AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶ ಪೂಜೆ!

ದೇಶದಲ್ಲೇ ಸಂಚಲನ ನಿರ್ಮಿಸಿದ್ದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗಿದೆ.

ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶ ಪೂಜೆ!
ಇತಿಹಾಸ ಸೃಷ್ಟಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ: ಸಚಿವ ಜೋಶಿ ನೇತೃತ್ವದಲ್ಲಿ ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶನ ಹಬ್ಬ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 31, 2022 | 8:24 PM

ಹುಬ್ಬಳ್ಳಿ: ದೇಶದಲ್ಲೇ ಸಂಚಲನ ನಿರ್ಮಿಸಿದ್ದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸಲಾಗಿದೆ.

ಈ ಐತಿಹಾಸಿಕ ಮೈದಾನದಲ್ಲಿ ಅಂದು ರಾಷ್ಟ್ರ ಧ್ವಜ ಹಾರಿಸಲು ಅನೇಕರು ಜೀವ ಬಲಿದಾನಗೈದ ಘಟನೆ ಅಚ್ಚಳಿಯದಂತೆ ಸ್ಮೃತಿ ಪಟಲದಲ್ಲಿ ಉಳಿದಿದೆ. ಇಂತಹ ಐತಿಹಾಸಿಕ ಮೈದಾನದಲ್ಲಿ ಇಂದು ಅದ್ಧೂರಿಯಾಗಿ ಗಣೇಶೋತ್ಸವ ಆಚರಣೆ ನಡೆದಿರುವುದು ಮತ್ತೊಂದು ಇತಿಹಾಸ.

ಈ ಅದ್ಧೂರಿ ಗಣೇಶೋತ್ಸವ ಆಚರಣೆಯ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ ಜಗದೀಶ್ ಶೆಟ್ಟರ್, ಸಚಿವರಾದ ಶ್ರೀ ಶಂಕರಪಾಟೀಲ್ ಮುನೇನಕೊಪ್ಪ, ಶ್ರೀ ಹಾಲಪ್ಪ ಆಚಾರ್, ಶಾಸಕರಾದ ಶ್ರೀ ಅರವಿಂದ ಬೆಲ್ಲದ್, ಶ್ರೀ ಸಿಎಂ ನಿಂಬಣ್ಣವರ್, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಮಹೇಶ್ ಟೆಂಗಿನಕಾಯಿ, ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀ ಸಂತೋಷ್ ಚೌಹಾನ್, ಶ್ರೀ ಶಿವು ಮೆಣಸಿನಕಾಯಿ ಹಾಗೂ ಗಣೇಶೋತ್ಸವ ಸಮಿತಿಯ ಪ್ರಮುಖರು ಸಹ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಸಾಥ್ ನೀಡಿದರು‌.

ಮಹಾಮಂಗಳಾರತಿಯೊಂದಿಗೆ ಸಂಪನ್ನವಾದ ಗಣೇಶನ ಹಬ್ಬ! ದೇಶದಲ್ಲೇ ಒಂದು ಸಂಚಲನ ನಿರ್ಮಿಸಿದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಕಾನೂನಿನ ಮೂಲಕವೇ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಇದೀಗ ಮಹಾಮಂಗಳಾರತಿ ಪೂಜಾ ಕಾರ್ಯ ನೆರವೇರಿದೆ. ರಾಷ್ಟ್ರ ಧ್ವಜ ಹಾರಿಸಲು ಅಂದು ಅನೇಕರು ಜೀವ ಬಲಿದಾನಗೈದ ಇದೇ ಮೈದಾನ ಇಂದು ಗಣೇಶೋತ್ಸವ ಆಚರಣೆಯ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

Published On - 8:21 pm, Wed, 31 August 22

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ