Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಗಾರನ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಡೆತ್​ನೋಟ್​​ನಲ್ಲಿ ಸ್ಫೋಟಕ ಅಂಶ ಬಯಲು

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕರ್ನಾಟಕದಲ್ಲಿ ಸಾಕಷ್ಟು ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಸಾಲಗಾರನ ಕಾಟದಿಂದಾಗಿ ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಉಣಕಲ್​ಕೆರೆಯಲ್ಲಿ ನಡೆದಿದೆ. ಸಾಲ ತೀರಿಸಿದ್ದರೂ ಕಿರುಕುಳ ಮುಂದುವರಿದಿದ್ದರಿಂದ ಡೆತ್​​ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಲಗಾರನ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಡೆತ್​ನೋಟ್​​ನಲ್ಲಿ ಸ್ಫೋಟಕ ಅಂಶ ಬಯಲು
ಸಾಲಗಾರನ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಡೆತ್​ನೋಟ್​​ನಲ್ಲಿ ಸ್ಫೋಟಕ ಅಂಶ ಬಯಲು
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 19, 2025 | 3:17 PM

ಧಾರವಾಡ, ಫೆಬ್ರವರಿ 19: ಕಿರುಕುಳ ತಪ್ಪಿಸಬೇಕು ಮತ್ತು ಸಾವಿನ ಸರಣಿ ನಿಲ್ಲಬೇಕು ಅಂತಾ ಸರ್ಕಾರ ಫೈನಾನ್ಸ್‌ ವಿರುದ್ಧ ಸುಗ್ರೀವಾಜ್ಞೆ ತಂದಿದೆ. ಆದರೆ ಫೈನಾನ್ಸ್ (Microfinance) ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಕರ್ನಾಟಕದಲ್ಲಿ ಮತ್ತೆ ಸಾವುಗಳು ಸಂಭವಿಸುತ್ತಲ್ಲೇ ಇದ್ದಾವೆ. ಇದೀಗ ಸಾಲಗಾರನ ಕಿರುಕುಳದಿಂದಾಗಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಉಣಕಲ್​ಕೆರೆಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್​ ಕೆರೆಗೆ ಹಾರಿ ಯಲಿವಾಳ ಗ್ರಾಮದ ನಿವಾಸಿ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ ಬಳ್ಳಾರಿ ಎಂಬುವರ ಬಳಿ 4 ಲಕ್ಷ ರೂ. ಸಾಲ ಪಡೆದಿದ್ದ ಶಿವಾನಂದ, ಬಳಿಕ 4 ಲಕ್ಷಕ್ಕೆ 4 ಲಕ್ಷ ರೂ. ಸಾಲ ಕಟ್ಟಿದ್ದರು. ಸಾಲ ತೀರಿಸಿದರೂ ಕಿರುಕುಳ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: 5 ವರ್ಷದ ಮಗಳ ಕೊಂದು ಗ್ರಾ.ಪಂ ಅಧ್ಯಕ್ಷೆ ಆತ್ಮಹತ್ಯೆ, ಪತಿ ಅನೈತಿಕ ಸಂಬಂಧಕ್ಕೆ ಬೇಸತ್ತು ನೇಣಿಗೆ ಶರಣು

ಸಾಲಗಾರನ ಕಿರುಕುಳದ ಬಗ್ಗೆ ಮೃತ ಶಿವಾನಂದ ಡೆತ್​ನೋಟ್​ ಬರೆದಿಟ್ಟಿದ್ದಾರೆ. ಸದ್ಯ ಶಿವಾನಂದ ಮೃತದೇಹ ಹುಬ್ಬಳ್ಳಿ ಕಿಮ್ಸ್ ಶವಾಗಾರಕ್ಕೆ‌ ರವಾನೆ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಮಿಷನರ್ ಕಾಲಿಗೆ ಬಿದ್ದ ಶಿವಾನಂದ ಚಿಕ್ಕಮ್ಮ 

ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಹುಬ್ಬಳ್ಳಿ-ಧಾರವಾಡ ಪೋಲಿಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ. ಈ ವೇಳೆ ಮೃತ ಶಿವಾನಂದ ಚಿಕ್ಕಮ್ಮ ಸರಸ್ವತಿ ಕಮಿಷನರ್ ಕಾಲಿಗೆ ಬಿದಿದ್ದು, ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಅಳಲು ತೊಡಿಕೊಂಡಿದ್ದಾರೆ. ಕಿರುಕುಳ ನೀಡಿ ನನ್ನ ಮಗನ ಸಾವಿಗೆ ಕಾರಣರಾದವರ ಮೇಲೆ ಕ್ರಮಕ್ಕೆ ಮನವಿ ಮಾಡಲಾಗಿದ್ದು, ಆರೋಪಿಯ ಮೇಲೆ ಕ್ರಮ ಕೈಗೊಳ್ಳುವುದಾಗಿ ಕಮಿಷನರ್ ಭರವಸೆ ನೀಡಿದ್ದಾರೆ.

ಕಮಿಷನರ್ ಎನ್.ಶಶಿಕುಮಾರ್ ಹೇಳಿದ್ದಿಷ್ಟು

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯಾನಗರ ವ್ಯಾಪ್ತಿಯಲ್ಲಿ ಇಂದು ಒಂದು ಪ್ರಕರಣ ದಾಖಲಾಗಿದೆ. ಉಣಕಲ್ ಕೆರೆಯಲ್ಲಿ ಒಂದು ಮೃತ ದೇಹ ಸಿಕ್ಕಿದೆ. ಮೇಲ್ನೋಟಕ್ಕೆ ಮೂರು ದಿನಗಳ ಹಿಂದೆ ನೀರಿಲ್ಲಿ ಬಿದ್ದಿರುವುದು ಗೊತ್ತಾಗಿದೆ. 36 ವಯಸ್ಸಿನ ಶಿವಾನಂದ ಬಸವಣ್ಣಪ್ಪ ಕಳ್ಳಿಮನಿ ಅಂತ ಗುರುತಿಸಲಾಗಿದೆ. ಕುಂದಗೋಳ ತಾಲೂಕು ಯಲಿವಾಳ ಗ್ರಾಮದವನು ಎಂದಿದ್ದಾರೆ.

ಈತನ ಪರಿಚಯಸ್ಥನ ಬಳಿ ನಾಲ್ಕು ಲಕ್ಷ ರೂ. ಹಣ ಪಡೆದು ಅಸಲು ಬಡ್ಡಿ ಸಮೇತ ಕೊಟ್ಟರು ಕಿರುಕುಳ ಮಾಡಲಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಹಿಡಿದುಕೊಟ್ಟ ಎಐ ಕ್ಯಾಮೆರಾ: ಹೇಗೆ ಗೊತ್ತಾ?

ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಬೈಕ್ ಹಾಗೂ ಡೆತ್​ನೋಟ್ ಸಿಕ್ಕಿದೆ. ಇದೇ ತಿಂಗಳ 12ರಂದು ಮನೆ ಬಿಟ್ಟು ಹೊರಗಡೆ ಹೋಗಿರುತ್ತಾನೆ. ದಿನಾಂಕ 14ರಂದು ಮಿಸ್ಸಿಂಗ್ ಅಂತ ಕುಂದಗೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತೆ. ಇದು ಮೈಕ್ರೋ ಫೈನಾನ್ಸ್ ಅಲ್ಲ ಕೈಗಡ ಸಾಲ. ಆರೋಪಿಯನ್ನ ವಶಕ್ಕೆ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:16 pm, Wed, 19 February 25

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ