AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಲಗುಂದ ಕ್ಷೇತ್ರವನ್ನ ಸಿಎಂ ಸಿದ್ದರಾಮಯ್ಯಗೆ ದತ್ತು ನೀಡ್ತೇವೆ- ಶಾಸಕ ಕೋನರೆಡ್ಡಿ

ಧಾರವಾಡ ಜಿಲ್ಲೆಯ  ನವಲಗುಂದದ ಮಾಡಲ್ ಹೈಸ್ಕೂಲ್​ನಲ್ಲಿ ಆಯೋಜಿಸಿದ್ದ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ, ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ನವಲಗುಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಶಾಸಕ ಕೋನರೆಡ್ಡಿ(Konareddy) ಹೇಳಿದರು.

ನವಲಗುಂದ ಕ್ಷೇತ್ರವನ್ನ ಸಿಎಂ ಸಿದ್ದರಾಮಯ್ಯಗೆ ದತ್ತು ನೀಡ್ತೇವೆ- ಶಾಸಕ ಕೋನರೆಡ್ಡಿ
ಶಾಸಕ ಕೋನರೆಡ್ಡಿ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 24, 2024 | 7:44 PM

Share

ಧಾರವಾಡ, ಫೆ.24: ಮಹದಾಯಿ ಯೋಜನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಬದ್ಧರಾಗಿದ್ದಾರೆ ಎಂದು ಶಾಸಕ ಕೋನರೆಡ್ಡಿ(Konareddy) ಹೇಳಿದರು. ಧಾರವಾಡ ಜಿಲ್ಲೆಯ  ನವಲಗುಂದದ ಮಾಡಲ್ ಹೈಸ್ಕೂಲ್​ನಲ್ಲಿ ಆಯೋಜಿಸಿದ್ದ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ, ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನವಲಗುಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ದತ್ತ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ನಿನ್ನೆ ಹುಷಾರ ಇರಲಿಲ್ಲ. ಆದರೂ ಬಡವರಿಗಾಗಿ ಅವರು ನವಲಗುಂದಕ್ಕೆ ಬಂದಿದ್ದಾರೆ. ಸುಮಾರು 200 ಕೋಟಿಗೂ ಅಧಿಕ ಕಾಮಗಾರಿಗೆ ಚಾಲನೆ ಕೊಡಲಿದ್ದಾರೆ ಎಂದರು. ಈಗಾಗಲೇ ಬೇಸಿಗೆ ಶುರುವಾಗಿದೆ, ನೀರಿನ ಕೊರತೆ ಇದ್ದು, ನಾವು ಗ್ಯಾರಂಟಿ ಯೋಜನೆ ಮೂಲಕ ಹಣ ಕೊಡುತ್ತಿದ್ದೇವೆ. ಆದರೆ, ಗ್ಯಾರಂಟಿಗಳನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾವು ಗ್ಯಾರಂಟಿ ಕೊಟ್ಟರೂ ಕೂಡ ಅಭಿವೃದ್ಧಿ ಮಾಡಿದ್ದೇವೆ.  ಇಡೀ ಕ್ಷೇತ್ರದಲ್ಲಿ ರಸ್ತೆ ಸುಧಾರಣೆ ಮಾಡಲು ಎರಡು ವರ್ಷ ಬೇಕು. ಅದನ್ನು ನಾವು ಅಭಿವೃದ್ಧಿ ಮಾಡ್ತೀವಿ ಎಂದಿದ್ದಾರೆ.

ಇದನ್ನೂ ಓದಿ:ಲೂಟಿ ಹೊಡೆದಿದ್ದಕ್ಕೇ ಅವರನ್ನು ಜನರು ತಿರಸ್ಕರಿಸಿದ್ದು: ಪ್ರಲ್ಹಾದ್​ ಜೋಶಿ ಹೇಳಿಕೆಗೆ ಸಿದ್ದರಾಮಯ್ಯ ಕೌಂಟರ್

ಮಹದಾಯಿ ಹೋರಾಟಗಾರರ ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಇನ್ನು ಸಿಎಂ ನವಲಗುಂದ ಪಟ್ಟಣದಲ್ಲಿ ಮಹದಾಯಿ ಹೋರಾಟಗಾರರ ಮನವಿ ಸ್ವೀಕಾರ ಮಾಡಿದರು. ಈ ವೇಳೆ ಹೋರಾಟಗಾರ ಸುಭಾಸಗೌಡ ಮಾತನಾಡಿ, ‘ಶಾಸಕ ಕೊನರಡ್ಡಿ ಹಾಗೂ ಕೇಂದ್ರ ಸಚಿವ ಜೋಶಿ ಮಹದಾಯಿ ಸಮಸ್ಯೆ ಇತ್ಯರ್ಥ ಮಾಡುವ ಮಾತನ್ನ‌ ಹೇಳಿದ್ದರು. ಆದರೆ, ಆಗಿಲ್ಲ. ನಾವು ಹೀಗೆಯೇ ಹೋರಾಟ‌ ಮಾಡುತ್ತಲೇ‌ ಇರಬೇಕಾ ಎಂದು ಸಿಎಂ ಬಳಿ ಹೇಳಿದರು. ಬಳಿಕ ಸಿದ್ದರಾಮಯ್ಯ,‘ಮಹದಾಯಿ ಇತ್ಯರ್ಥ ಮಾಡುವುದು ಕೇಂದ್ರದ ಕೈಯಲ್ಲಿ ಇದೆ. ನಾನು ನಿಮ್ಮ ಹೋರಾಟಕ್ಕೆ ಬೆಂಬಲ ನೀಡ್ತೆನೆ ಎಂದು ಹೇಳಿದರು.

ಸಾಂಕೇತಿಕವಾಗಿ 50 ನೂತನ ಬಸ್‌ಗಳಿಗೆ ಚಾಲನೆ ನೀಡಿದ ಸಿಎಂ

ನಂತರ ಸಾಂಕೇತಿಕವಾಗಿ ನೂತನ 50 ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳಿಗೆ ಚಾಲನೆ ನೀಡಿದರು. ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್, ಕೆ.ಜೆ.ಜಾರ್ಜ್, ಹೆಚ್​.ಕೆ.ಪಾಟೀಲ್, ಶಾಸಕ ಎನ್​.ಹೆಚ್​.ಕೋನರೆಡ್ಡಿ ಸೇರಿದಂತೆ ಅನೇಕ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?