AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನ ಮದುವೆ; ಪೋಷಕರಿಂದ ಲವ್ ಜಿಹಾದ್ ಆರೋಪ

ಇಬ್ರಾಹಿಂ ಹಿಂದೂ ಹುಡುಗ ಎಂದು ಯುವತಿಯನ್ನು ಪರಿಚಯಿಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಹುಡುಗಿಯನ್ನ ಎರಡನೇ ತಾರೀಖಿನಂದು ಕರೆದುಕೊಂಡು ಹೋಗಿ ಗದಗನಲ್ಲಿ ರಿಜಿಸ್ಟ್ರಾರ್ ಮದುವೆಯಾಗಿದ್ದಾನೆ.

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನ ಮದುವೆ; ಪೋಷಕರಿಂದ ಲವ್ ಜಿಹಾದ್ ಆರೋಪ
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಯುವತಿ
Follow us
TV9 Web
| Updated By: sandhya thejappa

Updated on:Apr 07, 2022 | 12:56 PM

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹಿಂದೂ (Hindu) ಯುವತಿ ಜೊತೆ ಮುಸ್ಲಿಂ (Muslim) ಯುವಕನ ಮದುವೆ ನಡೆದಿದ್ದು, ಇದು ಲವ್ ಜಿಹಾದ್ (Love Jihad) ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ನಿವಾಸಿ ಸ್ನೇಹಾಳನ್ನ ಇಬ್ರಾಹಿಂ ಪ್ರೀತಿಸಿದ್ದ. ಗದಗನಲ್ಲಿ ಈ ಜೋಡಿ ರಿಜಿಸ್ಟ್ರಾರ್ ಮದುವೆ ಕೂಡಾ ಆಗಿದೆ. ಯುವತಿಯ ತಲೆಕೆಡಿಸಿದ್ದಾರೆಂದು ಆರೋಪಿಸಿರುವ ಪೋಷಕರು, ಲವ್ ಜಿಹಾದ್ ಮಾಡಿ ಹುಡುಗಿಯನ್ನ ಬ್ರೈನ್ ವಾಶ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇಬ್ರಾಹಿಂ ಹಿಂದೂ ಹುಡುಗ ಎಂದು ಯುವತಿಯನ್ನು ಪರಿಚಯಿಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಹುಡುಗಿಯನ್ನ ಎರಡನೇ ತಾರೀಖಿನಂದು ಕರೆದುಕೊಂಡು ಹೋಗಿ ಗದಗನಲ್ಲಿ ರಿಜಿಸ್ಟ್ರಾರ್ ಮದುವೆಯಾಗಿದ್ದಾನೆ. ಇಬ್ರಾಹಿಂ ಹುಡುಗಿ ಸಹೋದರನಿಂದ ಪರಿಚಯವಾಗಿದ್ದ. ಇನ್ನು ನಿನ್ನೆ ಇಡೀ ದಿನ ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಕಲಿ ದಾಖಲಾತಿ ಸೃಷ್ಟಿಸಿ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

ಫೆಬ್ರವರಿ 11 ರಂದು ಸ್ನೇಹಾ ಮನೆಯಲ್ಲೆ ಇದ್ದರೂ ಮದುವೆಯಾಗಿದ್ದಾಗಿ ದಾಖಲೆ ಇದೆ. ಹೀಗಾಗೇ ಲವ್ ಜಿಹಾದ್ ಪೋಷಕರು ಆರೋಪ ಮಾಡಿದ್ದಾರೆ. ಹುಡುಗಿಯನ್ನ ಪೊಲೀಸರು ಕರೆತರದೆ ಇದ್ದರೆ ಪ್ರತಿಭಟನೆ ಉಗ್ರ ಸ್ವರೂಪ ತಾಳಲಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಪೊಲೀಸರಿಗೆ ನಾಳೆ ಮಧ್ಯಾಹ್ನ 12 ರವೆಗೆ ಗಡುವು ನೀಡಿದ ಪ್ರಮೋದ್, ನಾಳೆ ಗಲಾಟೆಯಾದರೆ ಸರ್ಕಾರವೇ ಹೊಣೆ ಎಂದಿದ್ದಾರೆ.

ಸ್ನೇಹಾ ಎಪ್ರಿಲ್ 2 ರಿಂದ ಕಾಣಿಸ್ತಾ ಇರಲಿಲ್ಲ. ಆವತ್ತೆ ದೂರು ನೀಡಿದ್ದರೂ ಪೊಲೀಸರು ಉದಾಸೀನ ಮಾಡಿದ್ದಾರೆ. ದೂರು ನೀಡಿ ಐದು ದಿನ ಕಳೆದರೂ ಯುವತಿಯನ್ನು ಹುಡುಕಿಲ್ಲ ಅಂತ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ವಿಡಿಯೋ ಹೇಳಿಕೆ ರಿಲೀಸ್: ಮದುವೆಯಾದ ಯುವತಿ ವಿಡಿಯೋ ಹೇಳಿಕೆ ರಿಲೀಸ್ ಮಾಡಿದ್ದಾಳೆ. ನನ್ನನ್ನು ಯಾರೂ ಒತ್ತಾಯಪೂರ್ವಕವಾಗಿ ಕರೆದೊಯ್ದಿಲ್ಲ. ನಾನು ಒಪ್ಪಿಕೊಂಡು ಪ್ರೀತಿಯಿಂದ ಹೋಗಿದ್ದೇನೆ ಎಂದು ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪೊಲೀಸ್ ಠಾಣೆಗೆ ಬಂದ ಯುವತಿ: ಯುವತಿಯನ್ನ ಪೊಲೀಸರು ಕೇಶ್ವಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದರು. ಯುವತಿಯ ಮನವೊಲಿಕಗೆ ಸಂಬಂಧಿಕರು ಹಾಗೂ ಪೋಷಕರು ಆಗಮಿಸಿದ್ದಾರೆ.

ಇದನ್ನೂ ಓದಿ

ಮೌಂಟ್ ಎವರೆಸ್ಟ್ ಶಿಖರದಿಂದ 360 ಡಿಗ್ರಿ ನೋಟದ ಮನಮೋಹಕ ವಿಡಿಯೋ ಮೂಲಕ ಬದುಕಿನ ಪಾಠ ಹೇಳಿದ ಆನಂದ್ ಮಹೀಂದ್ರಾ

JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ; ವಾರ ಕಳೆದರೂ, ಎಷ್ಟೇ ತನಿಖೆ ನಡೆಸಿದರೂ ಸಿಕ್ತಿಲ್ಲ ಯಾವುದೇ ಸುಳಿವು

Published On - 10:36 am, Thu, 7 April 22

ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ