AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಗಾಲದ ಮಧ್ಯೆ ರೈತರ ಕೈ ಹಿಡಿದ ಮಾವು ಬೆಳೆ; ಮುಂದಿನ ವರ್ಷದ ಮಾರ್ಚ್‌ನಲ್ಲಿಯೇ ಮಾರುಕಟ್ಟೆಗೆ ಮಾವು ಪ್ರವೇಶ

ಧಾರವಾಡ ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಮಾವು ಕೂಡ ಒಂದು. ಆದರೆ, ಕಳೆದ ಹಲವಾರು ವರ್ಷಗಳಿಂದ ಮಾವಿನ ಬೆಳೆಗೆ ನಾನಾ ಸಮಸ್ಯೆಗಳು ಎದುರಾಗಿದ್ದರಿಂದ ಬೆಳೆಗಾರರು ಒಂದು ರೂಪಾಯಿ ಆದಾಯ ಪಡೆದಿಲ್ಲ. ಈ ಬಾರಿ ಮಳೆ ಇಲ್ಲದೇ ಇದ್ದರೂ ಬಂಪರ್ ಬೆಳೆಯ ನಿರೀಕ್ಷೆಯಲ್ಲಿದ್ದಾರೆ. ಅದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ.

ಬರಗಾಲದ ಮಧ್ಯೆ ರೈತರ ಕೈ ಹಿಡಿದ ಮಾವು ಬೆಳೆ; ಮುಂದಿನ ವರ್ಷದ ಮಾರ್ಚ್‌ನಲ್ಲಿಯೇ ಮಾರುಕಟ್ಟೆಗೆ ಮಾವು ಪ್ರವೇಶ
ಮಾವು ಬೆಳೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 23, 2023 | 7:51 PM

Share

ಧಾರವಾಡ, ಡಿ.23: ಮಳೆ ಕೊರತೆಯಿಂದಾಗಿ ಈ ವರ್ಷ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಹಾರದ ಬೆಳೆಗಳನ್ನು ಬೆಳೆಯಲಾಗಿಲ್ಲ. ಆದರೆ, ಹೆಚ್ಚು ಮಳೆ ಬೀಳದಿರುವುದು ಮಾವಿನ ಫಸಲಿ(Mango crop)ಗೆ ವರವಾಗಿ ಪರಿಣಮಿಸಿದೆ. ಈ ವರ್ಷ ನಿಗದಿಗಿಂತಲೂ ಮುನ್ನವೇ ಮಾವು ಹೂ ಬಿಡಲು ಸಹಕಾರಿಯಾಗಿದೆ. ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಲ್ಲಿ ಮಾರುಕಟ್ಟೆ ಪ್ರವೇಶಿಸುತ್ತಿದ್ದ ಮಾವು, ಈ ಬಾರಿ ಮುಂದಿನ ವರ್ಷದ ಮಾರ್ಚ್‌ನಲ್ಲಿಯೇ ಗ್ರಾಹಕರ ಕೈ ಸೇರುವ ಸಾಧ್ಯತೆ ಇದೆ. ಅಕಾಲಿಕವಾಗಿ ಮಳೆ ಸುರಿಯದಿದ್ದರೆ, ಉತ್ತಮ ಫಸಲು ಸಿಗುವ ನಿರೀಕ್ಷೆಯೂ ಇದೆ. ಇದರಿಂದಾಗಿ ರೈತರು ಈ ಬಾರಿ ಒಳ್ಳೆಯ ಫಸಲನ್ನು ಪಡೆಯುವ ಖುಷಿಯಲ್ಲಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಹವಾಮಾನ ವೈಪರೀತ್ಯವಾಗದಿರಲೆಂದು ಬೇಡಿಕೊಳ್ಳುತ್ತಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ 15000 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ

ರಾಜ್ಯದಲ್ಲಿ 1.60 ಲಕ್ಷ ಹೆಕ್ಟೇರ್‌ನಲ್ಲಿ ಮಾವು ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಪ್ರತಿವರ್ಷ ಸರಾಸರಿ 10 ರಿಂದ 14 ಲಕ್ಷ ಮೆಟ್ರಿಕ್ ಟನ್ ಮಾವಿನ ಇಳುವರಿ ಸಿಗುತ್ತದೆ. ಆದರೆ, ಅಧಿಕ ಮಳೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ 7 ರಿಂದ 8 ಲಕ್ಷ ಟನ್ ಮಾತ್ರವೇ ಇಳುವರಿ ದೊರೆತಿತ್ತು. ಅದರಲ್ಲೂ ಧಾರವಾಡ ಜಿಲ್ಲೆಯಲ್ಲಂತೂ ಮಾವು ಬಂದಿರಲೇ ಇಲ್ಲ. ಆದರೆ, ಈ ಬಾರಿ ಹೆಚ್ಚಿನ ಮಳೆಯಾಗಿಲ್ಲ. ಅದೇ ಕಾರಣಕ್ಕೆ ಈ ವರ್ಷ 15 ಲಕ್ಷ ಟನ್ ಇಳುವರಿ ಸಿಗಬಹುದೆಂದು ಅಂದಾಜಿಸಲಾಗಿದೆ. ಇನ್ನು ಧಾರವಾಡ ಜಿಲ್ಲೆಯಲ್ಲಿ ಒಟ್ಟು 15000 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಕಳೆದ ನಾಲ್ಕು ವರ್ಷಗಳಿಂದಲೂ ಮಾವು ಸಿಗದೇ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಇಲ್ಲಿನ ಆಲ್ಫ್ಯಾನ್ಸೋ ಮಾವಿಗೆ ಅಕ್ಕಪಕ್ಕದ ರಾಜ್ಯಗಳ ಜೊತೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಇಷ್ಟೊಂದು ಬೇಡಿಕೆ ಇದ್ದರೂ ಅದನ್ನು ರಫ್ತು ಮಾಡಲು ರೈತರಿಗೆ ಸಾಧ್ಯವಾಗಿರಲಿಲ್ಲ. ಈ ಬಾರಿ ಹೂವು ಚೆನ್ನಾಗಿ ಬಿಟ್ಟಿರೋದ್ರಿಂದ ಮತ್ತು ಅಕಾಲಿಕ ಮಳೆ ಆಗುವುದಿಲ್ಲ ಎನ್ನುವ ಹವಾಮಾನ ಇಲಾಖೆಯ ವರದಿಯಿಂದ ರೈತರು ಖುಷಿಯಾಗಿದ್ದಾರೆ.

ಇದನ್ನೂ ಓದಿ:Miyazaki Mangoes: ಈ ಮಾವಿನ ಹಣ್ಣಿಗೆ ಕೆ.ಜಿಗೆ 3 ಲಕ್ಷ ರೂ.! ಜಪಾನ್​​ನ​​ ದುಬಾರಿ ಮಾವು ಬೆಳೆದ ಭಾರತೀಯ ರೈತ

ಈ ಬಾರಿಯಾದರೂ ಉತ್ತಮ ಇಳುವರಿ ಬಂದರೆ ಒಳ್ಳೆಯದು ಅನ್ನೋ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಮಾವು ಸಂಪೂರ್ಣವಾಗಿ ಕೈಕೊಟ್ಟಿದ್ದರಿಂದ ಅನೇಕ ಕಡೆಗಳಲ್ಲಿ ರೈತರು ಗಿಡಗಳನ್ನು ಕತ್ತರಿಸಿ ಹಾಕಿ, ಬೇರೆ ಬೆಳೆಗಳಿಗೆ ಮೊರೆ ಹೋಗಿದ್ದರು. ಅದರಲ್ಲೂ ಬಹುತೇಕರು ಕಬ್ಬು ಬೆಳೆಗೆ ಮೊರೆ ಹೋಗಿದ್ದರು. ಈ ಬಾರಿಯೂ ಅದೇ ರೀತಿಯಾದರೆ ಮತ್ತಷ್ಟು ಮಾವಿನ ಮರಗಳು ರೈತರ ಸಿಟ್ಟಿಗೆ ಆಹುತಿಯಾಗುತ್ತಿದ್ದವು. ಆದರೆ ಈ ಬಾರಿಯ ಸ್ಥಿತಿ ನೋಡಿದರೆ ಕೊಂಚ ನಿರಾಳತೆ ಆವರಿಸಿದೆ. ಒಟ್ಟಿನಲ್ಲಿ ಈ ಬಾರಿಯಾದರೂ ಉತ್ತಮ ಇಳುವರಿ ಪಡೆಯೋ ಮೂಲಕ ರೈತರು ಒಂದಷ್ಟು ಆದಾಯ ಗಳಿಸಿದರೆ ಸಾಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!