AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕೋಟಿಗೂ ಅಧಿಕ ಹಣ ಕಳ್ಳತನ

ವಿಜಯದಶಮಿ ಇರುವ ಹಿನ್ನಲೆ ಬ್ಯಾಂಕ್ ರಜೆ ಇದ್ದು, ಇದನ್ನೇ ಅವಕಾಶ ಮಾಡಿಕೊಂಡಿರುವ ಖದೀಮರು, ಕಚೇರಿ ಶೌಚಾಲಯದ ಕಿಟಕಿ ಒಡೆದು, ಲಾಕರ್‌ನಲ್ಲಿಟ್ಟಿದ್ದ ಬರೊಬ್ಬರಿ 1.24 ಕೋಟಿ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕೋಟಿಗೂ ಅಧಿಕ ಹಣ ಕಳ್ಳತನ
ಧಾರವಾಡದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 24, 2023 | 3:22 PM

Share

ಧಾರವಾಡ, ಅ.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ(Dharmasthala Village Development Office) ಲಾಕರ್​ನಲ್ಲಿದ್ದ ಹಣ ಕಳ್ಳತನವಾದ ಘಟನೆ ಹುಬ್ಬಳ್ಳಿ ಮತ್ತು ಧಾರವಾಡ ನಡುವೆ ಇರುವ ರಾಯಾಪುರ‌ ಬಡಾವಣೆ ಕಚೇರಿಯಲ್ಲಿ ನಡೆದಿದೆ. ಈಗಾಗಲೇ ವಿಜಯದಶಮಿ ಇರುವ ಹಿನ್ನಲೆ ಬ್ಯಾಂಕ್ ರಜೆ ಇದ್ದು, ಇದನ್ನೇ ಅವಕಾಶ ಮಾಡಿಕೊಂಡಿರುವ ಖದೀಮರು, ಕಚೇರಿ ಶೌಚಾಲಯದ ಕಿಟಕಿ ಒಡೆದು, ಲಾಕರ್‌ನಲ್ಲಿಟ್ಟಿದ್ದ ಬರೊಬ್ಬರಿ 1.24 ಕೋಟಿ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧಾರವಾಡ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶೋಕಿಗಾಗಿ ಲಾರಿಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ; ಖದೀಮರ ಬಂಧನ

ಬೆಂಗಳೂರು ಗ್ರಾಮಾಂತರ: ಅವರೆಲ್ಲಾ ಒಂದೇ ಊರಿನ ಯುವಕರು, ಊರಿನಲ್ಲಿ ಶೋಕಿ‌ ಮಾಡುವ ಸಲುವಾಗಿ ಅಡ್ಡದಾರಿ ಹಿಡಿದುಇದೀಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಹೌದು, ನೆಲಮಂಗಲದ ಚಿಕ್ಕಮಾರನಹಳ್ಳಿ ನಿವಾಸಿಗಳಾದ ಮಧುಸೂದನ್, ಕಾರ್ತಿಕ್, ಅಪ್ಪು, ವೇಣುಗೋಪಾಲ ಹಾಗೂ ತಿಮ್ಮರಾಜು ಲಾರಿಗಳನ್ನೇ ಟಾರ್ಗೆಟ್​ ಮಾಡಿ ಟೈಯರ್, ಮೊಬೈಲ್ ಸೇರಿ ಹಣವನ್ನು ಎಗರಿಸುತ್ತಿದ್ದರು.

ಇದನ್ನೂ ಓದಿ:ಕಳ್ಳರ ಜತೆ ಸೇರಿ ಕಳ್ಳತನ ಮಾಡುವ ಪೊಲೀಸಪ್ಪ, ಕಾನ್ಸ್​ಟೇಬಲ್ ಯಲ್ಲಪ್ಪ ಸಿಕ್ಕಿಬಿದ್ದನಪ್ಪ

ಒಂದು ಸುಳಿವಿನಿಂದ ಸಿಕ್ಕಿಬಿದ್ದ ಖದೀಮರು

ಕಳ್ಳತನವನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದ ಯುವಕರು, ಲಾರಿ ಚಾಲಕ ಮೋಹನ್ ಎಂಬಾತನನ್ನು ಅಡ್ಡಗಟ್ಟಿದ್ದರು. ಈ ವೇಳೆ ಆರೋಪಿ ಕಾರ್ತೀಕ್ ತನ್ನ ತಂದೆಯ ನಂಬರ್ ನೀಡಿ 10 ಸಾವಿರ ರೂಪಾಯಿಯನ್ನು ಫೋನ್ ಪೇ ಮಾಡಿಸಿಕೊಂಡಿದ್ದ. ಇದೇ ಸುಳಿವು ಪೊಲೀಸರಿಗೆ ಮಹತ್ವದ್ದಾಗಿತ್ತು. ಇದರಿಂದಲೇ ನೆಲಮಂಗಲ ಗ್ರಾಮಾಂತರ ಪೊಲೀಸರ ಕೈಗೆ ಐದು ಜನರು ಸಿಕ್ಕಿ ಹಾಕಿಕೊಂಡಿದ್ದಾರೆ. ಸದ್ಯ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ, ಏಳು ಲಕ್ಷ ಮೌಲ್ಯದ 20 ಟೈರ್, 4 ಮೊಬೈಲ್, ಚಾಕು, ಕೃತ್ಯಕ್ಕೆ ಬಳಸಿದ ಟೆಂಪೋ, ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್