ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರ ಕುರಿತು ಸಾಮಾಜಿಕ ತಾಲಾಣದಲ್ಲಿ ಅವಹೇಳನಕಾರಿ ಪೋಸ್ಟ್​​

ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಿಂದೂ ಯುವತಿಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರ ಕುರಿತು ಸಾಮಾಜಿಕ ತಾಲಾಣದಲ್ಲಿ ಅವಹೇಳನಕಾರಿ ಪೋಸ್ಟ್​​
ಅವಹೇಳನಕಾರಿ ಪೋಸ್ಟ್​ (ಎಡಚಿತ್ರ) ಪೊಲೀಸರ ವಿಚಾರಣೆ (ಬಲಚಿತ್ರ)
Edited By: ವಿವೇಕ ಬಿರಾದಾರ

Updated on: Aug 04, 2023 | 3:22 PM

ಹುಬ್ಬಳ್ಳಿ: ನಗರದ ಖಾಸಗಿ ಕಾಲೇಜು (College) ವಿದ್ಯಾರ್ಥಿಯೊಬ್ಬ (Student) ಹಿಂದೂ (Hindu) ಯುವತಿಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ (Social Media) ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಹಿಂದೂ ಯುವತಿಯರ ಪೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್​​ ಮಾಡಿದ್ದಾನೆ. ಬಳಿಕ ದಮ್ ಇದ್ದರೆ ನನ್ನ ಹಿಡಿಯಿರಿ ಎಂದು ಹುಬ್ಬಳ್ಳಿಯ ಪೊಲೀಸರಿಗೆ ಚಾಲೆಂಜ್ ಹಾಕಿದ್ದಾನೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಅಲರ್ಟ್ ಆದ ವಿದ್ಯಾನಗರ ಪೊಲೀಸರು ಕಾಲೇಜಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ

ಬಳಿಕ ಡಿಸಿಪಿ ಗೋಪಾಲ ಬ್ಯಾಕೋಡ್ ಕಾಲೇಜ ಪ್ರಾಂಶುಪಾಲರಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸದ್ಯ ಪೊಲೀಸರು ವಿದ್ಯಾರ್ಥಿಯ ವಿಚಾರಣೆ ನಡೆಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಪತ್ನಿಗೆ ಥಳಿತ

ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಥಳಿಸುತ್ತಿದ್ದ ಪತಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಹುಬ್ಬಳ್ಳಿಯ ಹೃದಯಭಾಗದಲ್ಲಿರುವ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ಬಳಿ ನಡೆದಿದೆ. ಸಾರ್ವಜನಿಕರು ವ್ಯಕ್ತಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us