AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿಯ ಮೈದುನನಿಂದ ಗ್ರಾಮ ಪಂಚಾಯತಿ ಸದಸ್ಯನಿಗೆ ಧಮ್ಕಿ; ಆಡಿಯೋ ವೈರಲ್‌

ಗ್ರಾಮ ಪಂಚಾಯತಿ ಸದಸ್ಯ ರವಿ ಕುಂಬಾರ ಎಂಬುವವರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿರುವ  ಷಣ್ಮುಖ ಶಿವಳ್ಳಿ, ಅಧಿಕಾರದ ದರ್ಪ ತೋರಿಸಿದ್ದಾರೆ. ಶಾಸಕಿಯ ಮೈದುನ ಎಂದಾಕ್ಷಣ ಷಣ್ಮುಖ ಶಿವಳ್ಳಿ ಹೀಗೆ ವರ್ತನೆ ಮಾಡುವುದು ಎಷ್ಟು ಸರಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕಿಯ ಮೈದುನನಿಂದ ಗ್ರಾಮ ಪಂಚಾಯತಿ ಸದಸ್ಯನಿಗೆ ಧಮ್ಕಿ; ಆಡಿಯೋ ವೈರಲ್‌
ಷಣ್ಮಖ ಶಿವಳ್ಳಿ
TV9 Web
| Updated By: preethi shettigar|

Updated on:Jan 01, 2022 | 1:06 PM

Share

ಧಾರವಾಡ: ಶಾಸಕಿಯ ಮೈದುನ ಗ್ರಾಮ ಪಂಚಾಯತಿಯ (gram panchayat) ಸದಸ್ಯನಿಗೆ ಧಮ್ಕಿ ಹಾಕಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿಯವರ ಮೈದುನ ಷಣ್ಮುಖ ಶಿವಳ್ಳಿ ಯರಗುಪ್ಪಿ ಗ್ರಾಮ ಪಂಚಾಯತಿ ಸದಸ್ಯನಿಗೆ ಧಮ್ಕಿ ಹಾಕಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯತಿ ಅಧ್ಯಕ್ಷ ಷಣ್ಮುಖ ಶಿವಳ್ಳಿ ಏಕ ಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸದ್ಯ ಗ್ರಾಮ ಪಂಚಾಯತಿ ಸದಸ್ಯರೋರ್ವರಿಗೆ ಮನಬಂದಂತೆ ಮಾತನಾಡಿರುವ ಆಡಿಯೋ ವೈರಲ್‌ (Audio Viral) ಆಗಿದೆ.

ಗ್ರಾಮ ಪಂಚಾಯತಿ ಸದಸ್ಯ ರವಿ ಕುಂಬಾರ ಎಂಬುವವರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿರುವ  ಷಣ್ಮುಖ ಶಿವಳ್ಳಿ, ಪಂಚಾಯತಿಗೆ ಕೊಡುತ್ತೇವೆ ಎಂದು ಹೇಳುವ ಮೂಲಕ ಅಧಿಕಾರದ ದರ್ಪ ತೋರಿಸಿದ್ದಾರೆ. ಶಾಸಕಿಯ ಮೈದುನ ಎಂದಾಕ್ಷಣ ಷಣ್ಮುಖ ಶಿವಳ್ಳಿ ಹೀಗೆ ವರ್ತನೆ ಮಾಡುವುದು ಎಷ್ಟು ಸರಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ: ಪೊಲೀಸ್ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳು ಅರೆಸ್ಟ್ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಈ ಬಾರಿ ನ್ಯೂ ಇಯರ್ ಪಾರ್ಟಿಗೆ ನಿರ್ಬಂಧ ಹೇರಿದೆ. ಕೊರೊನಾ ವಿರುದ್ಧ ಹೋರಾಡಲು ಈ ನಿರ್ಬಂಧ ಅನಿವಾರ್ಯ. ಹೀಗಿದ್ದೂ ಕೆಲವರು ಮಾತ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ರೆಸಾರ್ಟ್​ನಲ್ಲಿ ಮಸ್ತ್ ಪಾರ್ಟಿ ಮಾಡಿದ್ದಾರೆ. ಅಲ್ಲದೇ ಪಾರ್ಟಿ ಬಗ್ಗೆ ಪ್ರಶ್ನಿಸಿದ ಪೊಲೀಸ್ ಇನ್ಸ್​ಪೆಕ್ಟರ್​ ಮೇಲೆಯೇ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿಯ ರೆಸಾರ್ಟ್​ನಲ್ಲಿ ನಡೆದಿದೆ.

ವೈಟ್ ನಿರ್ವಾಣ ಜಡೇ ರೆಸಾರ್ಟ್ ಮಾಲೀಕ ಮತ್ತು ಸಹಚರರು ಚಿಕ್ಕಬಳ್ಳಾಪುರ ಇನ್ಸ್​ಪೆಕ್ಟರ್​ ಪ್ರಶಾಂತ್ ಎಂಬುವವರನ್ನ ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅಗಲಗುರ್ಕಿ ಬಳಿಯ ರೆಸಾರ್ಟ್​ನಲ್ಲಿ ರಾಜಾರೋಷವಾಗಿ ಡಿಜೆ ಹಾಕಿಕೊಂಡು ಪಾರ್ಟಿ ಮಾಡಿದ್ದಾರೆ. ಜೊತೆಗೆ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು

ಸರ್ಕಾರದ ಆದೇಶ ಉಲ್ಲಂಘಿಸಿ ಚಿಕ್ಕಾಬಳ್ಳಾಪುರ ರೆಸಾರ್ಟ್​ಲ್​ನಲ್ಲಿ ಮಸ್ತ್ ಪಾರ್ಟಿ; ಪೊಲೀಸ್ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳು ಅರೆಸ್ಟ್

Published On - 1:02 pm, Sat, 1 January 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!