AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿ 3 ದಿನಗಳ ಬಳಿಕ ಕೆರೆಯಲ್ಲಿ ತೇಲಾಡಿದ ತಾಯಿ, ಮಗಳ ಮೃತದೇಹಗಳು, ಆತ್ಮಹತ್ಯೆಯೋ, ಕೊಲೆಯೋ?

ಕಳೆದ ಮೂರು ದಿನಗಳಿಂದ ಮನೆಬಿಟ್ಟು ಹೋಗಿದ್ದ ತಾಯಿ ಮಗಳ ಶವ ಕೆರೆಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ, ಕೊಲೆಯೋ? ಎನ್ನುವ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಕಾಣೆಯಾಗಿ 3 ದಿನಗಳ ಬಳಿಕ ಕೆರೆಯಲ್ಲಿ ತೇಲಾಡಿದ ತಾಯಿ, ಮಗಳ ಮೃತದೇಹಗಳು, ಆತ್ಮಹತ್ಯೆಯೋ, ಕೊಲೆಯೋ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 06, 2023 | 8:11 PM

ಧಾರವಾಡ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ, ಮಗಳ ಶವ ಕೆರೆಯಲ್ಲಿ ಪತ್ತೆಯಾಗಿವೆ. ತಾಯಿ ಮಕ್ತುಂಬಿ ಹಾಗೂ ಮಗಳು ಸೈನಾಜ್ ಮೃತದೇಹಗಳು ಇಂದು (ಜನವರಿ 06) ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಕೆರೆಯಲ್ಲಿ ಪತ್ತೆಯಾಗಿವೆ. ಆದ್ರೆ, ಅನುಮಾನಸ್ಪದವಾಗಿ ತಾಯಿ-ಮಗಳ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಯಶವಂತಪುರ: ಡ್ರಮ್​ನಲ್ಲಿ ಅಪರಿಚಿತ ಮಹಿಳೆ ಶವಪತ್ತೆ

ಮಕ್ತುಂಬಿ ಹಾಗೂ ಮಗಳು ಸೈನಾಜ್ ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರು. ಕುಟುಂಬದವರು ಹುಡುಕಾಟ ನಡೆಸಿದ್ದರು. ಅಲ್ಲದೇ ಮೃತ ಮಹಿಳೆಯ(ಮಕ್ತುಂಬಿ) ಗಂಡ ಮಾಬುಸಾಬ್, ಹೆಂಡತಿ ಹಾಗೂ ಮಗಳು ಕಾಣೆಯಾಗಿರುವುದರ ಬಗ್ಗೆ ಸಂಬಂಧಿಕರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದ. ಆದ್ರೆ, ಮೂರು ದಿನದ ಬಳಿಕ ತಾಯಿ ಮಗಲ ಶವ ಬ್ಯಾಹಟ್ಟಿ ಕೆರೆಯಲ್ಲಿ ಪತ್ತೆಯಾಗಿದ್ದು, ಇದನ್ನು ನೋಡಿ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ನೀರಿನಿಂದ ಹೊರ ತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಇದು ಆತ್ಮಹತ್ಯೆಯೋ? ಕೊಲೆಯೋ? ಎನ್ನುವುದು ವರದಿ ಬಂದ ಬಳಿಕ ತಿಳಿಯಲಿದೆ.

ಇದನ್ನೂ ಓದಿ: ಪೋಷಕರು ಬುದ್ದಿವಾದ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡ 9ನೇ ಕ್ಲಾಸ್ ವಿದ್ಯಾರ್ಥಿ

ಮದುವೆಯಾದ ದಿನದಿಂದ ಗಂಡ ಹೆಂಡತಿ ಚೆನ್ನಾಗಿದ್ದಿಲ್ಲ. ಗಂಡ ಮಾಬುಸಾಬ್ ಹೆಂಡತಿ‌‌ ಮಕ್ಕಳ‌ ಮೇಲೆ ಅನುಮಾನ ಪಡುತ್ತಿದ್ದಾನಂತೆ. ಹೀಗಾಗಿ ಗಂಡಶ್ರ(ಮಾಬುಸಾಬ್) ಕೊಲೆ ಮಾಡಿ ಕೆರೆಗೆ ಹಾಕಿದ್ದಾನೆ ಎಂದು ಮೃತ ಮಕ್ತುಂಬಿ ಸಂಬಂಧಿಕರು ಆರೋಪಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:10 pm, Fri, 6 January 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ