AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸ್ ಜತೆ ನಂಟು ಇರುವ ವ್ಯಕ್ತಿ ಮುಸ್ಲಿಂ ಸಮಾವೇಶದಲ್ಲಿ ಭಾಗಿ ಆರೋಪ: ಹೆಸರು ಬಹಿರಂಗಪಡಿಸುವಂತೆ ಯತ್ನಾಳ್​ಗೆ​ ಖಾದ್ರಿ ಸವಾಲ್

Hubballi Muslim convention: ಐಸಿಎಸ್ ಉಗ್ರ ಸಂಘಟನೆ ಜೊತೆ ನಂಟು ಹೊಂದಿರುವ ವ್ಯಕ್ತಿಯೋರ್ವ ಡಿಸೆಂಬರ್ 4ರಂದು ಹುಬ್ಬಳ್ಳಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಭಾಗಿಯಾಗಿದ್ದ ಎನ್ನುವ ಆರೋಪವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಆರೋಪಿಸಿದ್ದಾರೆ. ಇದೀಗ ಇದಕ್ಕೆ ಕಾರ್ಯಕ್ರಮದ ಆಯೋಜಕ, ಧರ್ಮಗುರು ಸೈಯದ್‌ ತಾಜುದ್ದೀನ್ ಎನ್ನುವ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಅವರ ಹೆಸರು ಬಹಿರಂಗಪಡಿಸುವಂತೆ ಯತ್ನಾಳ್​ಗೆ ಸವಾಲು ಹಾಕಿದ್ದಾರೆ.

ಐಸಿಸ್ ಜತೆ ನಂಟು ಇರುವ ವ್ಯಕ್ತಿ ಮುಸ್ಲಿಂ ಸಮಾವೇಶದಲ್ಲಿ ಭಾಗಿ ಆರೋಪ: ಹೆಸರು ಬಹಿರಂಗಪಡಿಸುವಂತೆ ಯತ್ನಾಳ್​ಗೆ​ ಖಾದ್ರಿ ಸವಾಲ್
ಯತ್ನಾಳ್, ಸೈಯದ್‌ ತಾಜುದ್ದೀನ್ ಖಾದ್ರಿ
ಶಿವಕುಮಾರ್ ಪತ್ತಾರ್
| Edited By: |

Updated on: Dec 06, 2023 | 1:59 PM

Share

ಹುಬ್ಬಳ್ಳಿ, (ಡಿಸೆಂಬರ್ 06): ಮೊನ್ನೇ ಅಂದರೆ ಡಿಸೆಂಬರ್ 4ರಂದು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ(Hubballi Muslim convention) ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ವ್ಯಕ್ತಿ ಭಾಗವಹಿಸಿದ್ದು, ಆತನ ಜತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಆರೋಪಿಸಿದ್ದಾರೆ. ಇದಕ್ಕೆ ಇದೀಗ ಸ್ವತಃ ಕಾರ್ಯಕ್ರಮ ಆಯೋಜಕ, ಬಾಷಾಪೀರ್ ದರ್ಗಾದ ಧರ್ಮಗುರು ಸೈಯದ್‌ ತಾಜುದ್ದೀನ್ ಖಾದ್ರಿ ಸ್ಪಷ್ಟನೆ ನೀಡಿದ್ದು, ಐಸಿಸ್​ ಉಗ್ರರ ಜತೆ ಯಾರೆಲ್ಲಾ ನಂಟು ಇದ್ದರೆಂಬುದನ್ನು ಹೇಳಲಿ. ಉಗ್ರರ ಜತೆಗಿನ ನಂಟು ಇದ್ದವರ ಹೆಸರನ್ನು ಬಹಿರಂಗಪಡಿಸಲಿ ಎಂದು ಯತ್ನಾಳ್​ಗೆ ಸವಾಲು ಹಾಕಿದರು.

ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಸೈಯದ್‌ ತಾಜುದ್ದೀನ್ ಖಾದ್ರಿ, ಅಂದು ಸಮಾವೇಶಕ್ಕೆ 150ಕ್ಕೂ ಹೆಚ್ಚು ಸೂಫಿಗಳಿಗೆ ಆಹ್ವಾನ ನೀಡಲಾಗಿತ್ತು. 100ಕ್ಕೂ ಹೆಚ್ಚು ಧರ್ಮ ಗುರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಯಾರೊಬ್ಬರೂ ಐಸಿಸ್​ ಉಗ್ರರ ಜತೆ ನಂಟು ಹೊಂದಿದ್ದವರು ಇಲ್ಲ. ಪೊಲೀಸ್ ಇಲಾಖೆ ಸೂಚನೆ ಮೇರೆಗೆ ವೇದಿಕೆಯ ಮೇಲೆ 25 ಜನರಿಗೆ ಅವಕಾಶ ನೀಡಲಾಗಿತ್ತು. ಯಾರೆಲ್ಲಾ ಭಾಗವಹಿಸಲಿದ್ದಾರೆಂಬ ಎಲ್ಲಾ ಮಾಹಿತಿಯನ್ನು ಪೊಲೀಸ್ ಇಲಾಖೆ, ಧಾರವಾಡ ಜಿಲ್ಲಾಡಳಿತಕ್ಕೆ ನಾವು ನೀಡಿದ್ದೆವು. ಐಸಿಸ್​ ಉಗ್ರರ ಜತೆ ಯಾರೆಲ್ಲಾ ನಂಟು ಇದ್ದರೆಂಬುದನ್ನು ಯತ್ನಾಳ್ ಹೇಳಲಿ ಎಂದರು.

ಇದನ್ನೂ ಓದಿ: ಮುಸ್ಲಿಂ ಸಮಾವೇಶ: ಐಸಿಸ್ ಸಂಪರ್ಕ ಇರುವವನ ಜತೆ ವೇದಿಕೆ ಹಂಚಿಕೊಂಡ್ರಾ ಸಿದ್ದರಾಮಯ್ಯ?

ಉಗ್ರರ ಜತೆಗಿನ ನಂಟು ಇದ್ದವರ ಹೆಸರನ್ನು ಶಾಸಕ ಯತ್ನಾಳ್ ಬಹಿರಂಗಪಡಿಸಲಿ ಸವಾಲು ಹಾಕಿದ ಸೈಯದ್‌ ತಾಜುದ್ದೀನ್ ಖಾದ್ರಿ, ಒಂದು ವೇಳೆ ಐಎಸ್ ಉಗ್ರರ ಜೊತೆಗೆ ನಂಟು ಇದ್ದಿದ್ದು ಆದ್ರೆ ಗುಪ್ತ ಇಲಾಖೆಗೆ ಮಾಹಿತಿ ಇರಬೇಕಾಗಿತ್ತು. ನಾವು ಎಲ್ಲಾ ತನಿಖೆಗೆ ಸಿದ್ಧರಾಗಿದ್ದೇವೆ. ಸರಿಯಾದ ರೀತಿಯಲ್ಲಿ ತನಿಖೆ ಆಗಲೆಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ