AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ಖರ್ಗೆ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಪ್ರೆಸಿಡೆಂಟ್ ಆಗ್ತಾರೆ ಅಷ್ಟೇ – ಪ್ರಲ್ಹಾದ್ ಜೋಶಿ

Pralhad Joshi: ಮಲ್ಲಿಕಾರ್ಜುನ್ ಖರ್ಗೆ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪ್ರಾಯೋಜಿತ ಅಭ್ಯರ್ಥಿ ಅಂತಾ ಸ್ವತಃ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್ ಅವರೇ ಹೇಳಿದ್ದಾರೆ. ಹೀಗಿರುವಾಗ ಖರ್ಗೆ ಅವರು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿ ಪಕ್ಷದಲ್ಲಿ ಏನು ಬದಲಾವಣೆ ತರಲು ಸಾಧ್ಯ ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.‌

Mallikarjun Kharge: ಖರ್ಗೆ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಪ್ರೆಸಿಡೆಂಟ್ ಆಗ್ತಾರೆ ಅಷ್ಟೇ - ಪ್ರಲ್ಹಾದ್ ಜೋಶಿ
ಖರ್ಗೆ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಪ್ರೆಸಿಡೆಂಟ್ ಆಗ್ತಾರೆ ಅಷ್ಟೇ - ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 01, 2022 | 5:56 PM

ಧಾರವಾಡ: ನೆಹರು ಕುಟುಂಬದ ಹೊರತಾಗಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಎಐಸಿಸಿಯಲ್ಲಿ ಇದೊಂದು ನಾಟಕ ನಡೆಯುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜೋಶಿ (Pralhad Joshi), ಯಾರೇ ಅಧ್ಯಕ್ಷರಾದರೂ, ಅವರೂ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಅಧ್ಯಕ್ಷರು ಅಷ್ಟೇ ಎಂದರು (Remote Controlled AICC President).

ಮಲ್ಲಿಕಾರ್ಜುನ್ ಖರ್ಗೆ ಅವರು (Mallikarjun Kharge) ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪ್ರಾಯೋಜಿತ ಅಭ್ಯರ್ಥಿ ಅಂತಾ ಸ್ವತಃ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್ ಅವರೇ ಹೇಳಿದ್ದಾರೆ. ಹೀಗಿರುವಾಗ ಖರ್ಗೆ ಅವರು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿ ಪಕ್ಷದಲ್ಲಿ ಏನು ಬದಲಾವಣೆ ತರಲು ಸಾಧ್ಯ ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.‌

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಏನು ಬದಲಾವಣೆ ಮಾಡಿದ್ರು.‌ ಸೋನಿಯಾ ಗಾಂಧಿ ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ಅನಿಸಿಕೊಂಡ್ರು. ಈಗ ಖರ್ಗೆ ಅವರು ರಿಮೋಟ್ ಕಂಟ್ರೋಲ್ ಅಧ್ಯಕ್ಷರಾಗುತ್ತಾರೆ ಅಷ್ಟೇ. ಯಾವುದೇ ಸಹಿ ಹಾಕುವುದಿರಲಿ, ಮನೆಯಿಂದ ಒಂದು ಹೆಜ್ಜೆ ಹೊರ ಹಾಕಬೇಕಂದ್ರೂ, ನೆಹರು ಕುಟುಂಬದವರನ್ನ ಕೇಳಿ ನಿರ್ಧಾರ ಮಾಡಬೇಕಾಗುತ್ತದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ, ನೆಹರೂ ಕುಟುಂಬದ ಹೊರಗಿನವವರು ಪಕ್ಷದ ರಾಷ್ಟ್ರಾಧ್ಯಕ್ಷರು ಎನ್ನುವುದೆಲ್ಲ ಒಂದು ನಾಟಕ ಅಷ್ಟೇ. ಈ ನಾಟಕ ಎಲ್ಲಿಯವರೆಗೆ ನಡೆಯುತ್ತೆ ನಡೆಯಲಿ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಇದೇ ವೇಳೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ, ರಾಹುಲ್ ಗಾಂಧಿ ಎಲ್ಲಿ ಬೇಕಾದ್ರು ಯಾತ್ರೆ ಮಾಡಲಿ. ಅವರು ಎಲ್ಲೆಲ್ಲಿ ಹೋಗ್ತಾರೋ ಅಲ್ಲೆಲ್ಲಾ ಬಿಜೆಪಿ ಗೆಲ್ಲುತ್ತದೆ. ಹೀಗಾಗಿ ಕಾಂಗ್ರೆಸ್ ನವರಿಗೆ ನಾನು ಮನವಿ ಮಾಡ್ತೇನೆ. ರಾಹುಲ್ ಗಾಂಧಿಯವರನ್ನ ರಾಜ್ಯಕ್ಕೆ ಹೆಚ್ಚು ಹೆಚ್ಚು ಕರೆಸಲಿ, ಅದರಿಂದ ಬಿಜೆಪಿಗೆ ಒಳ್ಳೆಯದು ಎಂದು ಸಚಿವ ಪ್ರಲ್ಹಾದ್ ಜೋಶಿಯವರು ಭಾರತ್ ಜೋಡೋ ಯಾತ್ರೆ ಬಗ್ಗೆ ವ್ಯಂಗ್ಯವಾಡಿದರು.

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ