AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಜಾತಿ ಯುವತಿ ಜೊತೆ ಮಗ ಮದುವೆ ಆಗಿದ್ದಕ್ಕೆ ತಾಯಿಗೆ ಶಿಕ್ಷೆ?: ಪೊಲೀಸರ ಮೇಲೆಯೇ ಆರೋಪ

ಮಗ ಅನ್ಯಜಾತಿಯ ಯುವತಿಯೊಂದಿಗೆ ಮದುವೆಯಾದ ಕಾರಣಕ್ಕೆ ಆತನ ತಾಯಿಗೆ ಪೊಲೀಸರು ಹಲ್ಲೆ ಮಾಡಿದ್ದಾರೆಂಬ ಗಂಭೀರ ಆರೋಪ ಹುಬ್ಬಳ್ಳಿಯಲ್ಲಿ ಕೇಳಿಬಂದಿದೆ. ಮಗನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಕ್ಕೆ ಮಹಿಳೆಯ ಮೇಲೆ ಪೊಲೀಸರು ಬೆಲ್ಟ್‌ನಿಂದ ಥಳಿಸಿದ್ದಾರೆ. ವಿಚಾರಣೆ ನೆಪದಲ್ಲಿ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಧಾರವಾಡ ಎಸ್​​ಪಿ ತಿಳಿಸಿದ್ದಾರೆ.

ಅನ್ಯಜಾತಿ ಯುವತಿ ಜೊತೆ ಮಗ  ಮದುವೆ ಆಗಿದ್ದಕ್ಕೆ ತಾಯಿಗೆ ಶಿಕ್ಷೆ?: ಪೊಲೀಸರ ಮೇಲೆಯೇ ಆರೋಪ
ಹಲ್ಲೆ ಆರೋಪ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 15, 2025 | 1:51 PM

Share

ಹುಬ್ಬಳ್ಳಿ, ಡಿಸೆಂಬರ್​​ 15: ಮನೆ ಮಗ ಅಥವಾ ಮಗಳು ಇನ್ಯಾವುದೋ ಜಾತಿಯವರನ್ನ ಮದುವೆ ಆದ ಕಾರಣಕ್ಕೆ ಅವರನ್ನೇ ಕೊಂದ, ಮನೆಯಿಂದ ಹೊರ ಹಾಕಿದ ಅದೆಷ್ಟೋ ಪ್ರಕರಣಗಳ ಬಗ್ಗೆ ನಾವು ಕೇಳಿದ್ದೇವೆ. ಆದ್ರೆ ಹುಬ್ಬಳ್ಳಿಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಮಗ ಅನ್ಯ ಜಾತಿಯ ಯುವತಿ ಜೊತೆ ಓಡಿ ಹೋಗಿ ಮದುವೆ ಆಗಿದ್ದಕ್ಕೆ ಆತನ ತಾಯಿ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮುಳ್ಳಳಿ ಗ್ರಾಮದ ಯುವಕ ದೇವರಾಜ್ ಎದುರು ಮನೆ ಯುವತಿ ಜೊತೆ ಓಡಿಹೋಗಿ ಮದುವೆ ಆಗಿದ್ದಾನೆ. ತಿಂಗಳ ಹಿಂದೆ ಇವರಿಬ್ಬರ ಅಂತರ್​​ಜಾತಿ ವಿವಾಹ ನಡೆದಿತ್ತು. ಮದುವೆಗೆ ಒಪ್ಪಿಗೆ ಇಲ್ಲದ ಕಾರಣ ಯುವತಿ ಪೋಷಕರು ಈ ಬಗ್ಗೆ ಕುಂದಗೋಳ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆ ದೇವರಾಜ್​​ ತಾಯಿ ಲಕ್ಷ್ಮವ್ವ ಬೆಂತೋಳಿ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ನಿನ್ನ ಮಗ ಎಲ್ಲಿದ್ದಾನೆಂದು ಈ ವೇಳೆ ಪೊಲೀಸರು ಪ್ರಶ್ನಿಸಿದ್ದು, ಆ ಬಗ್ಗೆ ತನೆಗೆ ಮಾಹಿತಿ ಇಲ್ಲ ಎಂದು ಲಕ್ಷ್ಮವ್ವ ಹೇಳಿದ ಹಿನ್ನೆಲೆ ಥಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್​​ಕೊಟ್ಟ ಯುವತಿ; ಫುಲ್​​ ಹೈಡ್ರಾಮಾ

ಬೆಲ್ಟ್​​ನಿಂದ ಲಕ್ಷ್ಮವ್ವ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಲಾಗಿದೆ. ಮಹಿಳಾ ಪೊಲೀಸರ ಜೊತೆ ಪುರುಷ ಸಿಬ್ಬಂದಿಯೂ ಹಲ್ಲೆ ನಡೆಸಿದ್ದಾರೆ. ಮಗ ದೇವರಾಜ್​​ ಎಲ್ಲಿದ್ದಾನೆಂದು ಗೊತ್ತಿಲ್ಲ ಎಂದರೂ ಬೆಂಬಿಡದೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರ ಹಲ್ಲೆಯಿಂದ ಹಲ್ಲೆಗೊಳಗಾದ ಲಕ್ಷ್ಮವ್ವ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥಗೊಂಡಿರುವ ಅವರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಪೊಲೀಸ್​​ ವರಿಷ್ಠಾಧಿಕಾರಿ ಗುಂಜನ್​​ ಆರ್ಯ, ಪೊಲೀಸರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದ ಹಿನ್ನೆಲೆ ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:50 pm, Mon, 15 December 25

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ