AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್​ ದೃಢ

ತಮ್ಮ ಕಾರು ಚಾಲಕನಿಗೆ ಪಾಸಿಟಿವ್ ಬಂದಿದ್ದರಿಂದ ಹೋಂ ಐಸೋಲೇಷನ್​ನಲ್ಲಿದ್ದ ಅಶ್ವತಿ ಅನುಮಾನದ ಮೇರೆಗೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಇದೀಗ ವರದಿಯಲ್ಲಿ ಪಾಸಿಟಿವ್ ಖಚಿತವಾಗಿದ್ದು ಸದ್ಯ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್​ ದೃಢ
ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ
Skanda
|

Updated on: May 08, 2021 | 9:11 AM

Share

ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಕಳೆದ ಹಲವು ದಿನಗಳಿಂದ ಕೊವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಓಡಾಡಿದ್ದ ಜಿಲ್ಲಾಧಿಕಾರಿಗೆ ಈಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ತಮ್ಮ ಕಾರು ಚಾಲಕನಿಗೆ ಪಾಸಿಟಿವ್ ಬಂದಿದ್ದರಿಂದ ಹೋಂ ಐಸೋಲೇಷನ್​ನಲ್ಲಿದ್ದ ಅಶ್ವತಿ ಅನುಮಾನದ ಮೇರೆಗೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಇದೀಗ ವರದಿಯಲ್ಲಿ ಪಾಸಿಟಿವ್ ಖಚಿತವಾಗಿದ್ದು ಸದ್ಯ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಧಾರವಾಡ, ಮೈಸೂರು ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ಕೊರತೆ ರಾಜ್ಯದ ಹಲವೆಡೆ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು ಧಾರವಾಡ ಹಾಗೂ ಮೈಸೂರು ಜಿಲ್ಲೆಯಲ್ಲೂ ಲಸಿಕೆಗೆ ಪರದಾಡುವಂತಾಗಿದೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ ಮೈಸೂರು ಡಿಹೆಚ್‌ಒ ಡಾ.ಅಮರನಾಥ್ ತಮ್ಮ ತಮ್ಮ ಜಿಲ್ಲೆಗಳಲ್ಲಿನ ಕೊರೊನಾ ಲಸಿಕೆ ಕೊರತೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ.

ಕೊರೊನಾ ಲಸಿಕೆ ಕೊರತೆ ಇರುವ ಹಿನ್ನೆಲೆ ಧಾರವಾಡ ಹಾಗೂ ಮೈಸೂರು ಎರಡೂ ಜಿಲ್ಲೆಗಳಲ್ಲೂ ಮೊದಲ ಡೋಸ್ ಲಸಿಕೆಗೆ ತಡೆ ನೀಡಲಾಗಿದೆ. ಲಸಿಕೆ ಪೂರೈಕೆಯಾಗುವ ತನಕ ಕೇವಲ ಎರಡನೇ ಡೋಸ್ ಲಸಿಕೆ ಪಡೆಯುವವರಿಗೆ ಮಾತ್ರ ನೀಡುವಂತೆ ಸೂಚಿಸಲಾಗಿದೆ. ಧಾರವಾಡದಲ್ಲಿ ಕೊರೊನಾ ಲಸಿಕೆ ಜತೆಗೆ ರೆಮ್​ಡೆಸಿವಿರ್ ಚುಚ್ಚುಮದ್ದಿನ ಅಭಾವವೂ ತಲೆದೋರಿದೆ. ನಿನ್ನೆ ಸಂಜೆಯೇ ಬರಬೇಕಾಗಿದ್ದ ಇಂಜೆಕ್ಷನ್​ ಇನ್ನೂ ಬಾರದ ಕಾರಣ ಕೊರತೆ ಉಂಟಾಗಿದೆ.

ಇದನ್ನೂ ಓದಿ: ಸ್ವಂತ ಹಣದಲ್ಲಿ ಮಂಡ್ಯ ಜನರಿಗೆ ನಿತ್ಯ 2 ಸಾವಿರ ಲೀಟರ್ ಆಕ್ಸಿಜನ್‌ ನೀಡಲು ನಿರ್ಧಾರ: ಸಂಸದೆ ಸುಮಲತಾ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್