AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಸ್ಫೋಟಗೊಂಡ ಬಾಕ್ಸ್ ರೈತರಿಟ್ಟಿದ್ದು, ರೈಲ್ವೆ ಸಚಿವರ ಹೇಳಿಕೆಗೆ ಅನ್ನದಾತರು ಗರಂ

ಹುಬ್ಬಳ್ಳಿ: ಜನರಿಂದ ತುಂಬಿದ ರೈಲು ನಿಲ್ದಾಣ.. ಅನುಮಾನಾಸ್ಪದ ಬಾಕ್ಸ್.. ಭಯಭೀತರಾದ ಪ್ರಯಾಣಿಕರು.. ಏನಾಯ್ತು ಏನಾಯ್ತು ಅಂತಾ ಪೊಲೀಸ್ರು ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಬರುತ್ತಿದ್ದಂತೆ ಬಾಕ್ಸ್ ಸ್ಫೋಟಗೊಂಡಿತ್ತು. ರೈಲು ನಿಲ್ದಾಣದಲ್ಲಿ ರಕ್ತ ಚೆಲ್ಲಿತ್ತು. ಇಷ್ಟಕ್ಕೂ ಈ ಘಟನೆ ನಡೆದಿದ್ದು ಅಕ್ಟೋಬರ್ 21ರಂದು ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ.. ಅಮರಾವತಿ-ಹುಬ್ಬಳ್ಳಿ ಎಕ್ಸ್​ಪ್ರೆಸ್ ರೈಲಿನಲ್ಲಿ ಬಂದಿದ್ದ ಬಾಕ್ಸ್ ಸ್ಫೋಟಗೊಂಡು ಅನಾಹುತ ಸಂಭವಿಸಿತ್ತು. ಈ ವೇಳೆ, ಹಲವರು ಗಾಯಗೊಂಡಿದ್ರೆ, ಒಬ್ಬರಿಗೆ ಗಂಭೀರ ಗಾಯಗಳಾಗಿದ್ವು. ಇದ್ರ ತನಿಖೆ ನಡೆಯುತ್ತಿರುವಾಗ್ಲೇ ರೈತರ ಸಿಟ್ಟು ಸ್ಫೋಟಗೊಂಡಿದೆ. […]

ಹುಬ್ಬಳ್ಳಿಯಲ್ಲಿ ಸ್ಫೋಟಗೊಂಡ ಬಾಕ್ಸ್ ರೈತರಿಟ್ಟಿದ್ದು, ರೈಲ್ವೆ ಸಚಿವರ ಹೇಳಿಕೆಗೆ ಅನ್ನದಾತರು ಗರಂ
ಸಾಧು ಶ್ರೀನಾಥ್​
|

Updated on: Jan 03, 2020 | 12:32 PM

Share

ಹುಬ್ಬಳ್ಳಿ: ಜನರಿಂದ ತುಂಬಿದ ರೈಲು ನಿಲ್ದಾಣ.. ಅನುಮಾನಾಸ್ಪದ ಬಾಕ್ಸ್.. ಭಯಭೀತರಾದ ಪ್ರಯಾಣಿಕರು.. ಏನಾಯ್ತು ಏನಾಯ್ತು ಅಂತಾ ಪೊಲೀಸ್ರು ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಬರುತ್ತಿದ್ದಂತೆ ಬಾಕ್ಸ್ ಸ್ಫೋಟಗೊಂಡಿತ್ತು. ರೈಲು ನಿಲ್ದಾಣದಲ್ಲಿ ರಕ್ತ ಚೆಲ್ಲಿತ್ತು.

ಇಷ್ಟಕ್ಕೂ ಈ ಘಟನೆ ನಡೆದಿದ್ದು ಅಕ್ಟೋಬರ್ 21ರಂದು ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ.. ಅಮರಾವತಿ-ಹುಬ್ಬಳ್ಳಿ ಎಕ್ಸ್​ಪ್ರೆಸ್ ರೈಲಿನಲ್ಲಿ ಬಂದಿದ್ದ ಬಾಕ್ಸ್ ಸ್ಫೋಟಗೊಂಡು ಅನಾಹುತ ಸಂಭವಿಸಿತ್ತು. ಈ ವೇಳೆ, ಹಲವರು ಗಾಯಗೊಂಡಿದ್ರೆ, ಒಬ್ಬರಿಗೆ ಗಂಭೀರ ಗಾಯಗಳಾಗಿದ್ವು. ಇದ್ರ ತನಿಖೆ ನಡೆಯುತ್ತಿರುವಾಗ್ಲೇ ರೈತರ ಸಿಟ್ಟು ಸ್ಫೋಟಗೊಂಡಿದೆ.

ಬಾಕ್ಸ್ ಸ್ಫೋಟ ಕೇಸನ್ನು ರೈತರ ಮೇಲೆ ಹಾಕಿದ್ರಾ? ಸ್ಫೋಟ ಸಂಭವಿಸಿ ಎರಡೂವರೆ ತಿಂಗಳು ಕಳೀತು. ಆದ್ರೆ, ತನಿಖಾ ತಂಡಗಳಿಗೆ ಇನ್ನೂ ಸುಳಿವೇ ಸಿಕ್ಕಿಲ್ಲ. ಇದ್ರ ಬೆನ್ನಲ್ಲೇ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಒಂದು ಹೇಳಿಕೆ ಕೊಟ್ಟಿದ್ದಾರೆ. ಅಮರಾವತಿ ಎಕ್ಸ್​ಪ್ರೆಸ್ ರೈಲಿನಲ್ಲಿ ಬಾಕ್ಸ್ ಇಟ್ಟಿದ್ದು ರೈತರು ಅಂತಾ ಹೇಳಿದ್ದು, ಅನ್ನದಾತರನ್ನು ರೊಚ್ಚಿಗೆಳುವಂತೆ ಮಾಡಿದೆ.

ಪ್ರಕರಣದ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ರೈಲ್ವೆ ಪೊಲೀಸರು ಹಾಗೂ ರಾಜ್ಯ ಪೊಲೀಸರು ವಿಫಲವಾಗಿದ್ದಾರೆ. ಈ ಮುಜುಗರದಿಂದ ಪಾರಾಗಲು ಸಚಿವರು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಸುಖಾ ಸುಮ್ಮನೇ ರೈತರ ಹೆಸರು ಎಳೆದುತಂದು ಅವಮಾನ ಮಾಡಿದ್ದು, ತಕ್ಷಣ ಅನ್ನದಾತರ ಕ್ಷಮೆ ಕೇಳುವಂತೆ ರೈತ ಮುಖಂಡರು ಆಗ್ರಹಿಸಿದ್ದಾರೆ.

ಒಟ್ನಲ್ಲಿ, ಬಾಕ್ಸ್ ಸ್ಫೋಟ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸದ ಸಚಿವ ಸುರೇಶ ಅಂಗಡಿ, ರೈತರ ಬಗ್ಗೆ ಹೇಳಿಕೆ ನೀಡಿ ಅವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಕ್ಷಮೆ ಕೇಳಬೇಕು ಅಂತಾ ಪಟ್ಟು ಹಿಡಿದಿದ್ದಾರೆ.

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?