AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನ ಗ್ಯಾರಂಟಿ, ಬಿಜೆಪಿಗೆ ದೊಡ್ಡ ಪೆಟ್ಟು: ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ

ಯಡಿಯೂರಪ್ಪ ಸಮರ್ಥ ಆಡಳಿತಗಾರ. ಇನ್ನೊಬ್ಬರ ಮನಸ್ಸು ನೋಯಿಸದ ವ್ಯಕ್ತಿ. ಅಂಥವರನ್ನು ಅವಧಿಗೆ ಮುನ್ನ ಬದಲಾಯಿಸುವುದು ಒಳ್ಳೆಯ ಸುದ್ದಿ ಅಲ್ಲ. ಕೇಂದ್ರದವರು ಯಾರೂ ಬಾಯಿ ಬಿಟ್ಟು ಬದಲಿಸುವ ವಿಚಾರ ಹೇಳಿಲ್ಲ.

ಯಡಿಯೂರಪ್ಪ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನ ಗ್ಯಾರಂಟಿ, ಬಿಜೆಪಿಗೆ ದೊಡ್ಡ ಪೆಟ್ಟು: ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ
ಮುರುಘಾ ಮಠದ ಸ್ವಾಮೀಜಿ
TV9 Web
| Updated By: sandhya thejappa|

Updated on:Jul 21, 2021 | 1:09 PM

Share

ಧಾರವಾಡ: ರಾಜ್ಯಕ್ಕೆ ಯಡಿಯೂರಪ್ಪನಂತಹ ಮುಖ್ಯಮಂತ್ರಿ ಸಿಗುವುದು ಕಷ್ಟ. ಬಿಎಸ್​ವೈ ಉಳಿಸಿಕೊಳ್ಳಲು ಪ್ರಯತ್ನ ಮಾಡಲೇಬೇಕು. ಯಡಿಯೂರಪ್ಪರನ್ನ ಕೈಬಿಟ್ಟರೆ 6 ತಿಂಗಳಲ್ಲಿ ಸರ್ಕಾರ ಪತನವಾಗುತ್ತದೆ. ಯಾವುದೇ ಪಕ್ಷದ ಸರ್ಕಾರ ಬಂದರೂ ಸರ್ಕಾರ ಪತನವಾಗುತ್ತದೆ. ಸಿಎಂ ಬದಲಿಸಿದರೆ ಬಿಜೆಪಿಗೆ ದೊಡ್ಡ ಪೆಟ್ಟು ಬೀಳುತ್ತದೆ. ಕರ್ನಾಟಕದಲ್ಲಿ ಬಿಜೆಪಿಗೆ ಯಡಿಯೂರಪ್ಪ ಅಡಿಪಾಯವಿದ್ದಂತೆ. ಇಂಥವರನ್ನು ಅವಧಿಗೆ ಮುನ್ನ ಬದಲಿಸುವುದು ಸರಿಯಲ್ಲ ಅಂತ ಧಾರವಾಡದ ಮುರುಘಾ ಮಠದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ಸಮರ್ಥ ಆಡಳಿತಗಾರ. ಇನ್ನೊಬ್ಬರ ಮನಸ್ಸು ನೋಯಿಸದ ವ್ಯಕ್ತಿ. ಅಂಥವರನ್ನು ಅವಧಿಗೆ ಮುನ್ನ ಬದಲಾಯಿಸುವುದು ಒಳ್ಳೆಯ ಸುದ್ದಿ ಅಲ್ಲ. ಕೇಂದ್ರದವರು ಯಾರೂ ಬಾಯಿ ಬಿಟ್ಟು ಬದಲಿಸುವ ವಿಚಾರ ಹೇಳಿಲ್ಲ. ಇದೊಂದು ಗಾಳಿ ಸುದ್ದಿ ಅಷ್ಟೇ. ಈ ಸುದ್ದಿ ತಿಳಿದು ಬದಲಾವಣೆ ಮಾಡಿದರೆ ಬಿಜೆಪಿ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಹಾಗಾಗಿ ಆ ಹುಚ್ಚಿಗೆ ಹೋಗಬಾರದು ಅಂತ ಸ್ವಾಮೀಜಿ ಹೇಳಿದರು.

ಲಿಂಗಾಯತರು ಬೆಳೆಯುವುದು ಕೆಲವರಿಗೆ ಅಸಮಾಧಾನ ಇದೆ. ಲಿಂಗಾಯತರು ಶಾಸಕರು ಮುಂದುವರಿಯಬಾರದು ಅಂತ ಕೆಲವರಿಗೆ ಇದೆ. ಲಿಂಗಾಯತರು ಸಿಎಂ ಆಗಬಾರದೆಂಬ ಅಸಮಾಧಾನವೂ ಕೆಲವರಿಗೆ ಇದೆ. ಇದಕ್ಕಾಗಿಯೇ ಒಳಗೊಳಗೆ ಅಸಮಾಧಾನದ ಹೊಗೆ ಇದೆ. ಇದಕ್ಕೆ ಕೆಲವರು ಕಿಡಿ ಹಾಕುತ್ತಿದ್ದಾರೆ. ಕೇಂದ್ರದವರು ಅದನ್ನು ಲೆಕ್ಕಿಸಬಾರದು. ವಿರೇಂದ್ರ ಪಾಟೀಲರಿಗೆ ಆದಂತೆ ಬಿಎಸ್​ವೈಗೆ ಆಗಬಾರದು ಎಂದು ಸ್ವಾಮೀಜಿ ತಿಳಿಸಿದರು.

ಪ್ರಾಣಕ್ಕೆ ಪ್ರಾಣ ಕೊಟ್ಟು ಬಿಜೆಪಿ ಬೆಳೆಸಿದವರು. ಅವರಿಂದಲೇ ದಕ್ಷಿಣ ಭಾರತದಲ್ಲಿ ಬಿಜೆಪಿ ಇದೆ. ಹೀಗಾಗಿ ಅವರನ್ನು ಬದಲಿಸುವುದಿಲ್ಲ. ಈ ಬೆಳವಣಿಗೆಗಳ ಬಗ್ಗೆ ಬಿಎಸ್​ವೈ ನೋವು ಮಾಡಿಕೊಂಡಿದ್ದಾರೆ. ಇಷ್ಟೇಲ್ಲ ಮಾಡಿ ಕಾದಾಟ ತಪ್ಪಿಲ್ಲ ಅಂತ ಬೇಸರ ಆಗಿದೆ. ಒಬ್ಬರೂ ನಮ್ಮ ಶ್ರಮ ಅರ್ಥ ಮಾಡಿಕೊಂಡಿಲ್ಲವೆಂಬ ವೇದನೆ ಆಗಿದೆ. ಊರಿಗೆ ಉಪಕಾರ ಮಾಡಬಾರದು, ಹೆಣಕ್ಕೆ ಶೃಂಗಾರ ಮಾಡಬಾರದು ಅನ್ನೋ ಹಾಗೆ ಅವರಿಗೆ ಆಗಿದೆ ಅಂತ ಮುರಘಾ ಮಠದ ಸ್ವಾಮೀಜಿ ಹೇಳಿಕೆ ನೀಡಿದರು.

ಬಿಜೆಪಿಗೆ ನಷ್ಟ ವಿಜಯಪುರ: ನಿನ್ನೆ ಹಲವಾರು ಮಠಾಧೀಶರು ಸಿಎಂ ಭೇಟಿ ಮಾಡಿ ಬೆಂಬಲಿಸಿದ್ದಾರೆ. ವಿಜಯಪುರ ಹಾಗೂ ಸುತ್ತಮುತ್ತ ಜಿಲ್ಲೆಗಳ ಮಠಾಧೀಶರು ಯಡಿಯೂರಪ್ಪಗೆ ಬೆಂಬಲಿಸುತ್ತೇವೆ. ಸುಮಾರು 80 ರಿಂದ 90 ಮಠಾಧೀಶರು ತೆರಳಿ ಆಶೀರ್ವಾದ ಮಾಡುತ್ತೇವೆ. ಯಡಿಯೂರಪ್ಪ ಪರವಾಗಿ ಮಠಾಧೀಶರು ನಡೆಸುವ ಸಮಾವೇಶಕ್ಕೆ ತೆರಳುತ್ತೇವೆ. ಒಂದು ವೇಳೆ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಬಿಜೆಪಿಗೆ ನಷ್ಟವಾಗುತ್ತದೆ ಎಂದು ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

2013 ರಲ್ಲಿ ಆದಂತೆ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದು ಭವಿಷ್ಯ ನುಡಿದ ಸ್ವಾಮೀಜಿ, ಬಿಎಸ್​ವೈ ಬದಲಾವಣೆ ಮಾಡಬಾರದು. ಬಿಎಸ್​ವೈ ಹೊರತಾಗಿ ಲಿಂಗಾಯತ ನಾಯಕರಿದ್ದಾರೆ, ಆದರೆ ಇವರಷ್ಟು ಹಿರಿಯರಲ್ಲ. ಯಡಿಯೂರಪ್ಪ ಈಗ ರಾಜನಾಗಿದ್ದಾರೆ. ಅವರನ್ನು ಕೆಳಗಿಳಿಸಿ ಬೇರೆಯವರನ್ನು ರಾಜನನ್ನಾಗಿಸುವುದು ಸರಿಯಲ್ಲ ಅಂತ ಹೇಳಿದರು.

ಇದನ್ನೂ ಓದಿ

ವೀರಶೈವ ಸಮುದಾಯದವರಿಗೇ ಸಿಎಂ ಹುದ್ದೆ ನೀಡಬೇಕು; ಹೋರಾಟದ ಎಚ್ಚರಿಕೆ ನೀಡಿದ ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿ

ಸರ್ಕಾರಕ್ಕೆ ಪೂರ್ಣ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ಸಾಧ್ಯ; ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

(murugha math Swamiji warned that BJP would be troubled if Yediyurappa is removed from CM post)

Published On - 12:50 pm, Wed, 21 July 21

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ