AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕೋಟಿಗೂ ಅಧಿಕ ಹಣ ಕಳ್ಳತನ

ವಿಜಯದಶಮಿ ಇರುವ ಹಿನ್ನಲೆ ಬ್ಯಾಂಕ್ ರಜೆ ಇದ್ದು, ಇದನ್ನೇ ಅವಕಾಶ ಮಾಡಿಕೊಂಡಿರುವ ಖದೀಮರು, ಕಚೇರಿ ಶೌಚಾಲಯದ ಕಿಟಕಿ ಒಡೆದು, ಲಾಕರ್‌ನಲ್ಲಿಟ್ಟಿದ್ದ ಬರೊಬ್ಬರಿ 1.24 ಕೋಟಿ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕೋಟಿಗೂ ಅಧಿಕ ಹಣ ಕಳ್ಳತನ
ಧಾರವಾಡದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 24, 2023 | 3:22 PM

Share

ಧಾರವಾಡ, ಅ.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ(Dharmasthala Village Development Office) ಲಾಕರ್​ನಲ್ಲಿದ್ದ ಹಣ ಕಳ್ಳತನವಾದ ಘಟನೆ ಹುಬ್ಬಳ್ಳಿ ಮತ್ತು ಧಾರವಾಡ ನಡುವೆ ಇರುವ ರಾಯಾಪುರ‌ ಬಡಾವಣೆ ಕಚೇರಿಯಲ್ಲಿ ನಡೆದಿದೆ. ಈಗಾಗಲೇ ವಿಜಯದಶಮಿ ಇರುವ ಹಿನ್ನಲೆ ಬ್ಯಾಂಕ್ ರಜೆ ಇದ್ದು, ಇದನ್ನೇ ಅವಕಾಶ ಮಾಡಿಕೊಂಡಿರುವ ಖದೀಮರು, ಕಚೇರಿ ಶೌಚಾಲಯದ ಕಿಟಕಿ ಒಡೆದು, ಲಾಕರ್‌ನಲ್ಲಿಟ್ಟಿದ್ದ ಬರೊಬ್ಬರಿ 1.24 ಕೋಟಿ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧಾರವಾಡ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶೋಕಿಗಾಗಿ ಲಾರಿಗಳನ್ನೇ ಟಾರ್ಗೆಟ್​ ಮಾಡಿ ಕಳ್ಳತನ; ಖದೀಮರ ಬಂಧನ

ಬೆಂಗಳೂರು ಗ್ರಾಮಾಂತರ: ಅವರೆಲ್ಲಾ ಒಂದೇ ಊರಿನ ಯುವಕರು, ಊರಿನಲ್ಲಿ ಶೋಕಿ‌ ಮಾಡುವ ಸಲುವಾಗಿ ಅಡ್ಡದಾರಿ ಹಿಡಿದುಇದೀಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಹೌದು, ನೆಲಮಂಗಲದ ಚಿಕ್ಕಮಾರನಹಳ್ಳಿ ನಿವಾಸಿಗಳಾದ ಮಧುಸೂದನ್, ಕಾರ್ತಿಕ್, ಅಪ್ಪು, ವೇಣುಗೋಪಾಲ ಹಾಗೂ ತಿಮ್ಮರಾಜು ಲಾರಿಗಳನ್ನೇ ಟಾರ್ಗೆಟ್​ ಮಾಡಿ ಟೈಯರ್, ಮೊಬೈಲ್ ಸೇರಿ ಹಣವನ್ನು ಎಗರಿಸುತ್ತಿದ್ದರು.

ಇದನ್ನೂ ಓದಿ:ಕಳ್ಳರ ಜತೆ ಸೇರಿ ಕಳ್ಳತನ ಮಾಡುವ ಪೊಲೀಸಪ್ಪ, ಕಾನ್ಸ್​ಟೇಬಲ್ ಯಲ್ಲಪ್ಪ ಸಿಕ್ಕಿಬಿದ್ದನಪ್ಪ

ಒಂದು ಸುಳಿವಿನಿಂದ ಸಿಕ್ಕಿಬಿದ್ದ ಖದೀಮರು

ಕಳ್ಳತನವನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದ ಯುವಕರು, ಲಾರಿ ಚಾಲಕ ಮೋಹನ್ ಎಂಬಾತನನ್ನು ಅಡ್ಡಗಟ್ಟಿದ್ದರು. ಈ ವೇಳೆ ಆರೋಪಿ ಕಾರ್ತೀಕ್ ತನ್ನ ತಂದೆಯ ನಂಬರ್ ನೀಡಿ 10 ಸಾವಿರ ರೂಪಾಯಿಯನ್ನು ಫೋನ್ ಪೇ ಮಾಡಿಸಿಕೊಂಡಿದ್ದ. ಇದೇ ಸುಳಿವು ಪೊಲೀಸರಿಗೆ ಮಹತ್ವದ್ದಾಗಿತ್ತು. ಇದರಿಂದಲೇ ನೆಲಮಂಗಲ ಗ್ರಾಮಾಂತರ ಪೊಲೀಸರ ಕೈಗೆ ಐದು ಜನರು ಸಿಕ್ಕಿ ಹಾಕಿಕೊಂಡಿದ್ದಾರೆ. ಸದ್ಯ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ, ಏಳು ಲಕ್ಷ ಮೌಲ್ಯದ 20 ಟೈರ್, 4 ಮೊಬೈಲ್, ಚಾಕು, ಕೃತ್ಯಕ್ಕೆ ಬಳಸಿದ ಟೆಂಪೋ, ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ