AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಲಗುಂದ ಕ್ಷೇತ್ರವನ್ನ ಸಿಎಂ ಸಿದ್ದರಾಮಯ್ಯಗೆ ದತ್ತು ನೀಡ್ತೇವೆ- ಶಾಸಕ ಕೋನರೆಡ್ಡಿ

ಧಾರವಾಡ ಜಿಲ್ಲೆಯ  ನವಲಗುಂದದ ಮಾಡಲ್ ಹೈಸ್ಕೂಲ್​ನಲ್ಲಿ ಆಯೋಜಿಸಿದ್ದ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ, ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ನವಲಗುಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಶಾಸಕ ಕೋನರೆಡ್ಡಿ(Konareddy) ಹೇಳಿದರು.

ನವಲಗುಂದ ಕ್ಷೇತ್ರವನ್ನ ಸಿಎಂ ಸಿದ್ದರಾಮಯ್ಯಗೆ ದತ್ತು ನೀಡ್ತೇವೆ- ಶಾಸಕ ಕೋನರೆಡ್ಡಿ
ಶಾಸಕ ಕೋನರೆಡ್ಡಿ
ಶಿವಕುಮಾರ್ ಪತ್ತಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 24, 2024 | 7:44 PM

Share

ಧಾರವಾಡ, ಫೆ.24: ಮಹದಾಯಿ ಯೋಜನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಬದ್ಧರಾಗಿದ್ದಾರೆ ಎಂದು ಶಾಸಕ ಕೋನರೆಡ್ಡಿ(Konareddy) ಹೇಳಿದರು. ಧಾರವಾಡ ಜಿಲ್ಲೆಯ  ನವಲಗುಂದದ ಮಾಡಲ್ ಹೈಸ್ಕೂಲ್​ನಲ್ಲಿ ಆಯೋಜಿಸಿದ್ದ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ, ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನವಲಗುಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ದತ್ತ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ನಿನ್ನೆ ಹುಷಾರ ಇರಲಿಲ್ಲ. ಆದರೂ ಬಡವರಿಗಾಗಿ ಅವರು ನವಲಗುಂದಕ್ಕೆ ಬಂದಿದ್ದಾರೆ. ಸುಮಾರು 200 ಕೋಟಿಗೂ ಅಧಿಕ ಕಾಮಗಾರಿಗೆ ಚಾಲನೆ ಕೊಡಲಿದ್ದಾರೆ ಎಂದರು. ಈಗಾಗಲೇ ಬೇಸಿಗೆ ಶುರುವಾಗಿದೆ, ನೀರಿನ ಕೊರತೆ ಇದ್ದು, ನಾವು ಗ್ಯಾರಂಟಿ ಯೋಜನೆ ಮೂಲಕ ಹಣ ಕೊಡುತ್ತಿದ್ದೇವೆ. ಆದರೆ, ಗ್ಯಾರಂಟಿಗಳನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾವು ಗ್ಯಾರಂಟಿ ಕೊಟ್ಟರೂ ಕೂಡ ಅಭಿವೃದ್ಧಿ ಮಾಡಿದ್ದೇವೆ.  ಇಡೀ ಕ್ಷೇತ್ರದಲ್ಲಿ ರಸ್ತೆ ಸುಧಾರಣೆ ಮಾಡಲು ಎರಡು ವರ್ಷ ಬೇಕು. ಅದನ್ನು ನಾವು ಅಭಿವೃದ್ಧಿ ಮಾಡ್ತೀವಿ ಎಂದಿದ್ದಾರೆ.

ಇದನ್ನೂ ಓದಿ:ಲೂಟಿ ಹೊಡೆದಿದ್ದಕ್ಕೇ ಅವರನ್ನು ಜನರು ತಿರಸ್ಕರಿಸಿದ್ದು: ಪ್ರಲ್ಹಾದ್​ ಜೋಶಿ ಹೇಳಿಕೆಗೆ ಸಿದ್ದರಾಮಯ್ಯ ಕೌಂಟರ್

ಮಹದಾಯಿ ಹೋರಾಟಗಾರರ ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಇನ್ನು ಸಿಎಂ ನವಲಗುಂದ ಪಟ್ಟಣದಲ್ಲಿ ಮಹದಾಯಿ ಹೋರಾಟಗಾರರ ಮನವಿ ಸ್ವೀಕಾರ ಮಾಡಿದರು. ಈ ವೇಳೆ ಹೋರಾಟಗಾರ ಸುಭಾಸಗೌಡ ಮಾತನಾಡಿ, ‘ಶಾಸಕ ಕೊನರಡ್ಡಿ ಹಾಗೂ ಕೇಂದ್ರ ಸಚಿವ ಜೋಶಿ ಮಹದಾಯಿ ಸಮಸ್ಯೆ ಇತ್ಯರ್ಥ ಮಾಡುವ ಮಾತನ್ನ‌ ಹೇಳಿದ್ದರು. ಆದರೆ, ಆಗಿಲ್ಲ. ನಾವು ಹೀಗೆಯೇ ಹೋರಾಟ‌ ಮಾಡುತ್ತಲೇ‌ ಇರಬೇಕಾ ಎಂದು ಸಿಎಂ ಬಳಿ ಹೇಳಿದರು. ಬಳಿಕ ಸಿದ್ದರಾಮಯ್ಯ,‘ಮಹದಾಯಿ ಇತ್ಯರ್ಥ ಮಾಡುವುದು ಕೇಂದ್ರದ ಕೈಯಲ್ಲಿ ಇದೆ. ನಾನು ನಿಮ್ಮ ಹೋರಾಟಕ್ಕೆ ಬೆಂಬಲ ನೀಡ್ತೆನೆ ಎಂದು ಹೇಳಿದರು.

ಸಾಂಕೇತಿಕವಾಗಿ 50 ನೂತನ ಬಸ್‌ಗಳಿಗೆ ಚಾಲನೆ ನೀಡಿದ ಸಿಎಂ

ನಂತರ ಸಾಂಕೇತಿಕವಾಗಿ ನೂತನ 50 ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳಿಗೆ ಚಾಲನೆ ನೀಡಿದರು. ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್, ಕೆ.ಜೆ.ಜಾರ್ಜ್, ಹೆಚ್​.ಕೆ.ಪಾಟೀಲ್, ಶಾಸಕ ಎನ್​.ಹೆಚ್​.ಕೋನರೆಡ್ಡಿ ಸೇರಿದಂತೆ ಅನೇಕ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ