AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್, ಸಿಎಂ ಬೊಮ್ಮಾಯಿಗೆ ಕಂಟಕ, ಕೋನರೆಡ್ಡಿ ಹೇಳೋದೇನು?

ಮಹದಾಯಿ ಹೋರಾಟಗಾರರಿಗೆ ಸಮನ್ಸ್ ಜಾರಿ ವಿಚಾರವಾಗಿ ಧಾರವಾಡದಲ್ಲಿ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿದ್ದು ಮಹದಾಯಿಗಾಗಿ ರೈತರು ಹೋರಾಟ ಮಾಡಿದ್ದರು. ಆಗ ಹೋರಾಟಗಾರರ ಮೇಲೆ ಕೇಸು ದಾಖಲಾಗಿದ್ದವು. ಬಳಿಕ ರಾಜ್ಯ ಸರಕಾರ ಕೇಸ್ ವಾಪಸ್ ಪಡೆದಿತ್ತು. ಎಲ್ಲ ಕೇಸ್ ವಾಪಸ್ ಪಡೆಯಲಾಗಿತ್ತು. ಈ ಬಗ್ಗೆ ಸರಕಾರದಿಂದ ಆದೇಶವೂ ಆಗಿತ್ತು. ಅದನ್ನು ಕೋರ್ಟ್‌ಗೆ ಸಹ ಸಲ್ಲಿಸಲಾಗಿತ್ತು.

ಪ್ರಕರಣ ಹಿಂಪಡೆದಿದ್ದರೂ ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್, ಸಿಎಂ ಬೊಮ್ಮಾಯಿಗೆ ಕಂಟಕ, ಕೋನರೆಡ್ಡಿ ಹೇಳೋದೇನು?
ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ನೀಡಿಕೆ ಕಾರಣ ಬಯಲಾಯ್ತು; ಕೋರ್ಟ್‌ಗೆ ಹಾಜರಾಗದಿರಲು ನಿರ್ಧರಿಸಿದ ಹೋರಾಟಗಾರರರು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 06, 2021 | 1:08 PM

ಧಾರವಾಡ: ವಿಧಾನ ಪರಿಷತ್​ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮ್ಮುಖದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೊಸ ತಲೆಬೇನೆ ಶುರುವಾಗಿದೆ. ಮಹದಾಯಿ ಹೋರಾಟ ಪ್ರಕರಣದಲ್ಲಿ ಸರ್ಕಾರ ಪ್ರಕರಣ ಹಿಂಪಡೆದಿದ್ದರೂ ಹೋರಾಟಗಾರರಿಗೆ (Mahadayi water dispute) ಮತ್ತೆ ಸಮನ್ಸ್ ಜಾರಿಯಾಗಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ 13ಕ್ಕೂ ಹೆಚ್ಚು ಹೋರಾಟಗಾರರಿಗೆ ಸಮನ್ಸ್ ಜಾರಿಯಾಗಿದ್ದು, ನಾಳೆ ಡಿಸೆಂಬರ್ 7 ರಂದು ನವಲಗುಂದ ಜೆಎಂಎಫ್‌ಸಿ ಕೋರ್ಟ್ ಗೆ ಹಾಜರಾಗಲು ಸಮನ್ಸ್ ಜಾರಿಮಾಡಲಾಗಿದೆ. ಗಮನರ್ಹವೆಂದರೆ ಖುದ್ದು ಬಸವರಾಜ ಬೊಮ್ಮಾಯಿ ಅವರೇ ವಿಶೇಷ ಆಸಕ್ತಿ,ಮುತುವರ್ಜಿ ವಹಿಸಿದ್ದರು. ಆದರೆ ಈಗ ಮತ್ತೆ ಅಂದಿನ ಮಹದಾಯಿ ಹೋರಾಟಗಾರರಿಗೆ ಸಮನ್ಸ್ ಜಾರಿಯಾಗಿರುವುದು ಇಂದು ರಾಜ್ಯದ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿಗೆ ಹೊಸ ತಲೆ ನೋವು ತಂದಿತ್ತಿದೆ.

2015ರಲ್ಲಿ ನಡೆದಿದ್ದ ಮಹದಾಯಿ ಹೋರಾಟದ ಪ್ರಕರಣ ಅದಾಗಿದ್ದು, ಈ ವೇಳೆ 187 ರೈತರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕೇಸ್ ವಾಪಸ್ ತೆಗೆದುಕೊಳ್ಳುವ ನಿರ್ಧಾರವಾಗಿತ್ತು. ಆದರೂ ಕೆಲವು ರೈತರಿಗೆ ಕೋರ್ಟ್‌ನಿಂದ ಈಗ ಸಮನ್ಸ್ ಜಾರಿಯಾಗಿದೆ. ನವಲಗುಂದ ಜೆಎಂಎಫ್‌ಸಿ ಕೋರ್ಟ್‌ನಿಂದ ನಾಳೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.

ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದ್ದೇನು?:

ಮಹದಾಯಿ ಹೋರಾಟಗಾರರಿಗೆ ಸಮನ್ಸ್ ಜಾರಿ ವಿಚಾರವಾಗಿ ಧಾರವಾಡದಲ್ಲಿ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿದ್ದು ಮಹದಾಯಿಗಾಗಿ ರೈತರು ಹೋರಾಟ ಮಾಡಿದ್ದರು. ಆಗ ಹೋರಾಟಗಾರರ ಮೇಲೆ ಕೇಸು ದಾಖಲಾಗಿದ್ದವು. ಬಳಿಕ ರಾಜ್ಯ ಸರಕಾರ ಕೇಸ್ ವಾಪಸ್ ಪಡೆದಿತ್ತು. ಎಲ್ಲ ಕೇಸ್ ವಾಪಸ್ ಪಡೆಯಲಾಗಿತ್ತು. ಈ ಬಗ್ಗೆ ಸರಕಾರದಿಂದ ಆದೇಶವೂ ಆಗಿತ್ತು. ಅದನ್ನು ಕೋರ್ಟ್‌ಗೆ ಸಹ ಸಲ್ಲಿಸಲಾಗಿತ್ತು. ಇದೀಗ ಅನೇಕ ರೈತರಿಗೆ ಸಮನ್ಸ್ ಬಂದಿವೆ. ಒಮ್ಮೆ ಕೇಸ್ ಮರಳಿ ಪಡೆದ ಮೇಲೆ ಸಮನ್ಸ್ ಬಂದಿದ್ದು ಹೇಗೆ? ಸರಕಾರ ಯಾವುದೇ ಇರಲಿ… ಕೇಸ್ ರೀ ಓಪೆನ್ ಮಾಡೋದು ಬೇಡ. ಕೇಸ್ ಕ್ಲೋಸ್ ಮಾಡಿಸಿದ್ದು ನಾನೇ. ಆದರೆ ಇದೀಗ ಸಮನ್ಸ್ ಬರುತ್ತಿವೆ ಅಂದರೆ ಹೇಗೆ? ಸಿಎಂ ಬೊಮ್ಮಾಯಿ‌ ಕೂಡ ಮಹದಾಯಿಗಾಗಿ ಹೋರಾಟ ಮಾಡಿದವರು. ಕೂಡಲೇ ಈ ಬಗ್ಗೆ ಅವರು ಪರಿಶೀಲನೆ ಮಾಡಲಿ, ತಾಂತ್ರಿಕ ಸಮಸ್ಯೆಯಿದ್ದರೆ ಕೂಡಲೇ ಪರಿಹರಿಸಲಿ ಎಂದು ಹೇಳಿದ್ದಾರೆ.

ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?