AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನ ಗ್ಯಾರಂಟಿ, ಬಿಜೆಪಿಗೆ ದೊಡ್ಡ ಪೆಟ್ಟು: ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ

ಯಡಿಯೂರಪ್ಪ ಸಮರ್ಥ ಆಡಳಿತಗಾರ. ಇನ್ನೊಬ್ಬರ ಮನಸ್ಸು ನೋಯಿಸದ ವ್ಯಕ್ತಿ. ಅಂಥವರನ್ನು ಅವಧಿಗೆ ಮುನ್ನ ಬದಲಾಯಿಸುವುದು ಒಳ್ಳೆಯ ಸುದ್ದಿ ಅಲ್ಲ. ಕೇಂದ್ರದವರು ಯಾರೂ ಬಾಯಿ ಬಿಟ್ಟು ಬದಲಿಸುವ ವಿಚಾರ ಹೇಳಿಲ್ಲ.

ಯಡಿಯೂರಪ್ಪ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನ ಗ್ಯಾರಂಟಿ, ಬಿಜೆಪಿಗೆ ದೊಡ್ಡ ಪೆಟ್ಟು: ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ
ಮುರುಘಾ ಮಠದ ಸ್ವಾಮೀಜಿ
TV9 Web
| Edited By: |

Updated on:Jul 21, 2021 | 1:09 PM

Share

ಧಾರವಾಡ: ರಾಜ್ಯಕ್ಕೆ ಯಡಿಯೂರಪ್ಪನಂತಹ ಮುಖ್ಯಮಂತ್ರಿ ಸಿಗುವುದು ಕಷ್ಟ. ಬಿಎಸ್​ವೈ ಉಳಿಸಿಕೊಳ್ಳಲು ಪ್ರಯತ್ನ ಮಾಡಲೇಬೇಕು. ಯಡಿಯೂರಪ್ಪರನ್ನ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನವಾಗುತ್ತದೆ. ಯಾವುದೇ ಪಕ್ಷದ ಸರ್ಕಾರ ಬಂದರೂ ಸರ್ಕಾರ ಪತನವಾಗುತ್ತದೆ. ಸಿಎಂ ಬದಲಿಸಿದರೆ ಬಿಜೆಪಿಗೆ ದೊಡ್ಡ ಪೆಟ್ಟು ಬೀಳುತ್ತದೆ. ಕರ್ನಾಟಕದಲ್ಲಿ ಬಿಜೆಪಿಗೆ ಯಡಿಯೂರಪ್ಪ ಅಡಿಪಾಯವಿದ್ದಂತೆ. ಇಂಥವರನ್ನು ಅವಧಿಗೆ ಮುನ್ನ ಬದಲಿಸುವುದು ಸರಿಯಲ್ಲ ಅಂತ ಧಾರವಾಡದ ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ಸಮರ್ಥ ಆಡಳಿತಗಾರ. ಇನ್ನೊಬ್ಬರ ಮನಸ್ಸು ನೋಯಿಸದ ವ್ಯಕ್ತಿ. ಅಂಥವರನ್ನು ಅವಧಿಗೆ ಮುನ್ನ ಬದಲಾಯಿಸುವುದು ಒಳ್ಳೆಯ ಸುದ್ದಿ ಅಲ್ಲ. ಕೇಂದ್ರದವರು ಯಾರೂ ಬಾಯಿ ಬಿಟ್ಟು ಬದಲಿಸುವ ವಿಚಾರ ಹೇಳಿಲ್ಲ. ಇದೊಂದು ಗಾಳಿ ಸುದ್ದಿ ಅಷ್ಟೇ. ಈ ಸುದ್ದಿ ತಿಳಿದು ಬದಲಾವಣೆ ಮಾಡಿದರೆ ಬಿಜೆಪಿ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಹಾಗಾಗಿ ಆ ಹುಚ್ಚಿಗೆ ಹೋಗಬಾರದು ಅಂತ ಸ್ವಾಮೀಜಿ ಹೇಳಿದರು.

ಲಿಂಗಾಯತರು ಬೆಳೆಯುವುದು ಕೆಲವರಿಗೆ ಅಸಮಾಧಾನ ಇದೆ. ಲಿಂಗಾಯತರು ಶಾಸಕರು ಮುಂದುವರಿಯಬಾರದು ಅಂತ ಕೆಲವರಿಗೆ ಇದೆ. ಲಿಂಗಾಯತರು ಸಿಎಂ ಆಗಬಾರದೆಂಬ ಅಸಮಾಧಾನವೂ ಕೆಲವರಿಗೆ ಇದೆ. ಇದಕ್ಕಾಗಿಯೇ ಒಳಗೊಳಗೆ ಅಸಮಾಧಾನದ ಹೊಗೆ ಇದೆ. ಇದಕ್ಕೆ ಕೆಲವರು ಕಿಡಿ ಹಾಕುತ್ತಿದ್ದಾರೆ. ಕೇಂದ್ರದವರು ಅದನ್ನು ಲೆಕ್ಕಿಸಬಾರದು. ವಿರೇಂದ್ರ ಪಾಟೀಲರಿಗೆ ಆದಂತೆ ಬಿಎಸ್​ವೈಗೆ ಆಗಬಾರದು ಎಂದು ಸ್ವಾಮೀಜಿ ತಿಳಿಸಿದರು.

ಪ್ರಾಣಕ್ಕೆ ಪ್ರಾಣ ಕೊಟ್ಟು ಬಿಜೆಪಿ ಬೆಳೆಸಿದವರು. ಅವರಿಂದಲೇ ದಕ್ಷಿಣ ಭಾರತದಲ್ಲಿ ಬಿಜೆಪಿ ಇದೆ. ಹೀಗಾಗಿ ಅವರನ್ನು ಬದಲಿಸುವುದಿಲ್ಲ. ಈ ಬೆಳವಣಿಗೆಗಳ ಬಗ್ಗೆ ಬಿಎಸ್​ವೈ ನೋವು ಮಾಡಿಕೊಂಡಿದ್ದಾರೆ. ಇಷ್ಟೇಲ್ಲ ಮಾಡಿ ಕಾದಾಟ ತಪ್ಪಿಲ್ಲ ಅಂತ ಬೇಸರ ಆಗಿದೆ. ಒಬ್ಬರೂ ನಮ್ಮ ಶ್ರಮ ಅರ್ಥ ಮಾಡಿಕೊಂಡಿಲ್ಲವೆಂಬ ವೇದನೆ ಆಗಿದೆ. ಊರಿಗೆ ಉಪಕಾರ ಮಾಡಬಾರದು, ಹೆಣಕ್ಕೆ ಶೃಂಗಾರ ಮಾಡಬಾರದು ಅನ್ನೋ ಹಾಗೆ ಅವರಿಗೆ ಆಗಿದೆ ಅಂತ ಮುರಘಾ ಮಠದ ಸ್ವಾಮೀಜಿ ಹೇಳಿಕೆ ನೀಡಿದರು.

ಬಿಜೆಪಿಗೆ ನಷ್ಟ ವಿಜಯಪುರ: ನಿನ್ನೆ ಹಲವಾರು ಮಠಾಧೀಶರು ಸಿಎಂ ಭೇಟಿ ಮಾಡಿ ಬೆಂಬಲಿಸಿದ್ದಾರೆ. ವಿಜಯಪುರ ಹಾಗೂ ಸುತ್ತಮುತ್ತ ಜಿಲ್ಲೆಗಳ ಮಠಾಧೀಶರು ಯಡಿಯೂರಪ್ಪಗೆ ಬೆಂಬಲಿಸುತ್ತೇವೆ. ಸುಮಾರು 80 ರಿಂದ 90 ಮಠಾಧೀಶರು ತೆರಳಿ ಆಶೀರ್ವಾದ ಮಾಡುತ್ತೇವೆ. ಯಡಿಯೂರಪ್ಪ ಪರವಾಗಿ ಮಠಾಧೀಶರು ನಡೆಸುವ ಸಮಾವೇಶಕ್ಕೆ ತೆರಳುತ್ತೇವೆ. ಒಂದು ವೇಳೆ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಬಿಜೆಪಿಗೆ ನಷ್ಟವಾಗುತ್ತದೆ ಎಂದು ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

2013 ರಲ್ಲಿ ಆದಂತೆ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದು ಭವಿಷ್ಯ ನುಡಿದ ಸ್ವಾಮೀಜಿ, ಬಿಎಸ್​ವೈ ಬದಲಾವಣೆ ಮಾಡಬಾರದು. ಬಿಎಸ್​ವೈ ಹೊರತಾಗಿ ಲಿಂಗಾಯತ ನಾಯಕರಿದ್ದಾರೆ, ಆದರೆ ಇವರಷ್ಟು ಹಿರಿಯರಲ್ಲ. ಯಡಿಯೂರಪ್ಪ ಈಗ ರಾಜನಾಗಿದ್ದಾರೆ. ಅವರನ್ನು ಕೆಳಗಿಳಿಸಿ ಬೇರೆಯವರನ್ನು ರಾಜನನ್ನಾಗಿಸುವುದು ಸರಿಯಲ್ಲ ಅಂತ ಹೇಳಿದರು.

ಇದನ್ನೂ ಓದಿ

ವೀರಶೈವ ಸಮುದಾಯದವರಿಗೇ ಸಿಎಂ ಹುದ್ದೆ ನೀಡಬೇಕು; ಹೋರಾಟದ ಎಚ್ಚರಿಕೆ ನೀಡಿದ ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿ

ಸರ್ಕಾರಕ್ಕೆ ಪೂರ್ಣ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ಸಾಧ್ಯ; ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

(murugha math Swamiji warned that BJP would be troubled if Yediyurappa is removed from CM post)

Published On - 12:50 pm, Wed, 21 July 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?