AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ಖರ್ಗೆ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಪ್ರೆಸಿಡೆಂಟ್ ಆಗ್ತಾರೆ ಅಷ್ಟೇ – ಪ್ರಲ್ಹಾದ್ ಜೋಶಿ

Pralhad Joshi: ಮಲ್ಲಿಕಾರ್ಜುನ್ ಖರ್ಗೆ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪ್ರಾಯೋಜಿತ ಅಭ್ಯರ್ಥಿ ಅಂತಾ ಸ್ವತಃ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್ ಅವರೇ ಹೇಳಿದ್ದಾರೆ. ಹೀಗಿರುವಾಗ ಖರ್ಗೆ ಅವರು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿ ಪಕ್ಷದಲ್ಲಿ ಏನು ಬದಲಾವಣೆ ತರಲು ಸಾಧ್ಯ ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.‌

Mallikarjun Kharge: ಖರ್ಗೆ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಪ್ರೆಸಿಡೆಂಟ್ ಆಗ್ತಾರೆ ಅಷ್ಟೇ - ಪ್ರಲ್ಹಾದ್ ಜೋಶಿ
ಖರ್ಗೆ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಪ್ರೆಸಿಡೆಂಟ್ ಆಗ್ತಾರೆ ಅಷ್ಟೇ - ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Oct 01, 2022 | 5:56 PM

Share

ಧಾರವಾಡ: ನೆಹರು ಕುಟುಂಬದ ಹೊರತಾಗಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಎಐಸಿಸಿಯಲ್ಲಿ ಇದೊಂದು ನಾಟಕ ನಡೆಯುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜೋಶಿ (Pralhad Joshi), ಯಾರೇ ಅಧ್ಯಕ್ಷರಾದರೂ, ಅವರೂ ನೆಹರು ಕುಟುಂಬದ ರಿಮೋಟ್ ಕಂಟ್ರೋಲ್ ಅಧ್ಯಕ್ಷರು ಅಷ್ಟೇ ಎಂದರು (Remote Controlled AICC President).

ಮಲ್ಲಿಕಾರ್ಜುನ್ ಖರ್ಗೆ ಅವರು (Mallikarjun Kharge) ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪ್ರಾಯೋಜಿತ ಅಭ್ಯರ್ಥಿ ಅಂತಾ ಸ್ವತಃ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್ ಅವರೇ ಹೇಳಿದ್ದಾರೆ. ಹೀಗಿರುವಾಗ ಖರ್ಗೆ ಅವರು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿ ಪಕ್ಷದಲ್ಲಿ ಏನು ಬದಲಾವಣೆ ತರಲು ಸಾಧ್ಯ ಎಂದು ಪ್ರಲ್ಹಾದ್ ಜೋಶಿ ಪ್ರಶ್ನಿಸಿದ್ದಾರೆ.‌

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಏನು ಬದಲಾವಣೆ ಮಾಡಿದ್ರು.‌ ಸೋನಿಯಾ ಗಾಂಧಿ ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ಅನಿಸಿಕೊಂಡ್ರು. ಈಗ ಖರ್ಗೆ ಅವರು ರಿಮೋಟ್ ಕಂಟ್ರೋಲ್ ಅಧ್ಯಕ್ಷರಾಗುತ್ತಾರೆ ಅಷ್ಟೇ. ಯಾವುದೇ ಸಹಿ ಹಾಕುವುದಿರಲಿ, ಮನೆಯಿಂದ ಒಂದು ಹೆಜ್ಜೆ ಹೊರ ಹಾಕಬೇಕಂದ್ರೂ, ನೆಹರು ಕುಟುಂಬದವರನ್ನ ಕೇಳಿ ನಿರ್ಧಾರ ಮಾಡಬೇಕಾಗುತ್ತದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ, ನೆಹರೂ ಕುಟುಂಬದ ಹೊರಗಿನವವರು ಪಕ್ಷದ ರಾಷ್ಟ್ರಾಧ್ಯಕ್ಷರು ಎನ್ನುವುದೆಲ್ಲ ಒಂದು ನಾಟಕ ಅಷ್ಟೇ. ಈ ನಾಟಕ ಎಲ್ಲಿಯವರೆಗೆ ನಡೆಯುತ್ತೆ ನಡೆಯಲಿ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಇದೇ ವೇಳೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ, ರಾಹುಲ್ ಗಾಂಧಿ ಎಲ್ಲಿ ಬೇಕಾದ್ರು ಯಾತ್ರೆ ಮಾಡಲಿ. ಅವರು ಎಲ್ಲೆಲ್ಲಿ ಹೋಗ್ತಾರೋ ಅಲ್ಲೆಲ್ಲಾ ಬಿಜೆಪಿ ಗೆಲ್ಲುತ್ತದೆ. ಹೀಗಾಗಿ ಕಾಂಗ್ರೆಸ್ ನವರಿಗೆ ನಾನು ಮನವಿ ಮಾಡ್ತೇನೆ. ರಾಹುಲ್ ಗಾಂಧಿಯವರನ್ನ ರಾಜ್ಯಕ್ಕೆ ಹೆಚ್ಚು ಹೆಚ್ಚು ಕರೆಸಲಿ, ಅದರಿಂದ ಬಿಜೆಪಿಗೆ ಒಳ್ಳೆಯದು ಎಂದು ಸಚಿವ ಪ್ರಲ್ಹಾದ್ ಜೋಶಿಯವರು ಭಾರತ್ ಜೋಡೋ ಯಾತ್ರೆ ಬಗ್ಗೆ ವ್ಯಂಗ್ಯವಾಡಿದರು.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ