AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಕಿಮ್ಸ್​ನಲ್ಲಿ ನಾಪತ್ತೆಯಾಗಿದ್ದ ಮಗು ಆಸ್ಪತ್ರೆ ಆವರಣದಲ್ಲಿ ಇಂದು ಧಿಡೀರ್ ಪ್ರತ್ಯಕ್ಷ

ಕುಂದಗೋಳದ ನೆಹರು ನಗರದ ನಿವಾಸಿ ಉಮ್ಮೇ ಜೈನಾಬ್, ಹುಸೇನ್ ಸಾಬ್ ಶೇಖ್ ಎಂಬ ದಂಪತಿಗೆ 40 ದಿನಗಳ ಹಿಂದೆ ಮಗು ಜನಿಸಿತ್ತು. ಉಮ್ಮೇ ಜೈನಾಬ್​ಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.

ಹುಬ್ಬಳ್ಳಿ ಕಿಮ್ಸ್​ನಲ್ಲಿ ನಾಪತ್ತೆಯಾಗಿದ್ದ ಮಗು ಆಸ್ಪತ್ರೆ ಆವರಣದಲ್ಲಿ ಇಂದು ಧಿಡೀರ್ ಪ್ರತ್ಯಕ್ಷ
ಕಾಣೆಯಾಗಿದ್ದ ಮಗು
TV9 Web
| Edited By: |

Updated on: Jun 14, 2022 | 12:02 PM

Share

ಹುಬ್ಬಳ್ಳಿ: ನಿನ್ನೆ (ಜೂನ್ 13) ನಾಪತ್ತೆಯಾಗಿದ್ದ 40 ದಿನದ ಮಗು ಇಂದು ಕಿಮ್ಸ್ ಆಸ್ಪತ್ರೆ (KIMS Hospital) ಆವರಣದಲ್ಲಿ ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನದ ಹೊತ್ತಿಗೆ ತಾಯಿ ಕೈಯಲ್ಲಿದ್ದ ಹಸುಗೂಸನ್ನು ಖದೀಮರು ಕಿತ್ತುಕೊಂಡು ಪರಾರಿಯಾಗಿದ್ದರು. ಮಗುವಿಗಾಗಿ ಪೊಲೀಸರು ಮೂರು ತಂಡ ರಚಿಸುವ ಮೂಲಕ ಬಲೆ ಬೀಸಿದ್ದರು. ಪೊಲೀಸರ ತನಿಖೆ ಚುರುಕುಗೊಂಡ ಹಿನ್ನೆಲೆ ಭಯಗೊಂಡ ಆರೋಪಿತರು ಮಗುವನ್ನು ತಂದು ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋಗಿದ್ದಾರೆ. ಮಗುವನ್ನು ಕದ್ದಿದವರು ಯಾರು? ಇಂದು ಆವರಣದಲ್ಲಿ ವಾಪಸ್ ತಂದು ಇಟ್ಟವರು ಯಾರು? ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಕುಂದಗೋಳದ ನೆಹರು ನಗರದ ನಿವಾಸಿ ಉಮ್ಮೇ ಜೈನಾಬ್, ಹುಸೇನ್ ಸಾಬ್ ಶೇಖ್ ಎಂಬ ದಂಪತಿಗೆ 40 ದಿನಗಳ ಹಿಂದೆ ಮಗು ಜನಿಸಿತ್ತು. ಉಮ್ಮೇ ಜೈನಾಬ್​ಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಖದೀಮರು ಮಗುವನ್ನು ಕದ್ದು ಪರಾರಿಯಾಗಿದ್ದರು. ಇನ್ನು ಕದ್ದ ಮಗು ಎಲ್ಲಿತ್ತು? ಎನ್ನುವುದು ಪೊಲೀಸರ ತನಿಖೆಯ ನಂತರವಷ್ಟೆ ತಿಳಿಯಬೇಕಿದೆ.

ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮಗುವನ್ನು ಇಟ್ಟು ಹೋಗಿರುವ ಸ್ಥಳಕ್ಕೂ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿದರು. ಪ್ರಕರಣ ಕುರಿತ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.

ಇದನ್ನೂ ಓದಿ
Image
Viral Video: ಅಶ್ಲೀಲವಾಗಿ ವರ್ತಿಸಿದ ಯುವಕರೊಂದಿಗೆ ಏಕಾಂಗಿಯಾಗಿ ಫೈಟ್ ಮಾಡಿದ ಯುವತಿ; ವಿಡಿಯೋ ವೈರಲ್
Image
ಪ್ರವಾದಿ ಮೊಹಮ್ಮದ್ ಕುರಿತು ವಾಟ್ಸ್ಯಾಪ್​ನಲ್ಲಿ ಅವಹೇಳನಕಾರಿ ಪೋಸ್ಟ್, ಬಸವಕಲ್ಯಾಣ ಪ್ರಕ್ಷುಬ್ದ
Image
ಪ್ರವಾದಿ ವಿರುದ್ಧ ಹೇಳಿಕೆ: ಉತ್ತರ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ 337 ಮಂದಿ ಬಂಧನ, 13 ಎಫ್​ಐಆರ್ ದಾಖಲು
Image
Employment: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 10 ಲಕ್ಷ ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ನಿರ್ಧಾರ

ಇದನ್ನೂ ಓದಿ: ಪ್ರವಾದಿ ಮೊಹಮ್ಮದ್ ಕುರಿತು ವಾಟ್ಸ್ಯಾಪ್​ನಲ್ಲಿ ಅವಹೇಳನಕಾರಿ ಪೋಸ್ಟ್, ಬಸವಕಲ್ಯಾಣ ಪ್ರಕ್ಷುಬ್ದ

ನಿನ್ನೆ ಘಟನೆ ಬಳಿಕ ಮಾತನಾಡಿದ ಕಿಮ್ಸ್ ಅಧೀಕ್ಷಕ ಅರುಣ್ ಕುಮಾರ್, ಮಗು ಕಳ್ಳತನವಾಗಿದ್ದು ವಾರ್ಡ್​ನಿಂದ ಅಲ್ಲ ಕಾರಿಡಾರ್​ನಿಂದ. ಮಧ್ಯಾಹ್ನ ಊಟದ ಸಮಯದಲ್ಲಿ ಘಟನೆ ನಡೆದಿದೆ. ಭದ್ರತೆ ಬಿಗಿಯಾಗಿದ್ದರು ಕಳ್ಳತನ ಹೇಗೆ ನಡೆಯಿತು ಎಂಬುದರ ಕುರಿತು ಸಂಶಯ ವ್ಯಕ್ತವಾಗಿದೆ. ನಾಲ್ಕು ದಿನದ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ವಾಂತಿ ಕಡಿಮೆಯಾದ ಹಿನ್ನೆಲೆ ಇಂದು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ