AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್​ ಯಡವಟ್ಟು

ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಭಾಷಣದುದ್ದಕ್ಕೂ​ ಯಡವಟ್ಟು ಮಾಡಿಕೊಂಡಿದ್ದಾರೆ. ಸರ್ಕಾರ ಪತನ‌ ಆಗುತ್ತೆ ಎಂಬ ಹೇಳಿಕೆಗೆ ವಿಜಯೇಂದ್ರ ಬದಲು ಯತೀಂದ್ರ ಮತ್ತು ನಳೀನ‌ ಕುಮಾರ್ ಕಟೀಲು‌ ಎನ್ನುವ ಬದಲು‌ ನವೀನ ಕಟೀಲು ಎಂದು ಹೇಳಿದ್ದಾರೆ.

ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್​ ಯಡವಟ್ಟು
ಸಚಿವ ಸಂತೋಷ್ ಲಾಡ್
ಶಿವಕುಮಾರ್ ಪತ್ತಾರ್
| Edited By: |

Updated on: Feb 03, 2024 | 9:42 PM

Share

ಹುಬ್ಬಳ್ಳಿ, ಫೆಬ್ರವರಿ 3: ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ (Santosh Lad)​ ಯಡವಟ್ಟು ಮಾಡಿಕೊಂಡಿದ್ದಾರೆ. ಪಾಪ ಯತೀಂದ್ರ ಹುಬ್ಬಳ್ಳಿಗೆ ಬಂದು ಸರ್ಕಾರ ಪತನ‌ ಆಗುತ್ತೆ ಅಂತಾರೆ. ವಿಜಯೇಂದ್ರ ಬದಲು ಯತೀಂದ್ರ ಹೆಸರು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಡಾಲರ್ ಕುರಿತು ಮಾತನಾಡುವಾಗಲೂ ನಳೀನ‌ ಕುಮಾರ್ ಕಟೀಲು‌ ಎನ್ನುವ ಬದಲು‌ ನವೀನ ಕಟೀಲು ಎಂದು ಹೇಳುವ ಮೂಲಕ ಭಾಷಣದುದ್ದಕ್ಕೂ ಸಂತೋಷ್ ಲಾಡ್​ ಯಡವಟ್ಟು ಮಾಡಿಕೊಂಡಿದ್ದಾರೆ. ಆಹಾರ ಭದ್ರತೆ ಕಾನೂನು ತಂದಿದ್ದು ಮನಮೋಹನ್ ಸಿಂಗ್ ಸರ್ಕಾರ. ಅಕ್ಕಿ ಕೊಡುತ್ತೇವೆ ಅಂತಿರಲ್ಲ, ಆ ಕಾನೂನು ತಂದಿದ್ದು ನಾವು ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರು ತಾಲಿಬಾನ್ ಸರ್ಕಾರ ಅಂತೀರಿ. ನೀವು ಕಾಂಗ್ರೆಸ್ ಸರ್ಕಾರದ ಯೋಜನೆ ಬಗ್ಗೆ ಉತ್ತರ ಕೊಡಿ. ನರೇಗಾ ಕಾರ್ಯಕ್ರಮ ಯಾವ ಪಕ್ಷ ಮಾಡಿಲ್ಲ ಅದನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ನಾವು ಚರ್ಚೆಗೆ ಸಿದ್ದ ಎಂದಿದ್ದಾರೆ.

ಇದನ್ನೂ ಓದಿ: ಆರ್​ ಅಶೋಕ್ ಹಿಂದೂ ಆದರೆ ನಾನು ಶ್ರೇಷ್ಠ ಹಿಂದೂ: ಸಿಎಂ ಸಿದ್ದರಾಮಯ್ಯ

ನಮ್ಮ ದೇಶದಲ್ಲಿ 2019 ರಿಂದ 2021 ರ ವರೆಗೆ 1347000 ನಮ್ಮ ಅಕ್ಕ ತಂಗಿಯರು ಕಾಣೆಯಾಗಿದ್ದಾರೆ. ಇದು ನಾನು ಹೇಳೋದಲ್ಲ, ನ್ಯಾಷನಲ್ ಕ್ರೈಂ ರಿಪೋರ್ಟ್ ಕೊಟ್ಟಿರುವುದು. ಇದರ ಬಗ್ಗೆ ಬಿಜೆಪಿಯವರು ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಸರ್ಕಾರ ತೆಗೆಯಲು ಮೋದಿ ಪ್ರಯತ್ನ ಮಾಡ್ತಿದ್ದಾರೆ

ಸಿದ್ದರಾಮಯ್ಯ ಸರ್ಕಾರ ತೆಗೆಯಲು ಪ್ರಧಾನಿ ಮೋದಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ‌ ದಿನಗಳಲ್ಲಿ ಸಿದ್ದರಾಮಯ್ಯ ಸರ್ಕಾರ ತೆಗೆಯಲು ಹುನ್ನಾರ ನಡೆಯುತ್ತಿದೆ. ಹೆಣ್ಣುಮಕ್ಕಳೆಲ್ಲ ಸಿದ್ದರಾಮಯ್ಯ ಪರ ಇದ್ದರೆ ಕೈ ಎತ್ತಿ.

ಇದನ್ನೂ ಓದಿ: ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

ಮೋದಿ ಅವರೇ ಸರ್ಕಾರ ತೆಗೆಯಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ. ನೀವೆಲ್ಲರೂ ಸಿಎಂ ಸಿದ್ದರಾಮಯ್ಯ ಪರ ಇರಬೇಕು ಎಂದು ಹೇಳಿದ್ದಾರೆ.

ಪಕ್ಷಾಂತರ ಆದ ಮೇಲೆ ನಾನು ಬದಲಾಗಿಲ್ಲ: ಜಗದೀಶ್ ಶೆಟ್ಟರ್​

ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್​ ಶಾಸಕರ ಪ್ರತಿಭಟನೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​ ಸದಸ್ಯರು ಪಾರ್ಲಿಮೆಂಟ್​ನಲ್ಲಿ ಪ್ರಸ್ತಾಪ ಮಾಡಬೇಕು. ಪಾರ್ಲಿಮೆಂಟ್​ನಲ್ಲಿ ಅವರು ಏಕೆ ಮಾತನಾಡಲ್ಲ.​ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ.ಸುರೇಶ್​ ಮಾತಾಡಬೇಕಿತ್ತು. ಕಾಂಗ್ರೆಸ್​​ ಪ್ರತಿಭಟನೆ ರಾಜಕೀಯ ಅನಿಸುತ್ತದೆ. ಪಕ್ಷಾಂತರ ಆದ ಮೇಲೆ ನಾನು ಬದಲಾಗಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!