಏನಿದಕ್ಕೆ ಕಾರಣ?

ಒಂದೂವರೆ ತಿಂಗಳಿಂದ ಇಬ್ಬರೂ ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಅವರನ್ನು ಹುಡುಕುವ ಕೆಲಸವನ್ನೂ ಪೊಲೀಸರು ಮಾಡುತ್ತಿಲ್ಲ. ಇತ್ತ ತಂಗೆಮ್ಮಳ ಪತಿ ಮನೆಯವರು ಕೂಡ ಮುಂದೇನು ಮಾಡಬೇಕೆಂದು ತೋಚದೇ ಕೈಚೆಲ್ಲಿ ಕುಳಿತಿದ್ದಾರೆ. ಒಟ್ಟಿನಲ್ಲಿ ಅದಾಗಲೇ ಮದುವೆಯಾಗಿರುವ ಮುನ್ನಾ ಅದೇ ತಾನೇ ಮದುವೆಯಾಗಿದ್ದ ತಂಗೆಮ್ಮಳನ್ನು ಕರೆದೊಯ್ದಿದ್ದು ಎರಡೂ ಕುಟುಂಬಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು