AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ ನ್ಯೂಸ್: ಕೊನೆಗೂ ಮಹದಾಯಿ ಯೋಜನೆ ಜಾರಿಗೆಗೆ ದಿಟ್ಟ ಹೆಜ್ಜೆ ಇಟ್ಟ ಸರ್ಕಾರ

ಮಹದಾಯಿ ಯೋಜನೆ ಜಾರಿಗಾಗಿ ಕಿತ್ತೂರು ಕರ್ನಾಟಕದ ಜನರು ಹಲವು ದಶಕಗಳಿಂದ ಹೋರಾಟ ನಡೆಸುತ್ತಲೇ ಇದ್ದಾರೆ. ಆದರೆ, ಯೋಜನೆ ಜಾರಿಗೆಗೆ ಒಂದಲ್ಲ ಒಂದು ಕಾರಣಗಳಿಂದ ಗ್ರಹಣ ಹಿಡಿಯುತ್ತಿದೆ. ಹಿಡಿದಿರುವ ಗ್ರಹಣ ಬಿಡುವ ಸಮಯ ಇದೀಗ ಬಂದಿದೆ. ಮಹದಾಯಿ ಯೋಜನೆ ಜಾರಿ ವಿಚಾರವಾಗಿ ಸರ್ಕಾರ ಒಂದು ದಿಟ್ಟ ಹೆಜ್ಜೆ ಇಟ್ಟಿದೆ.

ಗುಡ್​ ನ್ಯೂಸ್: ಕೊನೆಗೂ ಮಹದಾಯಿ ಯೋಜನೆ ಜಾರಿಗೆಗೆ ದಿಟ್ಟ ಹೆಜ್ಜೆ ಇಟ್ಟ ಸರ್ಕಾರ
ಮಹದಾಯಿ ನದಿ
ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 18, 2025 | 3:25 PM

Share

ಹುಬ್ಬಳ್ಳಿ, ಆಗಸ್ಟ್​ 18: ಒಂದಡೆ ಮಹದಾಯಿ ಯೋಜನೆ (Mahadayi River Project) ಜಾರಿಯಾಗಲು ಬಿಡಲ್ಲ ಎಂದು ಗೋವಾ (Goa) ಮುಖ್ಯಮಂತ್ರಿ ಹೇಳುತ್ತಿದ್ದರೇ, ಇನ್ನೊಂದಡೆ ಮಹದಾಯಿ ಯೋಜನೆ ಜಾರಿಗಾಗಿ ಕರ್ನಾಟಕ ಸರ್ಕಾರ (Karnataka Government) ಒಂದು ಹೆಜ್ಜೆ ಮುಂದೆ ಇಟ್ಟು ಗೋವಾಕ್ಕೆ ಕೌಂಟರ್ ನೀಡಿದೆ. ಯೋಜನೆ ಜಾರಿಗೆ ಬೇಕಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಇದೀಗ ಕೇಂದ್ರದ ಪರಿಸರ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿ ಪರವಾನಗಿ ಮಾತ್ರ ಬಾಕಿ ಉಳಿದಿದೆ. ಒಂದು ವೇಳೆ ಪರವಾನಗಿ ಸಿಕ್ಕರೇ, ಯೋಜನೆಗೆ ಗ್ರೀನ್ ಸಿಗ್ನಲ್ ಸಿಗಲಿದೆ.

ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ 13 ಪಟ್ಟಣಗಳು ಮತ್ತು ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಮತ್ತು ನೀರಾವರಿ ಉದ್ದೇಶಕ್ಕಾಗಿ ಮಹದಾಯಿ ಯೋಜನೆ ಜಾರಿಗೊಳಿಸಬೇಕು ಅಂತ ದಶಕಗಳಿಂದ ಜನರು ಹೋರಾಟ ಮಾಡುತ್ತಲೇ ಇದ್ದಾರೆ. ಆದರೆ, ಈ ಯೋಜನೆ ವಿಚಾರವಾಗಿ ಕರ್ನಾಟಕ ಮತ್ತು ಗೋವಾ ನಡುವೆ ಬಿಕ್ಕಟ್ಟು ನಿರ್ಮಾಣವಾಗಿದೆ.

2010 ರಲ್ಲಿ ಕೇಂದ್ರ ಸರ್ಕಾರ ಮಹದಾಯಿ ಜಲವಿವಾಧ ಮಂಡಳಿ ರಚನೆ ಮಾಡಿತ್ತು. ಈ ಮಂಡಳಿ 2018 ರಲ್ಲಿ ಅಂತಿಮ ತೀರ್ಪು ನೀಡಿತ್ತು. ಮಂಡಳಿ, ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ಮಾಡಿತ್ತು. ಮಹದಾಯಿ ಯೋಜನೆಯ ಡಿಪಿಆರ್​ಗೆ ಅನುಮತಿ ಕೂಡಾ ಸಿಕ್ಕಿದೆ. ಇನ್ನೇನು ಯೋಜನೆ ಜಾರಿಯಾಯ್ತು ಅಂತ ಕಿತ್ತೂರು ಕರ್ನಾಟಕ ಭಾಗದ ಜನರು ಸಂಭ್ರಮ ಪಟ್ಟಿದ್ದರು. ಆದರೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿ ಇನ್ನೂವರಗೆ ಯೋಜನೆಗೆ ಅನುಮತಿ ನೀಡಿಲ್ಲ.

ಯೋಜನೆಗೆ ಅನುಮತಿ ನೀಡದಂತೆ ಗೋವಾ ಸರ್ಕಾರ ಕೇಸ್ ಹಾಕಿದೆ. ಮಹದಾಯಿ ಯೋಜನೆಗೆ ಅನುಮತಿ ನೀಡದಂತೆ ಗೋವಾ ಸರ್ಕಾರ ಮೇಲಿಂದ ಮೇಲೆ ಕೇಂದ್ರದ ಮೇಲೆ ಒತ್ತಡ ಹೇರುತ್ತಲೇ ಇದೆ. ಇದೇ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಲ್ಲಿನ ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಕಿತ್ತೂರು ಕರ್ನಾಟಕ ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

ಇದರ ನಡುವೆ ಇದೀಗ ರಾಜ್ಯ ಸರ್ಕಾರ ಯೋಜನೆ ಜಾರಿಗೆ ಒಂದು ಹೆಜ್ಜೆ ಮುಂದಿಟ್ಟಿದೆ. ಯೋಜನೆ ಜಾರಿಗೆ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ. ಜುಲೈ 23 ರಂದೇ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಯವರು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಸೋಗಾ, ಕರಂಬಳ, ಶೇಡಗಾಳಿ, ರೂಮೇವಾಡಿ ಗ್ರಾಮದಲ್ಲಿ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದಾರೆ. ಯೋಜನೆಯ ಕಾಮಗಾರಿಗೆ ಬೇಕಾಗಿರುವ ಒಟ್ಟು 9 ಎಕರೆ 27 ಗುಂಟೆ ಭೂ ಸ್ವಾಧಿನಕ್ಕೆ ಅಧಿಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಹೊತ್ತಿಕೊಂಡ ಮಹದಾಯಿ ಹೋರಾಟದ ಕಿಚ್ಚು: ಧಾರವಾಡದಲ್ಲಿ ಪ್ರತಿಭಟನಾ ರ್‍ಯಾಲಿ

ಗೋವಾ ಮುಖ್ಯಮಂತ್ರಿ ಯೋಜನೆ ಜಾರಿಯಾಗಲು ಬಿಡಲ್ಲ ಅಂತ ಹೇಳಿದ ಕೆಲವೇ ದಿನಗಳಲ್ಲಿ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸುವ ಮೂಲಕ, ಯಾವುದೇ ಕಾರಣಕ್ಕೂ ಯೋಜನೆಯನ್ನು ನಿಲ್ಲಿಸೋದಿಲ್ಲ ಎಂಬ ಸಂದೇಶವನ್ನು ರಾಜ್ಯ ಸರ್ಕಾರ ಗೋವಾಕ್ಕೆ ನೀಡಿದೆ. ಸದ್ಯ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆ, ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಯೋಜನೆಗೆ ಅನುಮತಿ ಸಿಗುವುದು ಬಾಕಿ ಇದೆ. ಇದನ್ನು ಆದಷ್ಟು ಬೇಗನೆ ಕೇಂದ್ರ ಸಚಿವರು ಕೊಡಿಸುವ ಕೆಲಸ ಮಾಡಬೇಕು ಅಂತ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.

ರಾಜ್ಯದ ಪಾಲಿನ ಕೆಲಸವನ್ನು ಮಾಡಲಾಗಿದೆ. ಇದೀಗ ಕೇಂದ್ರದ ಮೇಲೆ ಪ್ರಲ್ಹಾದ್ ಜೋಶಿ ಸೇರಿದಂತೆ ಎಲ್ಲ ಸಚಿವರು ಒತ್ತಡ ತಂದು ಯೋಜನೆ ಜಾರಿಗೆ ಮುಂದಾಗಬೇಕು ಅಂತ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಯೋಜನೆ ಜಾರಿಗೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಅಂತ ಹೇಳಿದ್ದಾರೆ.

ಮಹದಾಯಿ ಯೋಜನೆ ಕಾಮಗಾರಿಗೆ ಬೇಕಾದ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಆದಷ್ಟು ಬೇಗನೆ ಕೇಂದ್ರದ ವನ್ಯಜೀವಿ ಮಂಡಳಿ ಪರವಾನಗಿ ಕೊಡಿಸುವ ಕೆಲಸವಾದ್ರೆ ಯೋಜನೆಗೆ ಹಿಡದಿರುವ ಗ್ರಹಣ ಬಿಡಲಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರದ ಸಚಿವರು ರಾಜಕೀಯ ಪ್ರತಿಷ್ಠೆಯನ್ನು ಬಿಟ್ಟು ಯೋಜನೆ ಜಾರಿಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Mon, 18 August 25

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ